ಬ್ರೇಕಿಂಗ್ ನ್ಯೂಸ್
06-10-20 10:28 am Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 06: ಡ್ರಗ್ ಪೆಡ್ಲರ್ ನೀಡಿರುವ ಮಾಹಿತಿ ಬೆನ್ನತ್ತಿದ ಸಿಸಿಬಿ ಅಧಿಕಾರಿಗಳು ಮಾಜಿ ಡಾನ್, ಇತ್ತೀಚೆಗಷ್ಟೇ ನಿಧನರಾಗಿರುವ ಬಿಡದಿಯ ಮುತ್ತಪ್ಪ ರೈ ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ.
ಬೆಳ್ಳಂಬೆಳಗ್ಗೆ ಏಳು ಕಾರುಗಳಲ್ಲಿ ಆಗಮಿಸಿರುವ ಸಿಸಿಬಿ ಅಧಿಕಾರಿಗಳು, ರಾಮನಗರದ ಬಿಡದಿ ಬಳಿ ಇರುವ ಮುತ್ತಪ್ಪ ರೈ ಮಗ ರಿಕ್ಕಿ ರೈ ನಿವಾಸಕ್ಕೆ ದಾಳಿ ನಡೆಸಿದ್ದಾರೆ. ಸರ್ಚ್ ವಾರೆಂಟ್ ಪಡೆದೇ ಬೆಳಗ್ಗೆ 6 ಗಂಟೆ ವೇಳೆಗೆ ಸಿಸಿಬಿ ಅಧಿಕಾರಿಗಳು ಮನೆಗೆ ಆಗಮಿಸಿದ್ದರು. ಈ ವೇಳೆ, ನಿವಾಸದ ಹೊರಗೆ ಕೇವಲ ಕೆಲಸಗಾರರು ಅಷ್ಟೇ ಇದ್ದರು. ನಾವು ಪೊಲೀಸರು, ಯಾರನ್ನು ಒಳಗೆ ಬಿಡಬೇಡಿ ಎಂದು ಸೆಕ್ಯುರಿಟಿ ಬಳಿ ಹೇಳಿ ಮನೆ ಒಳಗೆ ಹೋಗಿರುವ ಅಧಿಕಾರಿಗಳು, ಸರ್ಚ್ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಇತ್ತೀಚೆಗೆ ಬಂಧಿತನಾದ ಡ್ರಗ್ ಪೆಡ್ಲರ್ ನೀಡಿರುವ ಮಾಹಿತಿ ಮೇರೆಗೆ ರಿಕ್ಕಿ ರೈ ಮನೆ ಮೇಲೆ ದಾಳಿ ನಡೆದಿದೆ ಎನ್ನಲಾಗ್ತಿದೆ. ಇದಕ್ಕೂ ಮುನ್ನ ರಿಕ್ಕಿ ರೈಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದರು ಎನ್ನಲಾಗುತ್ತಿದೆ.
ಮನೆಯಲ್ಲಿದ್ದ ರಿಕ್ಕಿ ರೈಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಡ್ರಗ್ ನಂಟಿನಲ್ಲಿ ತಲೆಮರೆಸಿಕೊಂಡಿರುವ ಆದಿತ್ಯ ಆಳ್ವಾ ಜೊತೆಗೆ ರಿಕ್ಕಿ ರೈ ನಂಟು ಹೊಂದಿರುವ ಹಿನ್ನೆಲೆಯಲ್ಲಿ ಪೊಲೀಸರು ಶೋಧ ನಡೆಸಿದ್ದಾರೆ. ಆದಿತ್ಯ ಆಳ್ವಾ ಎಸ್ಕೇಪ್ ಆಗಲು ರಿಕ್ಕಿ ರೈ ಸಹಾಯ ಮಾಡಿದ್ದ ಎನ್ನಲಾಗುತ್ತಿದೆ.
ಸಿಸಿಬಿಯ ಎಸಿಪಿ ವೇಣುಗೋಪಾಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಡ್ರಗ್ಸ್ ಕೇಸ್ನಲ್ಲಿ ಮುತ್ತಪ್ಪ ರೈ ಪುತ್ರನನ್ನು ಫಿಕ್ಸ್ ಮಾಡುತ್ತಾರೆಯೇ ಅಥವಾ ಮನೆಯ ಒಳಗೆ ಡ್ರಗ್ ಪತ್ತೆಯಾಗಿದೆಯೇ ಅನ್ನೋದು ಗೊತ್ತಾಗಿಲ್ಲ. ಡ್ರಗ್ ಪೆಡ್ಲರ್ ಮುತ್ತಪ್ಪ ರೈ ನಿವಾಸಕ್ಕೆ ಡ್ರಗ್ ಪೂರೈಕೆ ಮಾಡುತ್ತಿದ್ದ ಬಗ್ಗೆ ಬಾಯಿಬಿಟ್ಟಿದ್ದು ಅದೇ ವಿಚಾರದಲ್ಲಿ ಪೊಲೀಸರು ರೈಗೆ ಸೇರಿದ ಬಿಡದಿಯ ತೋಟದ ಮನೆ ಮತ್ತು ಬೆಂಗಳೂರಿನ ವಯ್ಯಾಲಿಕಾವಲ್ ಮನೆಯನ್ನು ಸರ್ಚ್ ನಡೆಸಿದ್ದಾರೆ.
15-07-25 12:27 pm
Bangalore Correspondent
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:32 am
Mangalore Correspondent
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
15-07-25 11:38 am
Mangalore Correspondent
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am