ಬ್ರೇಕಿಂಗ್ ನ್ಯೂಸ್
23-08-22 01:11 pm HK News Desk ಕರ್ನಾಟಕ
ಮಡಿಕೇರಿ, ಆಗಸ್ಟ್ 23 : ಕೊಡಗಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಿದ್ಧಗೊಳಿಸುತ್ತಿದ್ದಂತೆ ಜಿಲ್ಲಾಡಳಿತ ಎಲರ್ಟ್ ಆಗಿದೆ. ಕೊಡಗು ಜಿಲ್ಲೆಯಾದ್ಯಂತ ಆಗಸ್ಟ್ 24 ರಿಂದ 27ರ ವರೆಗೆ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಆ.24 ರ ಬೆಳಗ್ಗೆ 6 ಗಂಟೆಯಿಂದ 27ರ ಸಂಜೆ 6 ಗಂಟೆಯ ವರೆಗೆ ನಿಷೇಧಾಜ್ಞೆ ಹೇರಲಾಗಿದೆ. ಸೆಕ್ಷನ್ ಇರುವುದರಿಂದ ಈ ಅವಧಿಯಲ್ಲಿ ಯಾವುದೇ ಸಭೆ, ಸಮಾರಂಭ, ಪ್ರತಿಭಟನೆ ನಡೆಸುವಂತಿಲ್ಲ. ಘೋಷಣೆ ಕೂಗುವಂತಿಲ್ಲ. ಹೆಚ್ಚು ಜನರು ಸೇರುವಂತಿಲ್ಲ, ವಿಜಯೋತ್ಸವ ಮಾಡುವಂತಿಲ್ಲ ಎಂದು ಕೊಡಗು ಜಿಲ್ಲಾಧಿಕಾರಿ ಬಿ.ಸಿ.ಸತೀಶ ಆದೇಶ ಮಾಡಿದ್ದಾರೆ.

ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದ ಪ್ರಕರಣ ಖಂಡಿಸಿ ಆ.26 ರಂದು ಕಾಂಗ್ರೆಸ್ ಮಡಿಕೇರಿ ಚಲೋ ಹಮ್ಮಿಕೊಂಡಿದ್ದರೆ, ಅದೇ ದಿನ ಬಿಜೆಪಿಯಿಂದಲೂ ಜನಜಾಗೃತಿ ಸಮಾವೇಶ ಆಯೋಜಿಸಲಾಗಿತ್ತು. ಎರಡೂ ಕಡೆಯಿಂದಲೂ ಲಕ್ಷಕ್ಕೂ ಹೆಚ್ಚು ಜನ ಸೇರಿಸುವ ಬಗ್ಗೆ ನಾಯಕರು ಹೇಳಿಕೊಂಡಿದ್ದರು. ಕಾಂಗ್ರೆಸ್ ಆಸುಪಾಸಿನ ಜಿಲ್ಲೆಗಳಿಂದ ಭಾರೀ ಸಂಖ್ಯೆಯಲ್ಲಿ ಜನರನ್ನು ಸೇರಿಸಲು ಪ್ಲಾನ್ ಹಾಕಿತ್ತು. ಆಗಸ್ಟ್ 26ರಂದು ಎರಡು ರಾಷ್ಟ್ರೀಯ ಪಕ್ಷಗಳ ಶಕ್ತಿ ಪ್ರದರ್ಶನದ ಕಾರಣದಿಂದಾಗಿ ಮತ್ತೊಂದು ರಣರಂಗ ಆಗುವ ಎಲ್ಲ ಸಾಧ್ಯತೆಗಳಿದ್ದವು.
ಇದನ್ನು ಮನಗಂಡ ಜಿಲ್ಲಾಧಿಕಾರಿ, ಕೊಡಗು ಮತೀಯ ಸೂಕ್ಷ್ಮ ಪ್ರದೇಶವಾದ್ದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಂಡಿದ್ದಾರೆ. ಅಲ್ಲದೆ, ಆ.24ರ ಬೆಳಗ್ಗೆ 6 ಗಂಟೆಯಿಂದ 27ರ ಮಧ್ಯರಾತ್ರಿ ವರೆಗೆ ಮದ್ಯ ಮಾರಾಟವನ್ನೂ ನಿಷೇಧ ಮಾಡಲಾಗಿದೆ.
Section 144 has been imposed in Karnataka's Kodagu district starting 6 am tomorrow (August 24) and will go on till 6 pm on August 27. The move comes ahead of a Congress protest in the area and also a BJP event named 'Jan Jagarti Sammelan', both of which will take place on August 26.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm