ಬ್ರೇಕಿಂಗ್ ನ್ಯೂಸ್
27-08-22 08:54 pm HK News Desk ಕರ್ನಾಟಕ
ಕಲಬುರ್ಗಿ, ಆಗಸ್ಟ್ 27 : ಅಕ್ರಮ ಪಿಎಸ್ಐ ನೇಮಕಾತಿ ಪ್ರಕರಣ ಸಂಬಂಧಿಸಿ ಒಎಂಆರ್ ಉತ್ತರ ಪತ್ರಿಕೆಯಲ್ಲಿ ತಿದ್ದುಪಡಿ ಮಾಡಿಸಿ ಮಹಿಳಾ ವಿಭಾಗದಲ್ಲಿ ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದಿದ್ದ ರಚನಾ ಹನುಮಂತ (25) ಎಂಬವರನ್ನು ಸಿಐಡಿ ಅಧಿಕಾರಿಗಳು ಕಡೆಗೂ ಶನಿವಾರ ಬಂಧಿಸಿದ್ದಾರೆ.
ಕಳೆದ ಮೂರುವರೆ ತಿಂಗಳಿಂದ ಪೊಲೀಸರ ಕಣ್ಣುತಪ್ಪಿಸಿ ತಿರುಗಾಡುತ್ತಿದ್ದ ರಚನಾ ಒಂದೆಡೆ ನೆಲೆ ನಿಲ್ಲದೇ ಹಲವು ಕಡೆ ವಾಸ್ತವ್ಯ ಬದಲಾಯಿಸಿದ್ದರು. ಬೆಂಗಳೂರು, ಕಲಬುರಗಿ ಸಿಐಡಿ ಅಧಿಕಾರಿಗಳು ನಿರಂತರ ಹುಡುಕಾಟ ನಡೆಸಿದ್ದರು. ಮಹಾರಾಷ್ಟ್ರ ಗಡಿಯ ಆಳಂದ ತಾಲ್ಲೂಕಿನ ಹಿರೋಳ್ಳಿ ಚೆಕ್ಪೋಸ್ಟ್ ಬಳಿ ಸಿಐಡಿ ಡಿವೈಎಸ್ಪಿ ಶಂಕರಗೌಡ ಪಾಟೀಲ ಹಾಗೂ ಸಿಐಡಿ ಡಿಟೆಕ್ಟಿವ್ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ನೇತೃತ್ವದ ತಂಡವು ರಚನಾರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು. ಶನಿವಾರ ನಗರದ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶ ದಸ್ತಗೀರಸಾಬ್ ಮುಲ್ಲಾ ಅವರ ಎದುರು ಆರೋಪಿಯನ್ನು ಹಾಜರುಪಡಿಸಲಾಯಿತು.
ರಚನಾ ವಿರುದ್ಧ ಬೆಂಗಳೂರಿನಲ್ಲಿ ಎಫ್ಐಆರ್ ದಾಖಲಾಗಿದ್ದರಿಂದ ಟ್ರಾನ್ಸಿಟ್ ವಾರೆಂಟ್ ಪಡೆದ ಸಿಐಡಿ ಅಧಿಕಾರಿಗಳು ಶನಿವಾರ ಸಂಜೆ ಬೆಂಗಳೂರಿಗೆ ಕರೆದೊಯ್ದಿದ್ದಾರೆ. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿಯ ರಚನಾ ಪಿಎಸ್ಐ ಅಕ್ರಮದ ಆರೋಪ ಕೇಳಿಬಂದಾಗ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಿದ ಸರ್ಕಾರದ ಕ್ರಮ ಖಂಡಿಸಿ ಅಭ್ಯರ್ಥಿಗಳ ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿದ್ದರು. ತನ್ನ ವಿರುದ್ಧ ಎಫ್ಐಆರ್ ದಾಖಲಾಗುತ್ತಿದ್ದಂತೆಯೇ ರಚನಾ ನಾಪತ್ತೆಯಾಗಿದ್ದರು.
CID police have arrested a top ranker in the rigged PSI recruitment examination. Sources said that Rachana who had secured the top spot in the women’s quota in the exam was arrested for alleged irregularities.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm