ಬ್ರೇಕಿಂಗ್ ನ್ಯೂಸ್
22-08-22 10:08 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 22: ಕೋಲಾರದ ಸೈಬರ್ ಕ್ರೈಮ್ ಪೊಲೀಸ್ ಇನ್ಸ್ ಪೆಕ್ಟರ್ ಆಂಜಿನಪ್ಪ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಬ್ ರಿಜಿಸ್ಟ್ರಾರ್ ಶ್ರೀನಾಥ್, ಕಾಲೇಜೊಂದರಲ್ಲಿ ಪ್ರೊಫೆಸರ್ ಆಗಿರುವ ರಮೇಶ್ ಜೈಪುರದಲ್ಲಿ ವೀಕೆಂಡ್ ಪಾರ್ಟಿಯಲ್ಲಿ ಪಾಲ್ಗೊಂಡು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಇವರಲ್ಲದೆ, ಕೋಲಾರ ಜಿಲ್ಲೆಯ ಒಟ್ಟು ಏಳು ಮಂದಿ ಬಂಧನಕ್ಕೀಡಾಗಿದ್ದಾರೆ.
ಕೋಲಾರದ ಟೊಮೆಟೋ ವ್ಯಾಪಾರಿ ಛತ್ರಕೋಡಿಹಳ್ಳಿಯ ಸುಧಾಕರ್, ಕೋಲಾರ ನಗರಸಭೆ ನಾಮನಿರ್ದೇಶಿತ ಸದಸ್ಯ ಸತೀಶ್, ಆರ್ ಟಿಓದಲ್ಲಿ ಬ್ರೋಕರ್ ಆಗಿ ಕೆಲಸ ಮಾಡುತ್ತಿರುವ ಶಬರೀಶ ಎಂಬವರು ಕೂಡ ಬಂಧನಕ್ಕೀಡಾದವರಲ್ಲಿದ್ದಾರೆ. ಜೈಪುರದ ಸಾಯಿಪುರ ಫಾರ್ಮ್ ನಲ್ಲಿ ಹೈಪ್ರೊಫೈಲ್ ವ್ಯಕ್ತಿಗಳು ಪಾಲ್ಗೊಂಡಿದ್ದ ಜೂಜಾಟ, ಪಾರ್ಟಿ ನಡೆಯುತ್ತಿತ್ತು. ದೆಹಲಿ ಮೂಲದವರು ಜೈಪುರದಲ್ಲಿ ವೀಕೆಂಡ್ ಪಾರ್ಟಿ ಆಯೋಜಿಸಿದ್ದು ಪ್ರತಿ ವ್ಯಕ್ತಿ ಎರಡು ಲಕ್ಷ ರೂ. ಪಾವತಿಸಿ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು. ಪಾರ್ಟಿಗೆ ದಾಳಿ ನಡೆಸಿದ ಪೊಲೀಸರು ಒಟ್ಟು 84 ಮಂದಿಯನ್ನು ಬಂಧಿಸಿದ್ದಾರೆ. ಈ ಪೈಕಿ ಏಳು ಮಂದಿ ಕೋಲಾರದವರು ಅನ್ನುವ ಮಾಹಿತಿ ಸಿಕ್ಕಿದೆ.
13 ಮಹಿಳೆಯರು, 14 ಲಕ್ಸುರಿ ಕಾರುಗಳು, ಕ್ಯಾಸಿನೋ ಟೇಬಲ್ ಗಳು, 23 ಲಕ್ಷ ರೂಪಾಯಿ ಹಣವನ್ನು ಜೂಜಾಟ ಸ್ಥಳದಿಂದ ವಶಕ್ಕೆ ಪಡೆಯಲಾಗಿದೆ. ದೆಹಲಿ ಮೂಲದ ನರೇಶ್ ಮಲ್ಹೋತ್ರಾ ಅಲಿಯಾಸ್ ರಾಹುಲ್ ಮತ್ತು ಆತನ ಮಗ ಮನ್ವೇಶ್ ಸೇರಿ ಪಾರ್ಟಿ ಆಯೋಜಿಸಿದ್ದರು. ಮಹಾರಾಷ್ಟ್ರ, ತೆಲಂಗಾಣ, ಕರ್ನಾಟಕ, ದೆಹಲಿ, ಹರ್ಯಾಣ ಸೇರಿದಂತೆ ಹಲವು ರಾಜ್ಯಗಳ ಹೈಪ್ರೊಫೈಲ್ ವ್ಯಕ್ತಿಗಳು ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು. ಶನಿವಾರ ರಾತ್ರಿ ಪಾರ್ಟಿ ಆಯೋಜಿಸಿದ್ದು ಭಾನುವಾರ ಬೆಳಗ್ಗೆ ಜೈಪುರ್ ಎಸಿಪಿ ಅಜಯ್ ಲಾಂಬಾ ಖಚಿತ ಮಾಹಿತಿ ಮೇರೆಗೆ ಪೊಲೀಸರೊಂದಿಗೆ ದಾಳಿ ನಡೆಸಿದ್ದರು. ಪಾರ್ಟಿಯಲ್ಲಿ ಭಾಗವಹಿಸಿದವರಲ್ಲಿ ಹೆಚ್ಚಿನ ಮಂದಿ ಅಧಿಕಾರಿ ವರ್ಗದವರೇ ಆಗಿದ್ದು, ಜೂಜಾಟದಲ್ಲಿ ಪಾಲ್ಗೊಂಡು ಮುಜುಗರಕ್ಕೀಡಾಗಿದ್ದಾರೆ.
As many as 84 people, including Karnataka Kolar Police inspector and 13 women, have been arrested from a farmhouse in Sahipura under Jaisinghpura police station where a rave party was underway. The arrests were made after a crime branch team of Jaipur police along with Jaisinghpura police raided the farmhouse.
09-08-25 10:12 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
09-08-25 10:53 pm
Mangalore Correspondent
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲೆತ್ನಿಸುತ್ತಿರುವ...
09-08-25 08:10 pm
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm