ಬ್ರೇಕಿಂಗ್ ನ್ಯೂಸ್
25-08-22 12:28 pm HK News Desk ಕರ್ನಾಟಕ
ಶಿವಮೊಗ್ಗ, ಆಗಸ್ಟ್ 25: ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಅನಾಮಧೇಯ ಬೆದರಿಕೆ ಪತ್ರ ಬಂದಿದೆ.
ನಾಲಗೆ ಕತ್ತರಿಸುವುದಾಗಿ ಬೆದರಿಕೆ ಪತ್ರದಲ್ಲಿ ಬರೆಯಲಾಗಿದೆ. ಮಲ್ಲೇಶ್ವರನಗರದಲ್ಲಿರುವ ಈಶ್ವರಪ್ಪ ಮನೆಗೆ ಅನಾಮಧೇಯ ಪತ್ರ ಬಂದಿದೆ.
ಮುಸ್ಲಿಂ ಗೂಂಡಾಗಳು ಎಂದು ಹೇಳುವ ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ, ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರಿನಲ್ಲಿ ಕಾಲೇಜು ಕಟ್ಟಲು ಬಳಸ್ತಿರುವುದು ಮುಸ್ಲಿಮರು ಕೊಟ್ಟಿರುವ ಸಿಮೆಂಟ್ ಬ್ಯಾಗ್ ಗಳು . ಆದರೂ ನಿನಗೆ ಮುಸ್ಲಿಮರು ಬೇಡ, ನಿನಗೆ ನಾಚಿಕೆಯಾಗಬೇಕು. ಮಗನೆ.. ನಿನ್ನ ನಾಲಗೆ ಕಟ್ ಮಾಡುತ್ತೇವೆ ಹುಷಾರ್ ಎಂದು ಬೆದರಿಕೆ ಪತ್ರದಲ್ಲಿ ಬರೆಯಲಾಗಿದೆ.
ನಾನು ಹೆದರಲ್ಲ, ಬೆದರಲ್ಲ ;
ಇನ್ನು ಈ ಬಗ್ಗೆ ಮಾತನಾಡಿರುವ ಕೆ.ಎಸ್.ಈಶ್ವರಪ್ಪ, ಯಾರೋ ಹೇಡಿಗಳು ಅನಾಮಧೇಯ ಬೆದರಿಕೆ ಪತ್ರ ಬರೆದಿದ್ದಾರೆ. ಈ ರೀತಿಯ ಗೊಡ್ಡು ಬೆದರಿಕೆಗಳಿಗೆ ನಾನು ಹೆದರಲ್ಲ, ಬೆದರಲ್ಲ. ತನಿಖೆ ನಡೆಸಿ ಹೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇನೆ. ಈ ಬಗ್ಗೆ ಪೊಲೀಸರಿಗೆ ದೂರು ಕೊಟ್ಟಿದ್ದೇನೆ, ಕ್ರಮಕೈಗೊಳ್ಳುವ ವಿಶ್ವಾಸವಿದೆ ಎಂದರು.
ಕೊಲೆ, ದರೋಡೆ ಮಾಡುವ ಮುಸಲ್ಮಾನರಿಗೆ ಗೂಂಡಾ ಎಂದು ಕರೆಯುತ್ತೇನೆ. ಎಲ್ಲಾ ಮುಸಲ್ಮಾರಿಗೆ ನಾನು ಹಾಗೆ ಕರೆದಿಲ್ಲ. ಹಿಂದೂ ಹರ್ಷಾ, ಪ್ರವೀಣ್ ನೆಟ್ಟಾರ್ ಕೊಲೆ ಮಾಡಿದವರು ಹೇಡಿಗಳಂತೆ ಕೃತ್ಯ ಎಸಗಿದ್ದಾರೆ. ಮೊನ್ನೆ ಶಿವಮೊಗ್ಗದಲ್ಲಿ ಪ್ರೇಮ್ ಸಿಂಗ್ ಎಂಬಾತನಿಗೆ ಚಾಕು ಇರಿದು ಹೋಗಿದ್ದೂ ಹೇಡಿತನದಿಂದ. ಎದುರು ಬಂದರೆ ಬೇರೆ ತರಹ, ಈ ಪತ್ರವೂ ಹೇಡಿತನದ್ದು, ನಾನು ಹದರೋದಿಲ್ಲ. ಯಾವ ಮುಸ್ಲಿಂ ಗೂಂಡಾ ಪ್ರವೃತ್ತಿ ಮಾಡ್ತಾರೋ ಅಂಥವರಿಗೆ ಗೂಂಡಾ ಅಂತ ಕರೆಯದೇ, ಒಳ್ಳೇಯವರು ಎನ್ನಬೇಕಾ? ಯಾರೋ ಹೇಡಿ ಗುಂಡಾ ಪ್ರವೃತ್ತಿಯವನೇ ಈ ಪತ್ರ ಬರೆದಿರಬೇಕು. ಪತ್ರ ಬಂದಿದೆ, ಎಲ್ಲಿಂದ ಎಂಬುದು ಗೊತ್ತಿಲ್ಲ. ಈ ಹಿಂದೆ ವಿದೇಶದಿಂದಲೂ ಕರೆ ಬಂದಿತ್ತು. ಯಾರೋ ಹೇಡಿ ಗೂಂಡಾ ಪ್ರವೃತ್ತಿಯವನೇ ಇರಬೇಕು' ಎಂದು ಈಶ್ವರಪ್ಪ ತಿಳಿಸಿದರು.
BJP leader and former minister K S Eshwarappa has reportedly received a threat letter by post. Written in Kannada, the letter by an unidentified person threatens to cut the former minister's tongue.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 11:48 am
HK News Staffer
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm