ಬ್ರೇಕಿಂಗ್ ನ್ಯೂಸ್
26-08-22 04:59 pm Bangalore Correspondent ಕರ್ನಾಟಕ
ಬೆಂಗಳೂರು, ಆ 26: ರಾಜ್ಯದಲ್ಲಿ ಹಿಂದೆ ಬಿಜೆಪಿ ಸರಕಾರ ಇದ್ದಾಗ ಭೂ ವ್ಯವಹಾರಗಳಲ್ಲಿ ಅಕ್ರಮ ನಡೆದು ಸ್ವತಃ ಕೈಗಾರಿಕಾ ಸಚಿವರೇ ಜೈಲಿಗೆ ಹೋದರು. ಅದರೂ ಬಿಜೆಪಿ ಪಾಠ ಕಲಿತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಿಡಿ ಕಾರಿದರು.
ದೇವನಹಳ್ಳಿಯ ಚನ್ನರಾಯಪಟ್ಟಣದಲ್ಲಿ ಕೃಷಿ ಭೂಮಿಯನ್ನು ಸರಕಾರ ನಿರ್ದಯವಾಗಿ ಸ್ವಾಧೀನ ಮಾಡಿಕೊಳ್ಳುತ್ತಿರುವುದು ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಬೃಹತ್ ರೈತ ಪ್ರತಿಭಟನೆಯಲ್ಲಿ ಪಾಲ್ಗೊಂಡ ನಂತರ ಕುಮಾರಸ್ವಾಮಿ ಮಾಧ್ಯಮಗಳ ಜತೆ ಮಾತನಾಡಿದರು.

"ಅಷ್ಟೆಲ್ಲಾ ಆದರೂ ಕೂಡ ಬಿಜೆಪಿಗೆ ಇನ್ನೂ ಬುದ್ದಿ ಬಂದಿಲ್ಲ. ಈಗಿನ ಕೈಗಾರಿಕಾ ಸಚಿವರದ್ದು ಬ್ರಹ್ಮಾಂಡ ಭ್ರಷ್ಟಾಚಾರ ಇದೆ. ರೈತರ ಬದುಕಿನ ಜೊತೆ ಚೆಲ್ಲಾಟ ಆಡುವುದು ಮುರುಗೇಶ್ ನಿರಾಣಿ ಮಾಡುತ್ತಿರುವ ಘನಂದಾರಿ ಕೆಲಸ. ಇವರ ದೃಷ್ಟಿಯಲ್ಲಿ ರೈತರು ಬದುಕುವ ಹಾಗೆಯೇ ಇಲ್ಲ. ಬೆಂಗಳೂರಿನಲ್ಲಿಯೂ ಬದಕಲು ಸಾಧ್ಯವಿಲ್ಲದ ಪರಿಸ್ಥಿತಿ ಇದೆ" ಎಂದು ಕುಮಾರಸ್ವಾಮಿ, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿರುದ್ದ ಟೀಕಾ ಪ್ರಹಾರ ನಡೆಸಿದರು.
"ಕೇವಲ ಬೆಂಗಳೂರು ನಗರದ ಸುತ್ತಮುತ್ತಲಿನ ಪ್ರದೇಶದಲ್ಲಿಯೇ ಕೈಗಾರಿಕೆ ಬರಬೇಕು ಎಂಬ ಚಿಂತನೆ ಬಿಡಿ, ಕೃಷಿಯೇತರ ಭೂಮಿಗಳಲ್ಲಿ ಕೈಗಾರಿಕೆಗಳನ್ನು ಆರಂಭ ಮಾಡಬೇಕೆ ವಿನಾ ಫಲವತ್ತಾದ ಜಮೀನನನ್ನು ಕಿತ್ತುಕೊಂಡು ಅಲ್ಲಿ ಕೈಗಾರಿಕೆ ಮಾಡುವುದಲ್ಲ" ಎಂದು ಮಾಜಿ ಮುಖ್ಯಮಂತ್ರಿಗಳು ಕಿಡಿಕಾರಿದರು.
ಸಿಸೋಡಿಯಾ ಅವರನ್ನು ಹಿಡಿಯಲು ಹೊರಟಿದ್ದಾರೆ ;
"ರಾಜ್ಯದಲ್ಲಿ ಅಕ್ರಮ, ಅನ್ಯಾಯಗಳು ಎಷ್ಟು ಮೇರೆ ಮೀರಿವೆ ಎಂದರೆ, ತಪ್ಪಿತಸ್ಥರಿಗೆ ಒಂದು ಪರಪ್ಪನ ಆಗ್ರಹಾರ ಜೈಲು ಸಾಲುವುದಿಲ್ಲ. ಈಗಿನ ಭ್ರಷ್ಟಾಚಾರ ನೋಡಿದರೆ 10-15 ಪರಪ್ಪನ ಅಗ್ರಹಾರ ಜೈಲುಗಳು ಬೇಕು. ಇಷ್ಟೆಲ್ಲಾ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಇಟ್ಟುಕೊಂಡು ಪಾಪ.. ಸಿಸೋಡಿಯಾ ಅವರನ್ನು ಹಿಡಿಯಲು ಹೊರಟಿದ್ದಾರೆ. ಅಬಕಾರಿ ನೀತಿಯಲ್ಲಿ ಒಂದು ಕೋಟಿ ವರ್ಗಾವಣೆ ಆಗಿದೆ ಅಂತ ಆರೋಪ ಮಾಡಿ ಅವರ ಮೇಲೆ ದಾಳಿ ನಡೆಸಲಾಗುತ್ತಿದೆ" ಎಂದು ಕುಮಾರಸ್ವಾಮಿ ಕಿಡಿಕಾರಿದರು.
Bjp has highly corrupted people, 10-15 jails aren't enough slams HDK.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm