ಬ್ರೇಕಿಂಗ್ ನ್ಯೂಸ್
06-10-20 10:28 am Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 06: ಡ್ರಗ್ ಪೆಡ್ಲರ್ ನೀಡಿರುವ ಮಾಹಿತಿ ಬೆನ್ನತ್ತಿದ ಸಿಸಿಬಿ ಅಧಿಕಾರಿಗಳು ಮಾಜಿ ಡಾನ್, ಇತ್ತೀಚೆಗಷ್ಟೇ ನಿಧನರಾಗಿರುವ ಬಿಡದಿಯ ಮುತ್ತಪ್ಪ ರೈ ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ.
ಬೆಳ್ಳಂಬೆಳಗ್ಗೆ ಏಳು ಕಾರುಗಳಲ್ಲಿ ಆಗಮಿಸಿರುವ ಸಿಸಿಬಿ ಅಧಿಕಾರಿಗಳು, ರಾಮನಗರದ ಬಿಡದಿ ಬಳಿ ಇರುವ ಮುತ್ತಪ್ಪ ರೈ ಮಗ ರಿಕ್ಕಿ ರೈ ನಿವಾಸಕ್ಕೆ ದಾಳಿ ನಡೆಸಿದ್ದಾರೆ. ಸರ್ಚ್ ವಾರೆಂಟ್ ಪಡೆದೇ ಬೆಳಗ್ಗೆ 6 ಗಂಟೆ ವೇಳೆಗೆ ಸಿಸಿಬಿ ಅಧಿಕಾರಿಗಳು ಮನೆಗೆ ಆಗಮಿಸಿದ್ದರು. ಈ ವೇಳೆ, ನಿವಾಸದ ಹೊರಗೆ ಕೇವಲ ಕೆಲಸಗಾರರು ಅಷ್ಟೇ ಇದ್ದರು. ನಾವು ಪೊಲೀಸರು, ಯಾರನ್ನು ಒಳಗೆ ಬಿಡಬೇಡಿ ಎಂದು ಸೆಕ್ಯುರಿಟಿ ಬಳಿ ಹೇಳಿ ಮನೆ ಒಳಗೆ ಹೋಗಿರುವ ಅಧಿಕಾರಿಗಳು, ಸರ್ಚ್ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಇತ್ತೀಚೆಗೆ ಬಂಧಿತನಾದ ಡ್ರಗ್ ಪೆಡ್ಲರ್ ನೀಡಿರುವ ಮಾಹಿತಿ ಮೇರೆಗೆ ರಿಕ್ಕಿ ರೈ ಮನೆ ಮೇಲೆ ದಾಳಿ ನಡೆದಿದೆ ಎನ್ನಲಾಗ್ತಿದೆ. ಇದಕ್ಕೂ ಮುನ್ನ ರಿಕ್ಕಿ ರೈಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದರು ಎನ್ನಲಾಗುತ್ತಿದೆ.
ಮನೆಯಲ್ಲಿದ್ದ ರಿಕ್ಕಿ ರೈಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಡ್ರಗ್ ನಂಟಿನಲ್ಲಿ ತಲೆಮರೆಸಿಕೊಂಡಿರುವ ಆದಿತ್ಯ ಆಳ್ವಾ ಜೊತೆಗೆ ರಿಕ್ಕಿ ರೈ ನಂಟು ಹೊಂದಿರುವ ಹಿನ್ನೆಲೆಯಲ್ಲಿ ಪೊಲೀಸರು ಶೋಧ ನಡೆಸಿದ್ದಾರೆ. ಆದಿತ್ಯ ಆಳ್ವಾ ಎಸ್ಕೇಪ್ ಆಗಲು ರಿಕ್ಕಿ ರೈ ಸಹಾಯ ಮಾಡಿದ್ದ ಎನ್ನಲಾಗುತ್ತಿದೆ.
ಸಿಸಿಬಿಯ ಎಸಿಪಿ ವೇಣುಗೋಪಾಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಡ್ರಗ್ಸ್ ಕೇಸ್ನಲ್ಲಿ ಮುತ್ತಪ್ಪ ರೈ ಪುತ್ರನನ್ನು ಫಿಕ್ಸ್ ಮಾಡುತ್ತಾರೆಯೇ ಅಥವಾ ಮನೆಯ ಒಳಗೆ ಡ್ರಗ್ ಪತ್ತೆಯಾಗಿದೆಯೇ ಅನ್ನೋದು ಗೊತ್ತಾಗಿಲ್ಲ. ಡ್ರಗ್ ಪೆಡ್ಲರ್ ಮುತ್ತಪ್ಪ ರೈ ನಿವಾಸಕ್ಕೆ ಡ್ರಗ್ ಪೂರೈಕೆ ಮಾಡುತ್ತಿದ್ದ ಬಗ್ಗೆ ಬಾಯಿಬಿಟ್ಟಿದ್ದು ಅದೇ ವಿಚಾರದಲ್ಲಿ ಪೊಲೀಸರು ರೈಗೆ ಸೇರಿದ ಬಿಡದಿಯ ತೋಟದ ಮನೆ ಮತ್ತು ಬೆಂಗಳೂರಿನ ವಯ್ಯಾಲಿಕಾವಲ್ ಮನೆಯನ್ನು ಸರ್ಚ್ ನಡೆಸಿದ್ದಾರೆ.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
11-08-26 03:08 pm
HK News Staffer
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am