ಬ್ರೇಕಿಂಗ್ ನ್ಯೂಸ್
20-08-22 06:53 pm HK News Desk ಕರ್ನಾಟಕ
ಮಡಿಕೇರಿ, ಆಗಸ್ಟ್ 2: ತಾಕತ್ತಿದ್ದರೆ ಸಿದ್ದರಾಮಯ್ಯ ಮಡಿಕೇರಿ ಕ್ಷೇತ್ರದಿಂದ ಮುಂದಿನ ಚುನಾವಣೆಗೆ ಸ್ಪಧಿ೯ಸಲಿ. ಠೇವಣಿ ಕಳೆದುಕೊಳ್ಳುವಂತೆ ಮಾಡಿ ಕೊಡಗಿನಲ್ಲಿ ಬಿಜೆಪಿ ತಾಕತ್ತು ತೋರುತ್ತೇವೆ ಎಂದು ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಸವಾಲು ಹಾಕಿದ್ದಾರೆ.
ಆ.26 ರಂದು ಕಾಂಗ್ರೆಸ್ ಮಡಿಕೇರಿಯಲ್ಲಿ ಸಮಾವೇಶ ಹಮ್ಮಿಕೊಂಡಿರುವುದು ಟಿಪ್ಪು ಕೈಗೊಂಡಿದ್ದ ದಂಡಯಾತ್ರೆಗೆ ಸಮಾನ. ಟಿಪ್ಪು 32 ಬಾರಿ ಕೊಡಗಿನಲ್ಲಿ ಆಕ್ರಮಣ ಮಾಡಿ ಕೊಡಗನ್ನು ನಾಶ ಮಾಡಿದ್ದ. ಈಗ ಟಿಪ್ಪು ಸಂತತಿಯ ಓಲೈಕೆಗಾಗಿ ಕಾಂಗ್ರೆಸ್ ಕೊಡಗಿಗೆ 33 ನೇ ಬಾರಿಗೆ ಬರುತ್ತಿದೆ. ಈ ಬಾರಿ ಕೊಡಗಿನ ಜನ ಟಿಪ್ಪು ಬೆಂಬಲಿಗರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಶಾಸಕ ಕೆಜಿ ಬೋಪಯ್ಯ ಹೇಳಿದ್ದಾರೆ.
ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದ ಪ್ರಕರಣದ ಹಿನ್ನೆಲೆಯಲ್ಲಿ ಶಾಸಕರಾದ ಕೆಜಿ ಬೋಪಯ್ಯ, ಅಪ್ಪಚ್ಚುರಂಜನ್, ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ ಜಂಟಿ ಪತ್ರಿಕಾಗೋಷ್ಠಿ ನಡೆಸಿ ವಾಗ್ದಾಳಿ ನಡೆಸಿದ್ದಾರೆ. ಮೊಟ್ಟೆ ಎಸೆದವರು ಬಿಜೆಪಿಯವರಾಗಿದ್ದರೆ ಖಂಡಿತಾ ಪಕ್ಷದಿಂದ ಅಮಾನತ್ತು ಮಾಡುತ್ತೇವೆ. ಮೊಟ್ಟೆ ಎಸೆದವರು ಕಾಂಗ್ರೆಸ್ ಬೆಂಬಲಿತ ಎಂಬುದು ಅನೇಕರಿಗೆ ಗೊತ್ತಿದೆ. ಪೊಲೀಸರ ತನಿಖೆಯಲ್ಲಿ ಸತ್ಯ ತಿಳಿಯಲಿದೆ. ದನದ ಮಾಂಸ ಕೊಡವರು ತಿನ್ನುತ್ತಾರೆ ಎಂದು ಹೇಳಿಕೆ ನೀಡಿದ್ದ ಸಿದ್ದರಾಮಯ್ಯ, ಟಿಪ್ಪು ಜಯಂತಿ ಆಚರಣೆಗೆ ಕಾರಣರಾಗಿದ್ದ ಸಿದ್ದರಾಮಯ್ಯ ವಿರುದ್ದ ಕೊಡಗಿನಲ್ಲಿ ತೀವ್ರ ಆಕ್ರೋಶವಿದೆ. ಹೀಗಾಗಿಯೇ ಮೊನ್ನೆ ಕಪ್ಪು ಬಾವುಟ ಹಿಡಿದು ಜನರು ಪ್ರತಿಭಟನೆ ನಡೆಸಿದ್ದಾರೆ. ಇದು ಬಿಟ್ಟು ಮೊಟ್ಟೆ ಎಸೆದ ಪ್ರಕರಣದಲ್ಲಿ ಬಿಜೆಪಿ ಕಾಯ೯ಕತ೯ರು ಪಾಲ್ಗೊಂಡಿಲ್ಲ ಎಂದು ಶಾಸಕ ಅಪ್ಪಚ್ಚು ರಂಜನ್ ಹೇಳಿದ್ದಾರೆ.
ಮಡಿಕೇರಿಯ ಗಾಂಧಿ ಮೈದಾನದಲ್ಲಿ ಆ.26 ರಂದು ಶುಕ್ರವಾರ ಬೆಳಗ್ಗೆ 11 ಗಂಟೆಗೆ ಜನಜಾಗೃತಿ ಸಮಾವೇಶ ನಡೆಸುತ್ತೇವೆ. ಜಿಲ್ಲೆಯ ಮೂಲೆ ಮೂಲೆಗಳಿಂದ ಒಂದು ಲಕ್ಷ ಜನರನ್ನು ಸೇರಿಸುವುದು ಸಮಾವೇಶದ ಗುರಿ. ಅಂದು ಲಕ್ಷಾಂತರ ಜನ ಮಡಿಕೇರಿಯಲ್ಲಿ ಸೇರುತ್ತಾರೆ. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಪರಿಸ್ಥಿತಿ ನಿಭಾಯಿಸುವ ಹೊಣೆ ನೀಡಲಾಗುವುದು. ಕೊಡಗು ಪೊಲೀಸ್ ವರಿಷ್ಟಾಧಿಕಾರಿ ಕ್ಯಾಪ್ಟನ್ ಅಯ್ಯಪ್ಪ ಉತ್ತಮ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಆರೋಪ ಮಾಡುತ್ತೆ ಎಂದು ಅವರನ್ನು ಯಾವುದೇ ಕಾರಣಕ್ಕೂ ವಗಾ೯ಯಿಸುವುದಿಲ್ಲ. ಕೊಡಗಿನ ಪೊಲೀಸರ ಮನಸ್ಥೈಯ೯ ಕುಗ್ಗಿಸುವ ಕೆಲಸವನ್ನು ಕಾಂಗ್ರೆಸ್ ಮುಖಂಡರು ಮಾಡುತ್ತಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ ಹೇಳಿದ್ದಾರೆ.
If Siddaramaiah has guts let me contest from Madikeri slams Appachu Ranjan
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm