ಬ್ರೇಕಿಂಗ್ ನ್ಯೂಸ್
23-08-22 04:08 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 23 : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರನ್ನು ಸ್ಟಾರ್ಟ್ಅಪ್ ರಾಜಧಾನಿಯಾಗಿ ಪ್ರತಿನಿಧಿಸುವ ಸಲುವಾಗಿ ಯುನಿಕಾರ್ನ್ ಅನ್ನು ತೋರಿಸುವ ಲೋಗೋ ಸ್ಥಾಪನೆಗೆ ಸೂಕ್ತ ಸ್ಥಳವನ್ನು ಹುಡುಕುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಯೂನಿಕಾರ್ನ್ ಎಂಬುದು ಖಾಸಗಿ ಕಂಪನಿಗೆ 1 ಬಿಲಿಯನ್ ಡಾಲರ್ (ರೂ. 7,900 ಕೋಟಿ) ಮೌಲ್ಯವನ್ನು ಹೊಂದಿರುವ ಪದವಾಗಿದೆ. 2021-22ರಲ್ಲಿ 53 ಭಾರತೀಯ ಸ್ಟಾರ್ಟ್ಅಪ್ಗಳು ಯುನಿಕಾರ್ನ್ಗಳಾಗಿ ಮಾರ್ಪಟ್ಟಿವೆ. ಕಂಪನಿಗಳ ಕುರಿತು ಒಳನೋಟಗಳನ್ನು ಒದಗಿಸುವ ವೇದಿಕೆಯಾದ ಕ್ರಂಚ್ಬೇಸ್ ಪ್ರಕಾರ ಅವುಗಳಲ್ಲಿ 19 ಬೆಂಗಳೂರಿನಲ್ಲಿ, 12 ಮುಂಬೈನಲ್ಲಿ ಮತ್ತು 12 ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ (NCR) ಇವೆ.

ಬೆಂಗಳೂರು ಸುಮಾರು 5,000 ಸ್ಟಾರ್ಟಪ್ಗಳಿಗೆ ನೆಲೆಯಾಗಿದೆ. ಇಡೀ ದೇಶದಲ್ಲಿ ಅತಿ ಹೆಚ್ಚು ಸ್ಟಾರ್ಟ್ಅಪ್ಗಳು ಮತ್ತು ಯುನಿಕಾರ್ನ್ಗಳನ್ನು ಹೊಂದಿರುವುದರಿಂದ, ಅದನ್ನು ಹೈಲೈಟ್ ಮಾಡಲು ಮತ್ತು ಪ್ರೋತ್ಸಾಹಿಸಲು ಯುನಿಕಾರ್ನ್ ಲೋಗೋವನ್ನು ಹಾಕಲು ಬೆಂಗಳೂರು ನಗರದಲ್ಲಿ ಸೂಕ್ತ ಸ್ಥಳವನ್ನು ಗುರುತಿಸಬೇಕಾಗಿದೆ ಎಂದು ಬೊಮ್ಮಾಯಿ ಈ ಕುರಿತ ಸಭೆಯಲ್ಲಿ ತಿಳಿಸಿದ್ದಾರೆ.


ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಸಿಎಂ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಹಣಕಾಸು) ಐಎಸ್ಎನ್ ಪ್ರಸಾದ್, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ರಶ್ಮಿ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು. ಮೂಲಗಳ ಪ್ರಕಾರ, ವಿಧಾನಸೌಧ ಮತ್ತು ವಿಕಾಸಸೌಧದ ನಡುವೆ ಯುನಿಕಾರ್ನ್ ಲೋಗೋ ಬರುವ ಸಾಧ್ಯತೆಯಿದೆ ಎನ್ನಲಾಗಿದೆ. ಯುನಿಕಾರ್ನ್ ಲೋಗೋ ವಿನ್ಯಾಸದ ಪ್ರಕ್ರಿಯೆಯಲ್ಲಿದೆ ಮತ್ತು ಶೀಘ್ರದಲ್ಲೇ ಸಿದ್ಧವಾಗಲಿದೆ ಎಂದು ಮೂಲಗಳು ತಿಳಿಸಿವೆ. ಫುಲ್ ಸ್ಟಾಕ್ ಫೈನಾನ್ಷಿಯಲ್ ಸೊಲ್ಯೂಷನ್ಸ್ ಕಂಪನಿಯು ಲೋಗೊ ವಿನ್ಯಾಸಗೊಳಿಸುತ್ತಿದ್ದು, ಒಂದೆರಡು ತಿಂಗಳಲ್ಲಿ ಸರ್ಕಾರ ನೀಡಿರುವ ಜಾಗದಲ್ಲಿ ಅಳವಡಿಸಲಿದ್ದಾರೆ. ಈ ಲೋಗೋ ನಗರದ ಆಕರ್ಷಣೆಯಾಗಿರಲಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಇದೇ ವೇಳೇ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್ (ಯುವಿಸಿಇ) ಅಭಿವೃದ್ಧಿಗೆ ವಿಷನ್ ಡಾಕ್ಯುಮೆಂಟ್ ಸಿದ್ಧಪಡಿಸುವಂತೆ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದರು. ಏಳು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಕೆಐಟಿ) ಆಗಿ ಮೇಲ್ದರ್ಜೆಗೇರಿಸುವ ಕುರಿತು ನಡೆದ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದರು. ಯುವಿಸಿಇ ಅಧ್ಯಕ್ಷ ಬಿ ಮುತ್ತುರಾಮನ್ ಸಭೆಯಲ್ಲಿ ಉಪಸ್ಥಿತರಿದ್ದರು.
Karnataka Chief Minister Basavaraj Bommai on Monday instructed officials to identify a suitable place in the city to put up a Unicorn logo, aimed at highlighting Bengaluru for having the most number of startups and unicorns in the whole country.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm