ಬ್ರೇಕಿಂಗ್ ನ್ಯೂಸ್

Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿಂಗರತಿ ಲೈಂಗಿಕ ದೌರ್ಜನ್ಯ ; ಬೇಕಲ ಶಿಕ್ಷಣಾಧಿಕಾರಿ, ರೈಲ್ವೇ ಉದ್ಯೋಗಿ, ಜಮಾತೆ ಇಸ್ಲಾಮಿ, ಲೀಗ್ ಕಾರ್ಯಕರ್ತರು ಸೇರಿ ಹತ್ತು ಮಂದಿ ಪೊಲೀಸ್ ಬಲೆಗೆ, ಕಾಸರಗೋಡಿನಲ್ಲಿ ಸಂಚಲನ ಮೂಡಿಸಿದ ಪ್ರಕರಣ     |    ಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನುಷ್ಯನ ಎಲುಬು, ಬುರುಡೆಗಳು ಪತ್ತೆ, ಧರ್ಮಸ್ಥಳ ಪ್ರಕರಣಕ್ಕೆ ಮತ್ತೆ ತಿರುವು, ಎಸ್ಐಟಿ ಶೋಧ ಕಾರ್ಯ ಮುಂದುವರಿಕೆಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನುಷ್ಯನ ಎಲುಬು, ಬುರುಡೆಗಳು ಪತ್ತೆ, ಧರ್ಮಸ್ಥಳ ಪ್ರಕರಣಕ್ಕೆ ಮತ್ತೆ ತಿರುವು, ಎಸ್ಐಟಿ ಶೋಧ ಕಾರ್ಯ ಮುಂದುವರಿಕೆ    |    Mahesh Shetty Timarodi, Arms, FIR: ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿಯಲ್ಲಿ ಮತ್ತೊಂದು ಎಫ್ಐಆರ್, ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಕೇಸು ದಾಖಲು    |   

ಮತ್ತೊಮ್ಮೆ ಕ್ವಾರಂಟೈನ್​​ ನಿಯಮ ಉಲ್ಲಂಘನೆ - ಡ್ರೋನ್​​ ಪ್ರತಾಪ್​​ ವಿರುದ್ಧ ಕೇಸ್​​

03-08-20 01:02 pm       Bangalore Correspondent   ಕರ್ನಾಟಕ

ಎರಡನೇ ಭಾರಿ ಡ್ರೋನ್​​ ಪ್ರತಾಪ್ ಹೋಟೆಲ್​​​ನಲ್ಲಿ ಕ್ವಾರಂಟೈನ್​​ ನಿಯಮ ಉಲ್ಲಂಘನೆ ಮಾಡಿದ್ದಾರೆ. ಆದ್ದರಿಂದ ಅಶೋಕ ನಗರ ಪೊಲೀಸ್​ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲು.

ಬೆಂಗಳೂರು(ಆ.03): ಕ್ವಾರಂಟೈನ್ ನಿಯಮ ಉಲ್ಲಂಘಿಸಿ ತಲೆಮರೆಸಿಕೊಂಡಿದ್ದ ಡ್ರೋನ್ ಪ್ರತಾಪ್​ ಬೆಂಗಳೂರು ಪೊಲೀಸರು ಮೈಸೂರಿನಲ್ಲಿ ಬಂಧಿಸಿದ್ದರು. ಸಾಂಸ್ಕೃತಿಕ ನಗರಿ ಮೈಸೂರಿನಿಂದ ಡ್ರೋನ್​​ ಪ್ರತಾಪ್​​​​​ನನ್ನು ಬೆಂಗಳೂರಿಗೆ ಕರೆ ತಂದಿದ್ದ ಪೊಲೀಸರು ಸ್ಟಾರ್​​ ಹೋಟೆಲ್​​ವೊಂದರಲ್ಲಿ ಕ್ವಾರಂಟೈನ್​​ ಮಾಡಿದ್ದರು. ಇಂದಿಗೆ ಕ್ವಾರಂಟೈನ್​​ ಅವಧಿ ಮುಗಿದಿದೆ. ಹೀಗಾಗಿ ಸಿವಿಲ್ ಡಿಫೆನ್ಸ್ ಕಮಾಂಡೆಂಟ್ ಚೇತನ್ ಕುಮಾರ್​​​ ಡ್ರೋನ್​​ ಪ್ರತಾಪ್​​ ವಿಚಾರಣೆ ನಡೆಸಿದರು.

ಡ್ರೋನ್​​ ಪ್ರತಾಪ್​​ ವಿಚಾರಣೆ ವೇಳೆ ಚೇತನ್​​ ಕುಮಾರ್​​ ಕ್ವಾರಂಟೈನ್​​ ಉಲ್ಲಂಘಿಸಿದ ಬಳಿಕ ಬೆಂಗಳೂರಿನಿಂದ ಮೈಸೂರಿಗೆ ಹೋಗಲು ಯಾರು ಸಹಕರಿಸಿದರು ಎಂಬ ಬಗ್ಗೆ ಮಾಹಿತಿ ಪಡೆದರು. ಈ ವೇಳೆ ಚೇತನ್​​ ಕುಮಾರ್​ ಅವರಿಗೆ ವಿಚಾರಣೆಗೆ ಸರಿಯಾಗಿ ಸಹಕರಿಸದೇ ಡ್ರೋನ್​​ ಪ್ರತಾಪ್​ ಉಡಾಫೆ ತೋರಿದ್ದಾನೆ.

ವಿಚಾರಣೆ ಬಳಿಕ ಸುದ್ದಿಗಾರರೊಂದಿಗೆ ಮಾತಾಡಿದ ಸಿವಿಲ್ ಡಿಫೆನ್ಸ್ ಕಮಾಂಡೆಂಟ್ ಚೇತನ್ ಕುಮಾರ್​​, ಡ್ರೋನ್​​ ಪ್ರತಾಪ್​​ ಹೋಮ್​​ ಕ್ವಾರಂಟೈನ್​​ ನಿಯಮ ಉಲ್ಲಂಘಿಸಿ ಯಾವುದೇ ಟಿವಿ ಕಾರ್ಯಕ್ರಮಕ್ಕೆ ಹೋಗಿದ್ದರು. ಹಾಗಾಗಿ ಇವರನ್ನು ಬಂಧಿಸಿ ಸ್ಟಾರ್​​ ಹೋಟೆಲ್​​ವೊಂದರಲ್ಲಿ ಸಾಂಸ್ಥಿಕ ಕ್ವಾರಂಟೈನ್​​ ಮಾಡಿದ್ದೆವು. ಹೋಟೆಲ್​​​ನಲ್ಲಿ ಕ್ವಾರಂಟೈನ್​​ ಆದಾಗಲೂ ಇವರು ನಿಯಮ ಉಲ್ಲಂಘನೆ ಮಾಡಿದ್ದಾರೆ. ಆದ್ದರಿಂದ ಅಶೋಕ ನಗರ ಪೊಲೀಸ್​ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಿದ್ದೇವೆ ಎಂದರು.