ಬ್ರೇಕಿಂಗ್ ನ್ಯೂಸ್
23-08-22 12:06 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 23 : ವಾರದ ಅಂತರದಲ್ಲಿ ಮತ್ತೊಂದು ದುರಂತಕ್ಕೆ ರಾಜಧಾನಿ ಬೆಂಗಳೂರು ಸಾಕ್ಷಿಯಾಗಿದೆ. ನೀರಿನ ಟಬ್ ನಲ್ಲಿ ಹಾಲುಗಲ್ಲದ ಮಗುವನ್ನ ಮುಳುಗಿಸಿ ಹತ್ಯೆಗೈದ ತಾಯಿ ಆತ್ಮಹತ್ಯೆಗೆ ಯತ್ನಿಸಿ ಕೋಮಾ ಸ್ಥಿತಿಗೆ ಹೋಗಿರುವ ಘಟನೆ ಬೆಳಕಿಗೆ ಬಂದಿದೆ.
ಸೋಮವಾರ ಬೆಳಗ್ಗೆ ಎಚ್ ಎಎಲ್ ಠಾಣೆ ವ್ಯಾಪ್ತಿಯ ವಿಭೂತಿಪುರ ಎಂಬಲ್ಲಿ ಘಟನೆ ನಡೆದಿದೆ. ಮೂರು ವರ್ಷದ ಮಗು ಸಂಯುಕ್ತಾಳನ್ನ ನೀರಿನ ಟಬ್ ನಲ್ಲಿ ಮುಳುಗಿಸಿ ಸಾಯಿಸಿದ ತಾಯಿ ಗಾಯತ್ರಿದೇವಿ ಬಳಿಕ ಫ್ಯಾನಿಗೆ ನೇಣು ಹಾಕ್ಕೊಂಡಿದ್ದಾಳೆ. ಐದು ವರ್ಷಗಳ ಹಿಂದೆ ಮದುವೆಯಾಗಿದ್ದ ತಮಿಳುನಾಡು ಮೂಲದ ನರೇಂದ್ರನ್ ಮತ್ತು ಗಾಯತ್ರಿದೇವಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ನರೇಂದ್ರನ್ ಬೆಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡಿಕೊಂಡಿದ್ದರು. ಕುಟುಂಬ ಕಲಹದಿಂದ 20 ದಿನಗಳ ಹಿಂದೆ ನರೇಂದ್ರನ್ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದರು. ತಮಿಳುನಾಡಿನ ಈರೋಡ್ ನಲ್ಲಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಇದರ ಕಾರ್ಯ ನಿಮಿತ್ತ ಊರಿಗೆ ಹೋಗಿದ್ದ ನರೇಂದ್ರನ್, ನಿನ್ನೆ ಬೆಳಗ್ಗೆ ವಾಪಸ್ ಆಗಿದ್ದರು. ಮನೆಯಲ್ಲಿ ಮಗು ಮತ್ತು ಪತ್ನಿ ಮಾತ್ರ ಇದ್ದರು. ಮನೆಗೆ ಬಂದು ಎಷ್ಟೇ ಮನೆ ಬಾಗಿಲು ತಟ್ಟಿದರೂ ಬಾಗಿಲು ತೆರೆಯದ್ದರಿಂದ ಆತಂಕಗೊಂಡು ಡೋರ್ ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಮೂರುವರೆ ವರ್ಷದ ಮಗುವನ್ನ ನೀರಿನ ಬಕೆಟ್ ನಲ್ಲಿ ಮುಳುಗಿಸಿ ಹತ್ಯೆ ಮಾಡಿದ್ದ ಪತ್ನಿ ಗಾಯತ್ರಿ ಫ್ಯಾನಿಗೆ ನೇಣು ಬಿಗಿದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಳು. ಗಾಯತ್ರಿಯನ್ನು ಬಳಿಕ ಸಮೀಪದ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದು ವೈದ್ಯರು ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ.
ಮನೆಯಲ್ಲಿ ಡೆತ್ ನೋಟ್ ಪತ್ತೆ
ಮಗುವನ್ನ ಹತ್ಯೆ ಮಾಡೋದಕ್ಕೂ ಮುನ್ನ ಗಾಯತ್ರಿದೇವಿ ಡೆತ್ ನೋಟ್ ಬರೆದಿಟ್ಟಿದ್ದಾಳೆ. ತನಗೆ ಬಂದಿರುವ ಸಂಕಷ್ಟವನ್ನ ನಿಭಾಯಿಸುವ ಶಕ್ತಿ ನನ್ನಲ್ಲಿ ಇಲ್ಲ. ನಾನು ಸತ್ತರೆ ಮಗುವನ್ನು ನೋಡಿಕೊಳ್ಳಲು ಯಾರು ಇಲ್ಲ.. ಹೀಗಾಗಿ ಮಗುವನ್ನ ಸಾಯಿಸಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಡೆತ್ ನೋಟ್ ನಲ್ಲಿ ಉಲ್ಲೇಖಿಸಲಾಗಿದೆ. ಹೆಚ್ ಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bangalore Mother kills baby by drowning it in the water filled bucket, attempts suicide. Mother is said to be in comma.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm