ಬ್ರೇಕಿಂಗ್ ನ್ಯೂಸ್
26-08-22 04:59 pm Bangalore Correspondent ಕರ್ನಾಟಕ
ಬೆಂಗಳೂರು, ಆ 26: ರಾಜ್ಯದಲ್ಲಿ ಹಿಂದೆ ಬಿಜೆಪಿ ಸರಕಾರ ಇದ್ದಾಗ ಭೂ ವ್ಯವಹಾರಗಳಲ್ಲಿ ಅಕ್ರಮ ನಡೆದು ಸ್ವತಃ ಕೈಗಾರಿಕಾ ಸಚಿವರೇ ಜೈಲಿಗೆ ಹೋದರು. ಅದರೂ ಬಿಜೆಪಿ ಪಾಠ ಕಲಿತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಿಡಿ ಕಾರಿದರು.
ದೇವನಹಳ್ಳಿಯ ಚನ್ನರಾಯಪಟ್ಟಣದಲ್ಲಿ ಕೃಷಿ ಭೂಮಿಯನ್ನು ಸರಕಾರ ನಿರ್ದಯವಾಗಿ ಸ್ವಾಧೀನ ಮಾಡಿಕೊಳ್ಳುತ್ತಿರುವುದು ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಬೃಹತ್ ರೈತ ಪ್ರತಿಭಟನೆಯಲ್ಲಿ ಪಾಲ್ಗೊಂಡ ನಂತರ ಕುಮಾರಸ್ವಾಮಿ ಮಾಧ್ಯಮಗಳ ಜತೆ ಮಾತನಾಡಿದರು.

"ಅಷ್ಟೆಲ್ಲಾ ಆದರೂ ಕೂಡ ಬಿಜೆಪಿಗೆ ಇನ್ನೂ ಬುದ್ದಿ ಬಂದಿಲ್ಲ. ಈಗಿನ ಕೈಗಾರಿಕಾ ಸಚಿವರದ್ದು ಬ್ರಹ್ಮಾಂಡ ಭ್ರಷ್ಟಾಚಾರ ಇದೆ. ರೈತರ ಬದುಕಿನ ಜೊತೆ ಚೆಲ್ಲಾಟ ಆಡುವುದು ಮುರುಗೇಶ್ ನಿರಾಣಿ ಮಾಡುತ್ತಿರುವ ಘನಂದಾರಿ ಕೆಲಸ. ಇವರ ದೃಷ್ಟಿಯಲ್ಲಿ ರೈತರು ಬದುಕುವ ಹಾಗೆಯೇ ಇಲ್ಲ. ಬೆಂಗಳೂರಿನಲ್ಲಿಯೂ ಬದಕಲು ಸಾಧ್ಯವಿಲ್ಲದ ಪರಿಸ್ಥಿತಿ ಇದೆ" ಎಂದು ಕುಮಾರಸ್ವಾಮಿ, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿರುದ್ದ ಟೀಕಾ ಪ್ರಹಾರ ನಡೆಸಿದರು.
"ಕೇವಲ ಬೆಂಗಳೂರು ನಗರದ ಸುತ್ತಮುತ್ತಲಿನ ಪ್ರದೇಶದಲ್ಲಿಯೇ ಕೈಗಾರಿಕೆ ಬರಬೇಕು ಎಂಬ ಚಿಂತನೆ ಬಿಡಿ, ಕೃಷಿಯೇತರ ಭೂಮಿಗಳಲ್ಲಿ ಕೈಗಾರಿಕೆಗಳನ್ನು ಆರಂಭ ಮಾಡಬೇಕೆ ವಿನಾ ಫಲವತ್ತಾದ ಜಮೀನನನ್ನು ಕಿತ್ತುಕೊಂಡು ಅಲ್ಲಿ ಕೈಗಾರಿಕೆ ಮಾಡುವುದಲ್ಲ" ಎಂದು ಮಾಜಿ ಮುಖ್ಯಮಂತ್ರಿಗಳು ಕಿಡಿಕಾರಿದರು.
ಸಿಸೋಡಿಯಾ ಅವರನ್ನು ಹಿಡಿಯಲು ಹೊರಟಿದ್ದಾರೆ ;
"ರಾಜ್ಯದಲ್ಲಿ ಅಕ್ರಮ, ಅನ್ಯಾಯಗಳು ಎಷ್ಟು ಮೇರೆ ಮೀರಿವೆ ಎಂದರೆ, ತಪ್ಪಿತಸ್ಥರಿಗೆ ಒಂದು ಪರಪ್ಪನ ಆಗ್ರಹಾರ ಜೈಲು ಸಾಲುವುದಿಲ್ಲ. ಈಗಿನ ಭ್ರಷ್ಟಾಚಾರ ನೋಡಿದರೆ 10-15 ಪರಪ್ಪನ ಅಗ್ರಹಾರ ಜೈಲುಗಳು ಬೇಕು. ಇಷ್ಟೆಲ್ಲಾ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಇಟ್ಟುಕೊಂಡು ಪಾಪ.. ಸಿಸೋಡಿಯಾ ಅವರನ್ನು ಹಿಡಿಯಲು ಹೊರಟಿದ್ದಾರೆ. ಅಬಕಾರಿ ನೀತಿಯಲ್ಲಿ ಒಂದು ಕೋಟಿ ವರ್ಗಾವಣೆ ಆಗಿದೆ ಅಂತ ಆರೋಪ ಮಾಡಿ ಅವರ ಮೇಲೆ ದಾಳಿ ನಡೆಸಲಾಗುತ್ತಿದೆ" ಎಂದು ಕುಮಾರಸ್ವಾಮಿ ಕಿಡಿಕಾರಿದರು.
Bjp has highly corrupted people, 10-15 jails aren't enough slams HDK.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm