ಬ್ರೇಕಿಂಗ್ ನ್ಯೂಸ್
25-08-22 12:28 pm HK News Desk ಕರ್ನಾಟಕ
ಶಿವಮೊಗ್ಗ, ಆಗಸ್ಟ್ 25: ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಅನಾಮಧೇಯ ಬೆದರಿಕೆ ಪತ್ರ ಬಂದಿದೆ.
ನಾಲಗೆ ಕತ್ತರಿಸುವುದಾಗಿ ಬೆದರಿಕೆ ಪತ್ರದಲ್ಲಿ ಬರೆಯಲಾಗಿದೆ. ಮಲ್ಲೇಶ್ವರನಗರದಲ್ಲಿರುವ ಈಶ್ವರಪ್ಪ ಮನೆಗೆ ಅನಾಮಧೇಯ ಪತ್ರ ಬಂದಿದೆ.
ಮುಸ್ಲಿಂ ಗೂಂಡಾಗಳು ಎಂದು ಹೇಳುವ ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ, ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರಿನಲ್ಲಿ ಕಾಲೇಜು ಕಟ್ಟಲು ಬಳಸ್ತಿರುವುದು ಮುಸ್ಲಿಮರು ಕೊಟ್ಟಿರುವ ಸಿಮೆಂಟ್ ಬ್ಯಾಗ್ ಗಳು . ಆದರೂ ನಿನಗೆ ಮುಸ್ಲಿಮರು ಬೇಡ, ನಿನಗೆ ನಾಚಿಕೆಯಾಗಬೇಕು. ಮಗನೆ.. ನಿನ್ನ ನಾಲಗೆ ಕಟ್ ಮಾಡುತ್ತೇವೆ ಹುಷಾರ್ ಎಂದು ಬೆದರಿಕೆ ಪತ್ರದಲ್ಲಿ ಬರೆಯಲಾಗಿದೆ.
ನಾನು ಹೆದರಲ್ಲ, ಬೆದರಲ್ಲ ;
ಇನ್ನು ಈ ಬಗ್ಗೆ ಮಾತನಾಡಿರುವ ಕೆ.ಎಸ್.ಈಶ್ವರಪ್ಪ, ಯಾರೋ ಹೇಡಿಗಳು ಅನಾಮಧೇಯ ಬೆದರಿಕೆ ಪತ್ರ ಬರೆದಿದ್ದಾರೆ. ಈ ರೀತಿಯ ಗೊಡ್ಡು ಬೆದರಿಕೆಗಳಿಗೆ ನಾನು ಹೆದರಲ್ಲ, ಬೆದರಲ್ಲ. ತನಿಖೆ ನಡೆಸಿ ಹೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇನೆ. ಈ ಬಗ್ಗೆ ಪೊಲೀಸರಿಗೆ ದೂರು ಕೊಟ್ಟಿದ್ದೇನೆ, ಕ್ರಮಕೈಗೊಳ್ಳುವ ವಿಶ್ವಾಸವಿದೆ ಎಂದರು.
ಕೊಲೆ, ದರೋಡೆ ಮಾಡುವ ಮುಸಲ್ಮಾನರಿಗೆ ಗೂಂಡಾ ಎಂದು ಕರೆಯುತ್ತೇನೆ. ಎಲ್ಲಾ ಮುಸಲ್ಮಾರಿಗೆ ನಾನು ಹಾಗೆ ಕರೆದಿಲ್ಲ. ಹಿಂದೂ ಹರ್ಷಾ, ಪ್ರವೀಣ್ ನೆಟ್ಟಾರ್ ಕೊಲೆ ಮಾಡಿದವರು ಹೇಡಿಗಳಂತೆ ಕೃತ್ಯ ಎಸಗಿದ್ದಾರೆ. ಮೊನ್ನೆ ಶಿವಮೊಗ್ಗದಲ್ಲಿ ಪ್ರೇಮ್ ಸಿಂಗ್ ಎಂಬಾತನಿಗೆ ಚಾಕು ಇರಿದು ಹೋಗಿದ್ದೂ ಹೇಡಿತನದಿಂದ. ಎದುರು ಬಂದರೆ ಬೇರೆ ತರಹ, ಈ ಪತ್ರವೂ ಹೇಡಿತನದ್ದು, ನಾನು ಹದರೋದಿಲ್ಲ. ಯಾವ ಮುಸ್ಲಿಂ ಗೂಂಡಾ ಪ್ರವೃತ್ತಿ ಮಾಡ್ತಾರೋ ಅಂಥವರಿಗೆ ಗೂಂಡಾ ಅಂತ ಕರೆಯದೇ, ಒಳ್ಳೇಯವರು ಎನ್ನಬೇಕಾ? ಯಾರೋ ಹೇಡಿ ಗುಂಡಾ ಪ್ರವೃತ್ತಿಯವನೇ ಈ ಪತ್ರ ಬರೆದಿರಬೇಕು. ಪತ್ರ ಬಂದಿದೆ, ಎಲ್ಲಿಂದ ಎಂಬುದು ಗೊತ್ತಿಲ್ಲ. ಈ ಹಿಂದೆ ವಿದೇಶದಿಂದಲೂ ಕರೆ ಬಂದಿತ್ತು. ಯಾರೋ ಹೇಡಿ ಗೂಂಡಾ ಪ್ರವೃತ್ತಿಯವನೇ ಇರಬೇಕು' ಎಂದು ಈಶ್ವರಪ್ಪ ತಿಳಿಸಿದರು.
BJP leader and former minister K S Eshwarappa has reportedly received a threat letter by post. Written in Kannada, the letter by an unidentified person threatens to cut the former minister's tongue.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm