ಬ್ರೇಕಿಂಗ್ ನ್ಯೂಸ್
06-10-20 10:28 am Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 06: ಡ್ರಗ್ ಪೆಡ್ಲರ್ ನೀಡಿರುವ ಮಾಹಿತಿ ಬೆನ್ನತ್ತಿದ ಸಿಸಿಬಿ ಅಧಿಕಾರಿಗಳು ಮಾಜಿ ಡಾನ್, ಇತ್ತೀಚೆಗಷ್ಟೇ ನಿಧನರಾಗಿರುವ ಬಿಡದಿಯ ಮುತ್ತಪ್ಪ ರೈ ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ.
ಬೆಳ್ಳಂಬೆಳಗ್ಗೆ ಏಳು ಕಾರುಗಳಲ್ಲಿ ಆಗಮಿಸಿರುವ ಸಿಸಿಬಿ ಅಧಿಕಾರಿಗಳು, ರಾಮನಗರದ ಬಿಡದಿ ಬಳಿ ಇರುವ ಮುತ್ತಪ್ಪ ರೈ ಮಗ ರಿಕ್ಕಿ ರೈ ನಿವಾಸಕ್ಕೆ ದಾಳಿ ನಡೆಸಿದ್ದಾರೆ. ಸರ್ಚ್ ವಾರೆಂಟ್ ಪಡೆದೇ ಬೆಳಗ್ಗೆ 6 ಗಂಟೆ ವೇಳೆಗೆ ಸಿಸಿಬಿ ಅಧಿಕಾರಿಗಳು ಮನೆಗೆ ಆಗಮಿಸಿದ್ದರು. ಈ ವೇಳೆ, ನಿವಾಸದ ಹೊರಗೆ ಕೇವಲ ಕೆಲಸಗಾರರು ಅಷ್ಟೇ ಇದ್ದರು. ನಾವು ಪೊಲೀಸರು, ಯಾರನ್ನು ಒಳಗೆ ಬಿಡಬೇಡಿ ಎಂದು ಸೆಕ್ಯುರಿಟಿ ಬಳಿ ಹೇಳಿ ಮನೆ ಒಳಗೆ ಹೋಗಿರುವ ಅಧಿಕಾರಿಗಳು, ಸರ್ಚ್ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಇತ್ತೀಚೆಗೆ ಬಂಧಿತನಾದ ಡ್ರಗ್ ಪೆಡ್ಲರ್ ನೀಡಿರುವ ಮಾಹಿತಿ ಮೇರೆಗೆ ರಿಕ್ಕಿ ರೈ ಮನೆ ಮೇಲೆ ದಾಳಿ ನಡೆದಿದೆ ಎನ್ನಲಾಗ್ತಿದೆ. ಇದಕ್ಕೂ ಮುನ್ನ ರಿಕ್ಕಿ ರೈಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದರು ಎನ್ನಲಾಗುತ್ತಿದೆ.
ಮನೆಯಲ್ಲಿದ್ದ ರಿಕ್ಕಿ ರೈಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಡ್ರಗ್ ನಂಟಿನಲ್ಲಿ ತಲೆಮರೆಸಿಕೊಂಡಿರುವ ಆದಿತ್ಯ ಆಳ್ವಾ ಜೊತೆಗೆ ರಿಕ್ಕಿ ರೈ ನಂಟು ಹೊಂದಿರುವ ಹಿನ್ನೆಲೆಯಲ್ಲಿ ಪೊಲೀಸರು ಶೋಧ ನಡೆಸಿದ್ದಾರೆ. ಆದಿತ್ಯ ಆಳ್ವಾ ಎಸ್ಕೇಪ್ ಆಗಲು ರಿಕ್ಕಿ ರೈ ಸಹಾಯ ಮಾಡಿದ್ದ ಎನ್ನಲಾಗುತ್ತಿದೆ.
ಸಿಸಿಬಿಯ ಎಸಿಪಿ ವೇಣುಗೋಪಾಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಡ್ರಗ್ಸ್ ಕೇಸ್ನಲ್ಲಿ ಮುತ್ತಪ್ಪ ರೈ ಪುತ್ರನನ್ನು ಫಿಕ್ಸ್ ಮಾಡುತ್ತಾರೆಯೇ ಅಥವಾ ಮನೆಯ ಒಳಗೆ ಡ್ರಗ್ ಪತ್ತೆಯಾಗಿದೆಯೇ ಅನ್ನೋದು ಗೊತ್ತಾಗಿಲ್ಲ. ಡ್ರಗ್ ಪೆಡ್ಲರ್ ಮುತ್ತಪ್ಪ ರೈ ನಿವಾಸಕ್ಕೆ ಡ್ರಗ್ ಪೂರೈಕೆ ಮಾಡುತ್ತಿದ್ದ ಬಗ್ಗೆ ಬಾಯಿಬಿಟ್ಟಿದ್ದು ಅದೇ ವಿಚಾರದಲ್ಲಿ ಪೊಲೀಸರು ರೈಗೆ ಸೇರಿದ ಬಿಡದಿಯ ತೋಟದ ಮನೆ ಮತ್ತು ಬೆಂಗಳೂರಿನ ವಯ್ಯಾಲಿಕಾವಲ್ ಮನೆಯನ್ನು ಸರ್ಚ್ ನಡೆಸಿದ್ದಾರೆ.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 07:23 pm
Mangalore Correspondent
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
07-11-25 08:05 pm
HK News Desk
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm