ಬ್ರೇಕಿಂಗ್ ನ್ಯೂಸ್
06-10-20 10:28 am Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 06: ಡ್ರಗ್ ಪೆಡ್ಲರ್ ನೀಡಿರುವ ಮಾಹಿತಿ ಬೆನ್ನತ್ತಿದ ಸಿಸಿಬಿ ಅಧಿಕಾರಿಗಳು ಮಾಜಿ ಡಾನ್, ಇತ್ತೀಚೆಗಷ್ಟೇ ನಿಧನರಾಗಿರುವ ಬಿಡದಿಯ ಮುತ್ತಪ್ಪ ರೈ ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ.
ಬೆಳ್ಳಂಬೆಳಗ್ಗೆ ಏಳು ಕಾರುಗಳಲ್ಲಿ ಆಗಮಿಸಿರುವ ಸಿಸಿಬಿ ಅಧಿಕಾರಿಗಳು, ರಾಮನಗರದ ಬಿಡದಿ ಬಳಿ ಇರುವ ಮುತ್ತಪ್ಪ ರೈ ಮಗ ರಿಕ್ಕಿ ರೈ ನಿವಾಸಕ್ಕೆ ದಾಳಿ ನಡೆಸಿದ್ದಾರೆ. ಸರ್ಚ್ ವಾರೆಂಟ್ ಪಡೆದೇ ಬೆಳಗ್ಗೆ 6 ಗಂಟೆ ವೇಳೆಗೆ ಸಿಸಿಬಿ ಅಧಿಕಾರಿಗಳು ಮನೆಗೆ ಆಗಮಿಸಿದ್ದರು. ಈ ವೇಳೆ, ನಿವಾಸದ ಹೊರಗೆ ಕೇವಲ ಕೆಲಸಗಾರರು ಅಷ್ಟೇ ಇದ್ದರು. ನಾವು ಪೊಲೀಸರು, ಯಾರನ್ನು ಒಳಗೆ ಬಿಡಬೇಡಿ ಎಂದು ಸೆಕ್ಯುರಿಟಿ ಬಳಿ ಹೇಳಿ ಮನೆ ಒಳಗೆ ಹೋಗಿರುವ ಅಧಿಕಾರಿಗಳು, ಸರ್ಚ್ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಇತ್ತೀಚೆಗೆ ಬಂಧಿತನಾದ ಡ್ರಗ್ ಪೆಡ್ಲರ್ ನೀಡಿರುವ ಮಾಹಿತಿ ಮೇರೆಗೆ ರಿಕ್ಕಿ ರೈ ಮನೆ ಮೇಲೆ ದಾಳಿ ನಡೆದಿದೆ ಎನ್ನಲಾಗ್ತಿದೆ. ಇದಕ್ಕೂ ಮುನ್ನ ರಿಕ್ಕಿ ರೈಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದರು ಎನ್ನಲಾಗುತ್ತಿದೆ.
ಮನೆಯಲ್ಲಿದ್ದ ರಿಕ್ಕಿ ರೈಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಡ್ರಗ್ ನಂಟಿನಲ್ಲಿ ತಲೆಮರೆಸಿಕೊಂಡಿರುವ ಆದಿತ್ಯ ಆಳ್ವಾ ಜೊತೆಗೆ ರಿಕ್ಕಿ ರೈ ನಂಟು ಹೊಂದಿರುವ ಹಿನ್ನೆಲೆಯಲ್ಲಿ ಪೊಲೀಸರು ಶೋಧ ನಡೆಸಿದ್ದಾರೆ. ಆದಿತ್ಯ ಆಳ್ವಾ ಎಸ್ಕೇಪ್ ಆಗಲು ರಿಕ್ಕಿ ರೈ ಸಹಾಯ ಮಾಡಿದ್ದ ಎನ್ನಲಾಗುತ್ತಿದೆ.
ಸಿಸಿಬಿಯ ಎಸಿಪಿ ವೇಣುಗೋಪಾಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಡ್ರಗ್ಸ್ ಕೇಸ್ನಲ್ಲಿ ಮುತ್ತಪ್ಪ ರೈ ಪುತ್ರನನ್ನು ಫಿಕ್ಸ್ ಮಾಡುತ್ತಾರೆಯೇ ಅಥವಾ ಮನೆಯ ಒಳಗೆ ಡ್ರಗ್ ಪತ್ತೆಯಾಗಿದೆಯೇ ಅನ್ನೋದು ಗೊತ್ತಾಗಿಲ್ಲ. ಡ್ರಗ್ ಪೆಡ್ಲರ್ ಮುತ್ತಪ್ಪ ರೈ ನಿವಾಸಕ್ಕೆ ಡ್ರಗ್ ಪೂರೈಕೆ ಮಾಡುತ್ತಿದ್ದ ಬಗ್ಗೆ ಬಾಯಿಬಿಟ್ಟಿದ್ದು ಅದೇ ವಿಚಾರದಲ್ಲಿ ಪೊಲೀಸರು ರೈಗೆ ಸೇರಿದ ಬಿಡದಿಯ ತೋಟದ ಮನೆ ಮತ್ತು ಬೆಂಗಳೂರಿನ ವಯ್ಯಾಲಿಕಾವಲ್ ಮನೆಯನ್ನು ಸರ್ಚ್ ನಡೆಸಿದ್ದಾರೆ.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 07:52 pm
HK News Staffer
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm