ಬ್ರೇಕಿಂಗ್ ನ್ಯೂಸ್
20-08-22 06:53 pm HK News Desk ಕರ್ನಾಟಕ
ಮಡಿಕೇರಿ, ಆಗಸ್ಟ್ 2: ತಾಕತ್ತಿದ್ದರೆ ಸಿದ್ದರಾಮಯ್ಯ ಮಡಿಕೇರಿ ಕ್ಷೇತ್ರದಿಂದ ಮುಂದಿನ ಚುನಾವಣೆಗೆ ಸ್ಪಧಿ೯ಸಲಿ. ಠೇವಣಿ ಕಳೆದುಕೊಳ್ಳುವಂತೆ ಮಾಡಿ ಕೊಡಗಿನಲ್ಲಿ ಬಿಜೆಪಿ ತಾಕತ್ತು ತೋರುತ್ತೇವೆ ಎಂದು ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಸವಾಲು ಹಾಕಿದ್ದಾರೆ.
ಆ.26 ರಂದು ಕಾಂಗ್ರೆಸ್ ಮಡಿಕೇರಿಯಲ್ಲಿ ಸಮಾವೇಶ ಹಮ್ಮಿಕೊಂಡಿರುವುದು ಟಿಪ್ಪು ಕೈಗೊಂಡಿದ್ದ ದಂಡಯಾತ್ರೆಗೆ ಸಮಾನ. ಟಿಪ್ಪು 32 ಬಾರಿ ಕೊಡಗಿನಲ್ಲಿ ಆಕ್ರಮಣ ಮಾಡಿ ಕೊಡಗನ್ನು ನಾಶ ಮಾಡಿದ್ದ. ಈಗ ಟಿಪ್ಪು ಸಂತತಿಯ ಓಲೈಕೆಗಾಗಿ ಕಾಂಗ್ರೆಸ್ ಕೊಡಗಿಗೆ 33 ನೇ ಬಾರಿಗೆ ಬರುತ್ತಿದೆ. ಈ ಬಾರಿ ಕೊಡಗಿನ ಜನ ಟಿಪ್ಪು ಬೆಂಬಲಿಗರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಶಾಸಕ ಕೆಜಿ ಬೋಪಯ್ಯ ಹೇಳಿದ್ದಾರೆ.
ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದ ಪ್ರಕರಣದ ಹಿನ್ನೆಲೆಯಲ್ಲಿ ಶಾಸಕರಾದ ಕೆಜಿ ಬೋಪಯ್ಯ, ಅಪ್ಪಚ್ಚುರಂಜನ್, ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ ಜಂಟಿ ಪತ್ರಿಕಾಗೋಷ್ಠಿ ನಡೆಸಿ ವಾಗ್ದಾಳಿ ನಡೆಸಿದ್ದಾರೆ. ಮೊಟ್ಟೆ ಎಸೆದವರು ಬಿಜೆಪಿಯವರಾಗಿದ್ದರೆ ಖಂಡಿತಾ ಪಕ್ಷದಿಂದ ಅಮಾನತ್ತು ಮಾಡುತ್ತೇವೆ. ಮೊಟ್ಟೆ ಎಸೆದವರು ಕಾಂಗ್ರೆಸ್ ಬೆಂಬಲಿತ ಎಂಬುದು ಅನೇಕರಿಗೆ ಗೊತ್ತಿದೆ. ಪೊಲೀಸರ ತನಿಖೆಯಲ್ಲಿ ಸತ್ಯ ತಿಳಿಯಲಿದೆ. ದನದ ಮಾಂಸ ಕೊಡವರು ತಿನ್ನುತ್ತಾರೆ ಎಂದು ಹೇಳಿಕೆ ನೀಡಿದ್ದ ಸಿದ್ದರಾಮಯ್ಯ, ಟಿಪ್ಪು ಜಯಂತಿ ಆಚರಣೆಗೆ ಕಾರಣರಾಗಿದ್ದ ಸಿದ್ದರಾಮಯ್ಯ ವಿರುದ್ದ ಕೊಡಗಿನಲ್ಲಿ ತೀವ್ರ ಆಕ್ರೋಶವಿದೆ. ಹೀಗಾಗಿಯೇ ಮೊನ್ನೆ ಕಪ್ಪು ಬಾವುಟ ಹಿಡಿದು ಜನರು ಪ್ರತಿಭಟನೆ ನಡೆಸಿದ್ದಾರೆ. ಇದು ಬಿಟ್ಟು ಮೊಟ್ಟೆ ಎಸೆದ ಪ್ರಕರಣದಲ್ಲಿ ಬಿಜೆಪಿ ಕಾಯ೯ಕತ೯ರು ಪಾಲ್ಗೊಂಡಿಲ್ಲ ಎಂದು ಶಾಸಕ ಅಪ್ಪಚ್ಚು ರಂಜನ್ ಹೇಳಿದ್ದಾರೆ.
ಮಡಿಕೇರಿಯ ಗಾಂಧಿ ಮೈದಾನದಲ್ಲಿ ಆ.26 ರಂದು ಶುಕ್ರವಾರ ಬೆಳಗ್ಗೆ 11 ಗಂಟೆಗೆ ಜನಜಾಗೃತಿ ಸಮಾವೇಶ ನಡೆಸುತ್ತೇವೆ. ಜಿಲ್ಲೆಯ ಮೂಲೆ ಮೂಲೆಗಳಿಂದ ಒಂದು ಲಕ್ಷ ಜನರನ್ನು ಸೇರಿಸುವುದು ಸಮಾವೇಶದ ಗುರಿ. ಅಂದು ಲಕ್ಷಾಂತರ ಜನ ಮಡಿಕೇರಿಯಲ್ಲಿ ಸೇರುತ್ತಾರೆ. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಪರಿಸ್ಥಿತಿ ನಿಭಾಯಿಸುವ ಹೊಣೆ ನೀಡಲಾಗುವುದು. ಕೊಡಗು ಪೊಲೀಸ್ ವರಿಷ್ಟಾಧಿಕಾರಿ ಕ್ಯಾಪ್ಟನ್ ಅಯ್ಯಪ್ಪ ಉತ್ತಮ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಆರೋಪ ಮಾಡುತ್ತೆ ಎಂದು ಅವರನ್ನು ಯಾವುದೇ ಕಾರಣಕ್ಕೂ ವಗಾ೯ಯಿಸುವುದಿಲ್ಲ. ಕೊಡಗಿನ ಪೊಲೀಸರ ಮನಸ್ಥೈಯ೯ ಕುಗ್ಗಿಸುವ ಕೆಲಸವನ್ನು ಕಾಂಗ್ರೆಸ್ ಮುಖಂಡರು ಮಾಡುತ್ತಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ ಹೇಳಿದ್ದಾರೆ.
If Siddaramaiah has guts let me contest from Madikeri slams Appachu Ranjan
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm