ಬ್ರೇಕಿಂಗ್ ನ್ಯೂಸ್
22-08-22 10:08 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 22: ಕೋಲಾರದ ಸೈಬರ್ ಕ್ರೈಮ್ ಪೊಲೀಸ್ ಇನ್ಸ್ ಪೆಕ್ಟರ್ ಆಂಜಿನಪ್ಪ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಬ್ ರಿಜಿಸ್ಟ್ರಾರ್ ಶ್ರೀನಾಥ್, ಕಾಲೇಜೊಂದರಲ್ಲಿ ಪ್ರೊಫೆಸರ್ ಆಗಿರುವ ರಮೇಶ್ ಜೈಪುರದಲ್ಲಿ ವೀಕೆಂಡ್ ಪಾರ್ಟಿಯಲ್ಲಿ ಪಾಲ್ಗೊಂಡು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಇವರಲ್ಲದೆ, ಕೋಲಾರ ಜಿಲ್ಲೆಯ ಒಟ್ಟು ಏಳು ಮಂದಿ ಬಂಧನಕ್ಕೀಡಾಗಿದ್ದಾರೆ.
ಕೋಲಾರದ ಟೊಮೆಟೋ ವ್ಯಾಪಾರಿ ಛತ್ರಕೋಡಿಹಳ್ಳಿಯ ಸುಧಾಕರ್, ಕೋಲಾರ ನಗರಸಭೆ ನಾಮನಿರ್ದೇಶಿತ ಸದಸ್ಯ ಸತೀಶ್, ಆರ್ ಟಿಓದಲ್ಲಿ ಬ್ರೋಕರ್ ಆಗಿ ಕೆಲಸ ಮಾಡುತ್ತಿರುವ ಶಬರೀಶ ಎಂಬವರು ಕೂಡ ಬಂಧನಕ್ಕೀಡಾದವರಲ್ಲಿದ್ದಾರೆ. ಜೈಪುರದ ಸಾಯಿಪುರ ಫಾರ್ಮ್ ನಲ್ಲಿ ಹೈಪ್ರೊಫೈಲ್ ವ್ಯಕ್ತಿಗಳು ಪಾಲ್ಗೊಂಡಿದ್ದ ಜೂಜಾಟ, ಪಾರ್ಟಿ ನಡೆಯುತ್ತಿತ್ತು. ದೆಹಲಿ ಮೂಲದವರು ಜೈಪುರದಲ್ಲಿ ವೀಕೆಂಡ್ ಪಾರ್ಟಿ ಆಯೋಜಿಸಿದ್ದು ಪ್ರತಿ ವ್ಯಕ್ತಿ ಎರಡು ಲಕ್ಷ ರೂ. ಪಾವತಿಸಿ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು. ಪಾರ್ಟಿಗೆ ದಾಳಿ ನಡೆಸಿದ ಪೊಲೀಸರು ಒಟ್ಟು 84 ಮಂದಿಯನ್ನು ಬಂಧಿಸಿದ್ದಾರೆ. ಈ ಪೈಕಿ ಏಳು ಮಂದಿ ಕೋಲಾರದವರು ಅನ್ನುವ ಮಾಹಿತಿ ಸಿಕ್ಕಿದೆ.


13 ಮಹಿಳೆಯರು, 14 ಲಕ್ಸುರಿ ಕಾರುಗಳು, ಕ್ಯಾಸಿನೋ ಟೇಬಲ್ ಗಳು, 23 ಲಕ್ಷ ರೂಪಾಯಿ ಹಣವನ್ನು ಜೂಜಾಟ ಸ್ಥಳದಿಂದ ವಶಕ್ಕೆ ಪಡೆಯಲಾಗಿದೆ. ದೆಹಲಿ ಮೂಲದ ನರೇಶ್ ಮಲ್ಹೋತ್ರಾ ಅಲಿಯಾಸ್ ರಾಹುಲ್ ಮತ್ತು ಆತನ ಮಗ ಮನ್ವೇಶ್ ಸೇರಿ ಪಾರ್ಟಿ ಆಯೋಜಿಸಿದ್ದರು. ಮಹಾರಾಷ್ಟ್ರ, ತೆಲಂಗಾಣ, ಕರ್ನಾಟಕ, ದೆಹಲಿ, ಹರ್ಯಾಣ ಸೇರಿದಂತೆ ಹಲವು ರಾಜ್ಯಗಳ ಹೈಪ್ರೊಫೈಲ್ ವ್ಯಕ್ತಿಗಳು ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು. ಶನಿವಾರ ರಾತ್ರಿ ಪಾರ್ಟಿ ಆಯೋಜಿಸಿದ್ದು ಭಾನುವಾರ ಬೆಳಗ್ಗೆ ಜೈಪುರ್ ಎಸಿಪಿ ಅಜಯ್ ಲಾಂಬಾ ಖಚಿತ ಮಾಹಿತಿ ಮೇರೆಗೆ ಪೊಲೀಸರೊಂದಿಗೆ ದಾಳಿ ನಡೆಸಿದ್ದರು. ಪಾರ್ಟಿಯಲ್ಲಿ ಭಾಗವಹಿಸಿದವರಲ್ಲಿ ಹೆಚ್ಚಿನ ಮಂದಿ ಅಧಿಕಾರಿ ವರ್ಗದವರೇ ಆಗಿದ್ದು, ಜೂಜಾಟದಲ್ಲಿ ಪಾಲ್ಗೊಂಡು ಮುಜುಗರಕ್ಕೀಡಾಗಿದ್ದಾರೆ.
As many as 84 people, including Karnataka Kolar Police inspector and 13 women, have been arrested from a farmhouse in Sahipura under Jaisinghpura police station where a rave party was underway. The arrests were made after a crime branch team of Jaipur police along with Jaisinghpura police raided the farmhouse.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm