ಬ್ರೇಕಿಂಗ್ ನ್ಯೂಸ್
06-10-20 10:28 am Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 06: ಡ್ರಗ್ ಪೆಡ್ಲರ್ ನೀಡಿರುವ ಮಾಹಿತಿ ಬೆನ್ನತ್ತಿದ ಸಿಸಿಬಿ ಅಧಿಕಾರಿಗಳು ಮಾಜಿ ಡಾನ್, ಇತ್ತೀಚೆಗಷ್ಟೇ ನಿಧನರಾಗಿರುವ ಬಿಡದಿಯ ಮುತ್ತಪ್ಪ ರೈ ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ.
ಬೆಳ್ಳಂಬೆಳಗ್ಗೆ ಏಳು ಕಾರುಗಳಲ್ಲಿ ಆಗಮಿಸಿರುವ ಸಿಸಿಬಿ ಅಧಿಕಾರಿಗಳು, ರಾಮನಗರದ ಬಿಡದಿ ಬಳಿ ಇರುವ ಮುತ್ತಪ್ಪ ರೈ ಮಗ ರಿಕ್ಕಿ ರೈ ನಿವಾಸಕ್ಕೆ ದಾಳಿ ನಡೆಸಿದ್ದಾರೆ. ಸರ್ಚ್ ವಾರೆಂಟ್ ಪಡೆದೇ ಬೆಳಗ್ಗೆ 6 ಗಂಟೆ ವೇಳೆಗೆ ಸಿಸಿಬಿ ಅಧಿಕಾರಿಗಳು ಮನೆಗೆ ಆಗಮಿಸಿದ್ದರು. ಈ ವೇಳೆ, ನಿವಾಸದ ಹೊರಗೆ ಕೇವಲ ಕೆಲಸಗಾರರು ಅಷ್ಟೇ ಇದ್ದರು. ನಾವು ಪೊಲೀಸರು, ಯಾರನ್ನು ಒಳಗೆ ಬಿಡಬೇಡಿ ಎಂದು ಸೆಕ್ಯುರಿಟಿ ಬಳಿ ಹೇಳಿ ಮನೆ ಒಳಗೆ ಹೋಗಿರುವ ಅಧಿಕಾರಿಗಳು, ಸರ್ಚ್ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಇತ್ತೀಚೆಗೆ ಬಂಧಿತನಾದ ಡ್ರಗ್ ಪೆಡ್ಲರ್ ನೀಡಿರುವ ಮಾಹಿತಿ ಮೇರೆಗೆ ರಿಕ್ಕಿ ರೈ ಮನೆ ಮೇಲೆ ದಾಳಿ ನಡೆದಿದೆ ಎನ್ನಲಾಗ್ತಿದೆ. ಇದಕ್ಕೂ ಮುನ್ನ ರಿಕ್ಕಿ ರೈಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದರು ಎನ್ನಲಾಗುತ್ತಿದೆ.
ಮನೆಯಲ್ಲಿದ್ದ ರಿಕ್ಕಿ ರೈಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಡ್ರಗ್ ನಂಟಿನಲ್ಲಿ ತಲೆಮರೆಸಿಕೊಂಡಿರುವ ಆದಿತ್ಯ ಆಳ್ವಾ ಜೊತೆಗೆ ರಿಕ್ಕಿ ರೈ ನಂಟು ಹೊಂದಿರುವ ಹಿನ್ನೆಲೆಯಲ್ಲಿ ಪೊಲೀಸರು ಶೋಧ ನಡೆಸಿದ್ದಾರೆ. ಆದಿತ್ಯ ಆಳ್ವಾ ಎಸ್ಕೇಪ್ ಆಗಲು ರಿಕ್ಕಿ ರೈ ಸಹಾಯ ಮಾಡಿದ್ದ ಎನ್ನಲಾಗುತ್ತಿದೆ.
ಸಿಸಿಬಿಯ ಎಸಿಪಿ ವೇಣುಗೋಪಾಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಡ್ರಗ್ಸ್ ಕೇಸ್ನಲ್ಲಿ ಮುತ್ತಪ್ಪ ರೈ ಪುತ್ರನನ್ನು ಫಿಕ್ಸ್ ಮಾಡುತ್ತಾರೆಯೇ ಅಥವಾ ಮನೆಯ ಒಳಗೆ ಡ್ರಗ್ ಪತ್ತೆಯಾಗಿದೆಯೇ ಅನ್ನೋದು ಗೊತ್ತಾಗಿಲ್ಲ. ಡ್ರಗ್ ಪೆಡ್ಲರ್ ಮುತ್ತಪ್ಪ ರೈ ನಿವಾಸಕ್ಕೆ ಡ್ರಗ್ ಪೂರೈಕೆ ಮಾಡುತ್ತಿದ್ದ ಬಗ್ಗೆ ಬಾಯಿಬಿಟ್ಟಿದ್ದು ಅದೇ ವಿಚಾರದಲ್ಲಿ ಪೊಲೀಸರು ರೈಗೆ ಸೇರಿದ ಬಿಡದಿಯ ತೋಟದ ಮನೆ ಮತ್ತು ಬೆಂಗಳೂರಿನ ವಯ್ಯಾಲಿಕಾವಲ್ ಮನೆಯನ್ನು ಸರ್ಚ್ ನಡೆಸಿದ್ದಾರೆ.
09-12-25 08:56 pm
Bangalore Correspondent
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
09-12-25 11:03 pm
HK News Desk
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
09-12-25 07:30 pm
HK News Desk
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
Mangalore, Puttur, Mahesh Shetty Timarodi: ಪ್...
08-12-25 04:52 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm