ಬ್ರೇಕಿಂಗ್ ನ್ಯೂಸ್
27-08-22 04:43 pm HK News Desk ಕರ್ನಾಟಕ
ಮೈಸೂರು, ಆಗಸ್ಟ್ 27: ಮುರುಘಾ ಮಠದ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯದ ಬಗ್ಗೆ ಎಫ್ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಘಟನೆ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕೆಂದು ಮೈಸೂರಿನ ಒಡನಾಡಿ ಸಂಸ್ಥೆ ಆಗ್ರಹ ಮಾಡಿದೆ.
ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ, ಪರಶು ಮತ್ತು ಕೌನ್ಸಿಲರ್ ಸರಸ್ವತಿ ಹೇಳಿಕೆ ನೀಡಿದ್ದು ಪ್ರೌಢಶಾಲೆಯ ಮಕ್ಕಳನ್ನು ಲೈಂಗಿಕ ದೌರ್ಜನ್ಯಕ್ಕೆ ಒಳಪಡಿಸಿರುವ ಘಟನೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.
ಜುಲೈ 24 ರಂದು ಮಕ್ಕಳು ದೌರ್ಜನ್ಯದಿಂದ ಬೇಸತ್ತು ಬೆಂಗಳೂರಿನ ಮೆಜೆಸ್ಟಿಕ್ ಗೆ ಬಂದಿದ್ದರು. ಅಲ್ಲಿ ಬಹಳಷ್ಟು ಸಮಯ ಒಂದೇ ಕಡೆ ನಿಂತಿದ್ದರಿಂದ ಆಟೋ ಚಾಲಕರೊಬ್ಬರು ಅವರನ್ನು ವಿಚಾರಿಸಿ, ಸಮೀಪದ ಕಾಟನ್ ಪೇಟೆ ಪೊಲೀಸ್ ಸ್ಟೇಷನ್ ಗೆ ಕರೆದೊಯ್ದಿದ್ದಾರೆ. ಠಾಣೆಯಲ್ಲಿ ಮಕ್ಕಳು ಯಾರನ್ನು ಭೇಟಿ ಮಾಡಿದ್ರು ಅನ್ನೋ ಮಾಹಿತಿ ನಮಗಿಲ್ಲ. ಆದರೆ ಠಾಣೆಗೆ ಹೋಗಿರೋದು ನಿಜ. ಮಕ್ಕಳು ಭಯದ ಕಾರಣಕ್ಕೆ ತಮ್ಮ ಮೇಲೆ ಆಗಿರುವ ಲೈಂಗಿಕ ದೌರ್ಜನ್ಯದ ಬಗ್ಗೆ ಹೇಳಿಲ್ಲ.
ಸ್ವಾಮೀಜಿಯವರು ತಮ್ಮ ಮೇಲೆ ದೈಹಿಕವಾಗಿ ಹಲ್ಲೆ ಮಾಡುತ್ತಾರೆ. ಕೆಟ್ಟದಾಗಿ ನಿಂದಿಸುತ್ತಾರೆ ಎಂದಷ್ಟೇ ಹೇಳಿದ್ದಾರೆ. ಠಾಣೆಯಲ್ಲಿ ಸತ್ಯ ಹೇಳಿದ್ರೆ ಸ್ವಾಮೀಜಿಯವರು ಪ್ರಭಾವಿಗಳು, ತೊಂದರೆ ಆಗಬಹುದು ಎಂಬ ಕಾರಣಕ್ಕೆ ಸತ್ಯ ಹೇಳಿಲ್ಲ. ಪೊಲೀಸರು ಸಂಯಮದಿಂದ ಅವರನ್ನು ವಿಚಾರಿಸಿದ್ದರೆ ಸತ್ಯಾಂಶ ಹೊರಬರುತ್ತಿತ್ತು. ಆದರೆ ಪೊಲೀಸರು ಅಪ್ರಾಪ್ತ ಹೆಣ್ಣು ಮಕ್ಕಳಿಂದ ಸರಿಯಾಗಿ ಮಾಹಿತಿ ಪಡೆಯದೆ ನಿರ್ಲಕ್ಷ್ಯ ಮಾಡಿದ್ದಾರೆ.
ಪೊಲೀಸರಿಂದ ನ್ಯಾಯ ಸಿಗುತ್ತೆ ಎಂಬ ಖಾತ್ರಿ ಇದ್ದಿದ್ದರೆ ಆ ಮಕ್ಕಳು ನಮ್ಮ ತನಕ ಬರುತ್ತಿರಲಿಲ್ಲ. ಹೀಗಾಗಿ ಆ ಮಕ್ಕಳು ಬೇರೊಬ್ಬರ ಸಹಾಯ ಪಡೆದು ನಮ್ಮ ಬಳಿ ಬಂದಿದ್ದಾರೆ. ನಾವು ಅವರ ಪರ ನಿಂತು ಎಫ್.ಐ.ಆರ್. ಮಾಡಿಸಿದ್ದೇವೆ. ಮಕ್ಕಳ ಮಾನಸಿಕ ಸ್ಥಿತಿ ಧೃಡವಾಗಿಯೇನೂ ಇಲ್ಲ. ತುಂಬಾ ಹೆದರಿಕೆಯಿಂದಲೇ ನಮ್ಮ ಬಳಿ ಆಗಿರುವ ಅನ್ಯಾಯದ ಬಗ್ಗೆ ಹೇಳಿಕೊಂಡಿದ್ದಾರೆ ಎಂದು ಕೌನ್ಸಿಲರ್ ಸರಸ್ವತಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.
Murugha Matha Sri Shivamuruthy alleged of continuous Sexual harassment of hostel girls posco case filed in Chitradurga.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm