ಬ್ರೇಕಿಂಗ್ ನ್ಯೂಸ್
26-08-22 04:59 pm Bangalore Correspondent ಕರ್ನಾಟಕ
ಬೆಂಗಳೂರು, ಆ 26: ರಾಜ್ಯದಲ್ಲಿ ಹಿಂದೆ ಬಿಜೆಪಿ ಸರಕಾರ ಇದ್ದಾಗ ಭೂ ವ್ಯವಹಾರಗಳಲ್ಲಿ ಅಕ್ರಮ ನಡೆದು ಸ್ವತಃ ಕೈಗಾರಿಕಾ ಸಚಿವರೇ ಜೈಲಿಗೆ ಹೋದರು. ಅದರೂ ಬಿಜೆಪಿ ಪಾಠ ಕಲಿತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಿಡಿ ಕಾರಿದರು.
ದೇವನಹಳ್ಳಿಯ ಚನ್ನರಾಯಪಟ್ಟಣದಲ್ಲಿ ಕೃಷಿ ಭೂಮಿಯನ್ನು ಸರಕಾರ ನಿರ್ದಯವಾಗಿ ಸ್ವಾಧೀನ ಮಾಡಿಕೊಳ್ಳುತ್ತಿರುವುದು ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಬೃಹತ್ ರೈತ ಪ್ರತಿಭಟನೆಯಲ್ಲಿ ಪಾಲ್ಗೊಂಡ ನಂತರ ಕುಮಾರಸ್ವಾಮಿ ಮಾಧ್ಯಮಗಳ ಜತೆ ಮಾತನಾಡಿದರು.
"ಅಷ್ಟೆಲ್ಲಾ ಆದರೂ ಕೂಡ ಬಿಜೆಪಿಗೆ ಇನ್ನೂ ಬುದ್ದಿ ಬಂದಿಲ್ಲ. ಈಗಿನ ಕೈಗಾರಿಕಾ ಸಚಿವರದ್ದು ಬ್ರಹ್ಮಾಂಡ ಭ್ರಷ್ಟಾಚಾರ ಇದೆ. ರೈತರ ಬದುಕಿನ ಜೊತೆ ಚೆಲ್ಲಾಟ ಆಡುವುದು ಮುರುಗೇಶ್ ನಿರಾಣಿ ಮಾಡುತ್ತಿರುವ ಘನಂದಾರಿ ಕೆಲಸ. ಇವರ ದೃಷ್ಟಿಯಲ್ಲಿ ರೈತರು ಬದುಕುವ ಹಾಗೆಯೇ ಇಲ್ಲ. ಬೆಂಗಳೂರಿನಲ್ಲಿಯೂ ಬದಕಲು ಸಾಧ್ಯವಿಲ್ಲದ ಪರಿಸ್ಥಿತಿ ಇದೆ" ಎಂದು ಕುಮಾರಸ್ವಾಮಿ, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿರುದ್ದ ಟೀಕಾ ಪ್ರಹಾರ ನಡೆಸಿದರು.
"ಕೇವಲ ಬೆಂಗಳೂರು ನಗರದ ಸುತ್ತಮುತ್ತಲಿನ ಪ್ರದೇಶದಲ್ಲಿಯೇ ಕೈಗಾರಿಕೆ ಬರಬೇಕು ಎಂಬ ಚಿಂತನೆ ಬಿಡಿ, ಕೃಷಿಯೇತರ ಭೂಮಿಗಳಲ್ಲಿ ಕೈಗಾರಿಕೆಗಳನ್ನು ಆರಂಭ ಮಾಡಬೇಕೆ ವಿನಾ ಫಲವತ್ತಾದ ಜಮೀನನನ್ನು ಕಿತ್ತುಕೊಂಡು ಅಲ್ಲಿ ಕೈಗಾರಿಕೆ ಮಾಡುವುದಲ್ಲ" ಎಂದು ಮಾಜಿ ಮುಖ್ಯಮಂತ್ರಿಗಳು ಕಿಡಿಕಾರಿದರು.
ಸಿಸೋಡಿಯಾ ಅವರನ್ನು ಹಿಡಿಯಲು ಹೊರಟಿದ್ದಾರೆ ;
"ರಾಜ್ಯದಲ್ಲಿ ಅಕ್ರಮ, ಅನ್ಯಾಯಗಳು ಎಷ್ಟು ಮೇರೆ ಮೀರಿವೆ ಎಂದರೆ, ತಪ್ಪಿತಸ್ಥರಿಗೆ ಒಂದು ಪರಪ್ಪನ ಆಗ್ರಹಾರ ಜೈಲು ಸಾಲುವುದಿಲ್ಲ. ಈಗಿನ ಭ್ರಷ್ಟಾಚಾರ ನೋಡಿದರೆ 10-15 ಪರಪ್ಪನ ಅಗ್ರಹಾರ ಜೈಲುಗಳು ಬೇಕು. ಇಷ್ಟೆಲ್ಲಾ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಇಟ್ಟುಕೊಂಡು ಪಾಪ.. ಸಿಸೋಡಿಯಾ ಅವರನ್ನು ಹಿಡಿಯಲು ಹೊರಟಿದ್ದಾರೆ. ಅಬಕಾರಿ ನೀತಿಯಲ್ಲಿ ಒಂದು ಕೋಟಿ ವರ್ಗಾವಣೆ ಆಗಿದೆ ಅಂತ ಆರೋಪ ಮಾಡಿ ಅವರ ಮೇಲೆ ದಾಳಿ ನಡೆಸಲಾಗುತ್ತಿದೆ" ಎಂದು ಕುಮಾರಸ್ವಾಮಿ ಕಿಡಿಕಾರಿದರು.
Bjp has highly corrupted people, 10-15 jails aren't enough slams HDK.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm