ಬ್ರೇಕಿಂಗ್ ನ್ಯೂಸ್
27-08-22 08:54 pm HK News Desk ಕರ್ನಾಟಕ
ಕಲಬುರ್ಗಿ, ಆಗಸ್ಟ್ 27 : ಅಕ್ರಮ ಪಿಎಸ್ಐ ನೇಮಕಾತಿ ಪ್ರಕರಣ ಸಂಬಂಧಿಸಿ ಒಎಂಆರ್ ಉತ್ತರ ಪತ್ರಿಕೆಯಲ್ಲಿ ತಿದ್ದುಪಡಿ ಮಾಡಿಸಿ ಮಹಿಳಾ ವಿಭಾಗದಲ್ಲಿ ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದಿದ್ದ ರಚನಾ ಹನುಮಂತ (25) ಎಂಬವರನ್ನು ಸಿಐಡಿ ಅಧಿಕಾರಿಗಳು ಕಡೆಗೂ ಶನಿವಾರ ಬಂಧಿಸಿದ್ದಾರೆ.
ಕಳೆದ ಮೂರುವರೆ ತಿಂಗಳಿಂದ ಪೊಲೀಸರ ಕಣ್ಣುತಪ್ಪಿಸಿ ತಿರುಗಾಡುತ್ತಿದ್ದ ರಚನಾ ಒಂದೆಡೆ ನೆಲೆ ನಿಲ್ಲದೇ ಹಲವು ಕಡೆ ವಾಸ್ತವ್ಯ ಬದಲಾಯಿಸಿದ್ದರು. ಬೆಂಗಳೂರು, ಕಲಬುರಗಿ ಸಿಐಡಿ ಅಧಿಕಾರಿಗಳು ನಿರಂತರ ಹುಡುಕಾಟ ನಡೆಸಿದ್ದರು. ಮಹಾರಾಷ್ಟ್ರ ಗಡಿಯ ಆಳಂದ ತಾಲ್ಲೂಕಿನ ಹಿರೋಳ್ಳಿ ಚೆಕ್ಪೋಸ್ಟ್ ಬಳಿ ಸಿಐಡಿ ಡಿವೈಎಸ್ಪಿ ಶಂಕರಗೌಡ ಪಾಟೀಲ ಹಾಗೂ ಸಿಐಡಿ ಡಿಟೆಕ್ಟಿವ್ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ನೇತೃತ್ವದ ತಂಡವು ರಚನಾರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು. ಶನಿವಾರ ನಗರದ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶ ದಸ್ತಗೀರಸಾಬ್ ಮುಲ್ಲಾ ಅವರ ಎದುರು ಆರೋಪಿಯನ್ನು ಹಾಜರುಪಡಿಸಲಾಯಿತು.
ರಚನಾ ವಿರುದ್ಧ ಬೆಂಗಳೂರಿನಲ್ಲಿ ಎಫ್ಐಆರ್ ದಾಖಲಾಗಿದ್ದರಿಂದ ಟ್ರಾನ್ಸಿಟ್ ವಾರೆಂಟ್ ಪಡೆದ ಸಿಐಡಿ ಅಧಿಕಾರಿಗಳು ಶನಿವಾರ ಸಂಜೆ ಬೆಂಗಳೂರಿಗೆ ಕರೆದೊಯ್ದಿದ್ದಾರೆ. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿಯ ರಚನಾ ಪಿಎಸ್ಐ ಅಕ್ರಮದ ಆರೋಪ ಕೇಳಿಬಂದಾಗ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಿದ ಸರ್ಕಾರದ ಕ್ರಮ ಖಂಡಿಸಿ ಅಭ್ಯರ್ಥಿಗಳ ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿದ್ದರು. ತನ್ನ ವಿರುದ್ಧ ಎಫ್ಐಆರ್ ದಾಖಲಾಗುತ್ತಿದ್ದಂತೆಯೇ ರಚನಾ ನಾಪತ್ತೆಯಾಗಿದ್ದರು.
CID police have arrested a top ranker in the rigged PSI recruitment examination. Sources said that Rachana who had secured the top spot in the women’s quota in the exam was arrested for alleged irregularities.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm