ಬ್ರೇಕಿಂಗ್ ನ್ಯೂಸ್
06-10-20 10:28 am Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 06: ಡ್ರಗ್ ಪೆಡ್ಲರ್ ನೀಡಿರುವ ಮಾಹಿತಿ ಬೆನ್ನತ್ತಿದ ಸಿಸಿಬಿ ಅಧಿಕಾರಿಗಳು ಮಾಜಿ ಡಾನ್, ಇತ್ತೀಚೆಗಷ್ಟೇ ನಿಧನರಾಗಿರುವ ಬಿಡದಿಯ ಮುತ್ತಪ್ಪ ರೈ ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ.
ಬೆಳ್ಳಂಬೆಳಗ್ಗೆ ಏಳು ಕಾರುಗಳಲ್ಲಿ ಆಗಮಿಸಿರುವ ಸಿಸಿಬಿ ಅಧಿಕಾರಿಗಳು, ರಾಮನಗರದ ಬಿಡದಿ ಬಳಿ ಇರುವ ಮುತ್ತಪ್ಪ ರೈ ಮಗ ರಿಕ್ಕಿ ರೈ ನಿವಾಸಕ್ಕೆ ದಾಳಿ ನಡೆಸಿದ್ದಾರೆ. ಸರ್ಚ್ ವಾರೆಂಟ್ ಪಡೆದೇ ಬೆಳಗ್ಗೆ 6 ಗಂಟೆ ವೇಳೆಗೆ ಸಿಸಿಬಿ ಅಧಿಕಾರಿಗಳು ಮನೆಗೆ ಆಗಮಿಸಿದ್ದರು. ಈ ವೇಳೆ, ನಿವಾಸದ ಹೊರಗೆ ಕೇವಲ ಕೆಲಸಗಾರರು ಅಷ್ಟೇ ಇದ್ದರು. ನಾವು ಪೊಲೀಸರು, ಯಾರನ್ನು ಒಳಗೆ ಬಿಡಬೇಡಿ ಎಂದು ಸೆಕ್ಯುರಿಟಿ ಬಳಿ ಹೇಳಿ ಮನೆ ಒಳಗೆ ಹೋಗಿರುವ ಅಧಿಕಾರಿಗಳು, ಸರ್ಚ್ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಇತ್ತೀಚೆಗೆ ಬಂಧಿತನಾದ ಡ್ರಗ್ ಪೆಡ್ಲರ್ ನೀಡಿರುವ ಮಾಹಿತಿ ಮೇರೆಗೆ ರಿಕ್ಕಿ ರೈ ಮನೆ ಮೇಲೆ ದಾಳಿ ನಡೆದಿದೆ ಎನ್ನಲಾಗ್ತಿದೆ. ಇದಕ್ಕೂ ಮುನ್ನ ರಿಕ್ಕಿ ರೈಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದರು ಎನ್ನಲಾಗುತ್ತಿದೆ.
ಮನೆಯಲ್ಲಿದ್ದ ರಿಕ್ಕಿ ರೈಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಡ್ರಗ್ ನಂಟಿನಲ್ಲಿ ತಲೆಮರೆಸಿಕೊಂಡಿರುವ ಆದಿತ್ಯ ಆಳ್ವಾ ಜೊತೆಗೆ ರಿಕ್ಕಿ ರೈ ನಂಟು ಹೊಂದಿರುವ ಹಿನ್ನೆಲೆಯಲ್ಲಿ ಪೊಲೀಸರು ಶೋಧ ನಡೆಸಿದ್ದಾರೆ. ಆದಿತ್ಯ ಆಳ್ವಾ ಎಸ್ಕೇಪ್ ಆಗಲು ರಿಕ್ಕಿ ರೈ ಸಹಾಯ ಮಾಡಿದ್ದ ಎನ್ನಲಾಗುತ್ತಿದೆ.
ಸಿಸಿಬಿಯ ಎಸಿಪಿ ವೇಣುಗೋಪಾಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಡ್ರಗ್ಸ್ ಕೇಸ್ನಲ್ಲಿ ಮುತ್ತಪ್ಪ ರೈ ಪುತ್ರನನ್ನು ಫಿಕ್ಸ್ ಮಾಡುತ್ತಾರೆಯೇ ಅಥವಾ ಮನೆಯ ಒಳಗೆ ಡ್ರಗ್ ಪತ್ತೆಯಾಗಿದೆಯೇ ಅನ್ನೋದು ಗೊತ್ತಾಗಿಲ್ಲ. ಡ್ರಗ್ ಪೆಡ್ಲರ್ ಮುತ್ತಪ್ಪ ರೈ ನಿವಾಸಕ್ಕೆ ಡ್ರಗ್ ಪೂರೈಕೆ ಮಾಡುತ್ತಿದ್ದ ಬಗ್ಗೆ ಬಾಯಿಬಿಟ್ಟಿದ್ದು ಅದೇ ವಿಚಾರದಲ್ಲಿ ಪೊಲೀಸರು ರೈಗೆ ಸೇರಿದ ಬಿಡದಿಯ ತೋಟದ ಮನೆ ಮತ್ತು ಬೆಂಗಳೂರಿನ ವಯ್ಯಾಲಿಕಾವಲ್ ಮನೆಯನ್ನು ಸರ್ಚ್ ನಡೆಸಿದ್ದಾರೆ.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm