ಬ್ರೇಕಿಂಗ್ ನ್ಯೂಸ್
27-08-22 04:43 pm HK News Desk ಕರ್ನಾಟಕ
ಮೈಸೂರು, ಆಗಸ್ಟ್ 27: ಮುರುಘಾ ಮಠದ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯದ ಬಗ್ಗೆ ಎಫ್ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಘಟನೆ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕೆಂದು ಮೈಸೂರಿನ ಒಡನಾಡಿ ಸಂಸ್ಥೆ ಆಗ್ರಹ ಮಾಡಿದೆ.
ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ, ಪರಶು ಮತ್ತು ಕೌನ್ಸಿಲರ್ ಸರಸ್ವತಿ ಹೇಳಿಕೆ ನೀಡಿದ್ದು ಪ್ರೌಢಶಾಲೆಯ ಮಕ್ಕಳನ್ನು ಲೈಂಗಿಕ ದೌರ್ಜನ್ಯಕ್ಕೆ ಒಳಪಡಿಸಿರುವ ಘಟನೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.
ಜುಲೈ 24 ರಂದು ಮಕ್ಕಳು ದೌರ್ಜನ್ಯದಿಂದ ಬೇಸತ್ತು ಬೆಂಗಳೂರಿನ ಮೆಜೆಸ್ಟಿಕ್ ಗೆ ಬಂದಿದ್ದರು. ಅಲ್ಲಿ ಬಹಳಷ್ಟು ಸಮಯ ಒಂದೇ ಕಡೆ ನಿಂತಿದ್ದರಿಂದ ಆಟೋ ಚಾಲಕರೊಬ್ಬರು ಅವರನ್ನು ವಿಚಾರಿಸಿ, ಸಮೀಪದ ಕಾಟನ್ ಪೇಟೆ ಪೊಲೀಸ್ ಸ್ಟೇಷನ್ ಗೆ ಕರೆದೊಯ್ದಿದ್ದಾರೆ. ಠಾಣೆಯಲ್ಲಿ ಮಕ್ಕಳು ಯಾರನ್ನು ಭೇಟಿ ಮಾಡಿದ್ರು ಅನ್ನೋ ಮಾಹಿತಿ ನಮಗಿಲ್ಲ. ಆದರೆ ಠಾಣೆಗೆ ಹೋಗಿರೋದು ನಿಜ. ಮಕ್ಕಳು ಭಯದ ಕಾರಣಕ್ಕೆ ತಮ್ಮ ಮೇಲೆ ಆಗಿರುವ ಲೈಂಗಿಕ ದೌರ್ಜನ್ಯದ ಬಗ್ಗೆ ಹೇಳಿಲ್ಲ.
ಸ್ವಾಮೀಜಿಯವರು ತಮ್ಮ ಮೇಲೆ ದೈಹಿಕವಾಗಿ ಹಲ್ಲೆ ಮಾಡುತ್ತಾರೆ. ಕೆಟ್ಟದಾಗಿ ನಿಂದಿಸುತ್ತಾರೆ ಎಂದಷ್ಟೇ ಹೇಳಿದ್ದಾರೆ. ಠಾಣೆಯಲ್ಲಿ ಸತ್ಯ ಹೇಳಿದ್ರೆ ಸ್ವಾಮೀಜಿಯವರು ಪ್ರಭಾವಿಗಳು, ತೊಂದರೆ ಆಗಬಹುದು ಎಂಬ ಕಾರಣಕ್ಕೆ ಸತ್ಯ ಹೇಳಿಲ್ಲ. ಪೊಲೀಸರು ಸಂಯಮದಿಂದ ಅವರನ್ನು ವಿಚಾರಿಸಿದ್ದರೆ ಸತ್ಯಾಂಶ ಹೊರಬರುತ್ತಿತ್ತು. ಆದರೆ ಪೊಲೀಸರು ಅಪ್ರಾಪ್ತ ಹೆಣ್ಣು ಮಕ್ಕಳಿಂದ ಸರಿಯಾಗಿ ಮಾಹಿತಿ ಪಡೆಯದೆ ನಿರ್ಲಕ್ಷ್ಯ ಮಾಡಿದ್ದಾರೆ.
ಪೊಲೀಸರಿಂದ ನ್ಯಾಯ ಸಿಗುತ್ತೆ ಎಂಬ ಖಾತ್ರಿ ಇದ್ದಿದ್ದರೆ ಆ ಮಕ್ಕಳು ನಮ್ಮ ತನಕ ಬರುತ್ತಿರಲಿಲ್ಲ. ಹೀಗಾಗಿ ಆ ಮಕ್ಕಳು ಬೇರೊಬ್ಬರ ಸಹಾಯ ಪಡೆದು ನಮ್ಮ ಬಳಿ ಬಂದಿದ್ದಾರೆ. ನಾವು ಅವರ ಪರ ನಿಂತು ಎಫ್.ಐ.ಆರ್. ಮಾಡಿಸಿದ್ದೇವೆ. ಮಕ್ಕಳ ಮಾನಸಿಕ ಸ್ಥಿತಿ ಧೃಡವಾಗಿಯೇನೂ ಇಲ್ಲ. ತುಂಬಾ ಹೆದರಿಕೆಯಿಂದಲೇ ನಮ್ಮ ಬಳಿ ಆಗಿರುವ ಅನ್ಯಾಯದ ಬಗ್ಗೆ ಹೇಳಿಕೊಂಡಿದ್ದಾರೆ ಎಂದು ಕೌನ್ಸಿಲರ್ ಸರಸ್ವತಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.
Murugha Matha Sri Shivamuruthy alleged of continuous Sexual harassment of hostel girls posco case filed in Chitradurga.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm