ಬ್ರೇಕಿಂಗ್ ನ್ಯೂಸ್
23-08-22 01:11 pm HK News Desk ಕರ್ನಾಟಕ
ಮಡಿಕೇರಿ, ಆಗಸ್ಟ್ 23 : ಕೊಡಗಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಿದ್ಧಗೊಳಿಸುತ್ತಿದ್ದಂತೆ ಜಿಲ್ಲಾಡಳಿತ ಎಲರ್ಟ್ ಆಗಿದೆ. ಕೊಡಗು ಜಿಲ್ಲೆಯಾದ್ಯಂತ ಆಗಸ್ಟ್ 24 ರಿಂದ 27ರ ವರೆಗೆ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಆ.24 ರ ಬೆಳಗ್ಗೆ 6 ಗಂಟೆಯಿಂದ 27ರ ಸಂಜೆ 6 ಗಂಟೆಯ ವರೆಗೆ ನಿಷೇಧಾಜ್ಞೆ ಹೇರಲಾಗಿದೆ. ಸೆಕ್ಷನ್ ಇರುವುದರಿಂದ ಈ ಅವಧಿಯಲ್ಲಿ ಯಾವುದೇ ಸಭೆ, ಸಮಾರಂಭ, ಪ್ರತಿಭಟನೆ ನಡೆಸುವಂತಿಲ್ಲ. ಘೋಷಣೆ ಕೂಗುವಂತಿಲ್ಲ. ಹೆಚ್ಚು ಜನರು ಸೇರುವಂತಿಲ್ಲ, ವಿಜಯೋತ್ಸವ ಮಾಡುವಂತಿಲ್ಲ ಎಂದು ಕೊಡಗು ಜಿಲ್ಲಾಧಿಕಾರಿ ಬಿ.ಸಿ.ಸತೀಶ ಆದೇಶ ಮಾಡಿದ್ದಾರೆ.
ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದ ಪ್ರಕರಣ ಖಂಡಿಸಿ ಆ.26 ರಂದು ಕಾಂಗ್ರೆಸ್ ಮಡಿಕೇರಿ ಚಲೋ ಹಮ್ಮಿಕೊಂಡಿದ್ದರೆ, ಅದೇ ದಿನ ಬಿಜೆಪಿಯಿಂದಲೂ ಜನಜಾಗೃತಿ ಸಮಾವೇಶ ಆಯೋಜಿಸಲಾಗಿತ್ತು. ಎರಡೂ ಕಡೆಯಿಂದಲೂ ಲಕ್ಷಕ್ಕೂ ಹೆಚ್ಚು ಜನ ಸೇರಿಸುವ ಬಗ್ಗೆ ನಾಯಕರು ಹೇಳಿಕೊಂಡಿದ್ದರು. ಕಾಂಗ್ರೆಸ್ ಆಸುಪಾಸಿನ ಜಿಲ್ಲೆಗಳಿಂದ ಭಾರೀ ಸಂಖ್ಯೆಯಲ್ಲಿ ಜನರನ್ನು ಸೇರಿಸಲು ಪ್ಲಾನ್ ಹಾಕಿತ್ತು. ಆಗಸ್ಟ್ 26ರಂದು ಎರಡು ರಾಷ್ಟ್ರೀಯ ಪಕ್ಷಗಳ ಶಕ್ತಿ ಪ್ರದರ್ಶನದ ಕಾರಣದಿಂದಾಗಿ ಮತ್ತೊಂದು ರಣರಂಗ ಆಗುವ ಎಲ್ಲ ಸಾಧ್ಯತೆಗಳಿದ್ದವು.
ಇದನ್ನು ಮನಗಂಡ ಜಿಲ್ಲಾಧಿಕಾರಿ, ಕೊಡಗು ಮತೀಯ ಸೂಕ್ಷ್ಮ ಪ್ರದೇಶವಾದ್ದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಂಡಿದ್ದಾರೆ. ಅಲ್ಲದೆ, ಆ.24ರ ಬೆಳಗ್ಗೆ 6 ಗಂಟೆಯಿಂದ 27ರ ಮಧ್ಯರಾತ್ರಿ ವರೆಗೆ ಮದ್ಯ ಮಾರಾಟವನ್ನೂ ನಿಷೇಧ ಮಾಡಲಾಗಿದೆ.
Section 144 has been imposed in Karnataka's Kodagu district starting 6 am tomorrow (August 24) and will go on till 6 pm on August 27. The move comes ahead of a Congress protest in the area and also a BJP event named 'Jan Jagarti Sammelan', both of which will take place on August 26.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 07:19 pm
Mangalore Correspondent
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
15-07-25 06:52 pm
Bangalore Correspondent
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am