ಬ್ರೇಕಿಂಗ್ ನ್ಯೂಸ್
29-08-22 03:37 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 29: ತರಗತಿ ಒಳಗಡೆ ಹಿಜಾಬ್ ಧರಿಸುವುದನ್ನು ನಿಷೇಧಿಸಿರುವ ಕರ್ನಾಟಕ ಹೈಕೋರ್ಟ್ ತೀರ್ಪಿಗೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡಿರುವ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ರಾಜ್ಯಾದ್ಯಂತ ಭಾರೀ ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿರುವ ಅರ್ಜಿಗಳ ವಿಚಾರಣೆಯನ್ನು ಕಡೆಗೂ ಸುಪ್ರೀಂ ಕೋರ್ಟ್ ಕೈಗೆತ್ತಿಕೊಂಡಿದೆ. ಪ್ರಕರಣದಲ್ಲಿ ಹಿಜಾಬ್ ನಿಷೇಧ ಆದೇಶ ಮಾಡಿರುವ ಕರ್ನಾಟಕ ಸರಕಾರವನ್ನು ಪಾರ್ಟಿ ಮಾಡಲು ಕೋರಲಾಗಿತ್ತು. ಇದರಂತೆ, ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನ್ಯಾಯಪೀಠವು ನಡೆಸುವುದಕ್ಕೂ ಮುನ್ನ ಕರ್ನಾಟಕ ಸರಕಾರಕ್ಕೆ ನೋಟಿಸ್ ಮಾಡಿದೆ. ಅಲ್ಲದೆ, ಸೆಪ್ಟೆಂಬರ್ 5ಕ್ಕೆ ವಿಚಾರಣೆ ನಡೆಸುವುದಾಗಿ ಹೇಳಿದೆ.

ಕಳೆದ ಜನವರಿ ತಿಂಗಳಲ್ಲಿ ಉಡುಪಿಯಲ್ಲಿ ಶುರುವಾಗಿದ್ದ ಹಿಜಾಬ್ ಪ್ರಕರಣ, ಕ್ರಮೇಣ ರಾಜ್ಯಾದ್ಯಂತ ವ್ಯಾಪಿಸಿ ತೀವ್ರ ಸದ್ದು ಮಾಡಿತ್ತು. ಸರಕಾರಿ ಪದವಿಪೂರ್ವ ಕಾಲೇಜು ತರಗತಿಗಳಲ್ಲಿ ಹಿಜಾಬ್ ಧರಿಸುವುದಕ್ಕೆ ನಿಷೇಧ ಹೇರಿದ ಶಿಕ್ಷಣ ಇಲಾಖೆಯ ಕ್ರಮವನ್ನು ಹೈಕೋರ್ಟ್ನಲ್ಲಿ ಪ್ರಶ್ನೆ ಮಾಡಲಾಗಿತ್ತು. ಭಾರೀ ಜಟಾಪಟಿಯ ಬಳಿಕ ಮಾರ್ಚ್ 15ರಂದು ರಾಜ್ಯ ಸರಕಾರದ ಕ್ರಮವನ್ನು ಸರಿಯೆಂದು ತೀರ್ಪು ನೀಡಿತ್ತು.

ಆದರೆ ಮುಸ್ಲಿಂ ಸಂಘಟನೆಗಳು ಹೈಕೋರ್ಟ್ ಆದೇಶವನ್ನು ಆಕ್ಷೇಪಿಸಿದ್ದವು. ಬಳಿಕ ಸುಪ್ರೀಂ ಕೋರ್ಟ್ ನಲ್ಲಿ 24 ಪ್ರತ್ಯೇಕ ಅರ್ಜಿಗಳನ್ನು ದಾಖಲಿಸಲಾಗಿತ್ತು. ಅರ್ಜಿಗಳನ್ನು ತುರ್ತಾಗಿ ಪರಿಗಣಿಸಬೇಕೆಂದು ಮನವಿ ಮಾಡಲಾಗಿತ್ತು. ಆದರೆ ತುರ್ತು ವಿಚಾರಣೆಗೆ ನಿರಾಕರಿಸಿದ್ದ ಸುಪ್ರೀಂ ಕೋರ್ಟ್, ಮಧ್ಯಂತರ ರಜೆಯ ಬಳಿಕ ವಿಚಾರಣೆ ನಡೆಸುವುದಾಗಿ ಹೇಳಿತ್ತು. ಸೋಮವಾರ ಮುಖ್ಯ ನ್ಯಾಯಾಧೀಶ ಯುಯು ಲಲಿತ್, ನ್ಯಾಯಮೂರ್ತಿ ಹೇಮಂತ್ ಗುಪ್ತಾ ಹಾಗೂ ಸುಧಾಂಶು ಧುಲಿಯಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಅರ್ಜಿಯನ್ನು ಒಂದಾಗಿಸಿ ವಿಚಾರಣೆ ಕೈಗೆತ್ತಿಕೊಂಡಿದೆ. ಇದೇ ವೇಳೆ, ಹಿಜಾಬ್ ಪರ ವಕೀಲರು ಅರ್ಜಿ ವಿಚಾರಣೆ ಮುಂದಕ್ಕೆ ಹಾಕುವಂತೆ ಮನವಿ ಮಾಡಿದ್ದಕ್ಕೆ ಗರಂ ಆಗಿರುವ ನ್ಯಾಯಪೀಠ ಈ ಹಿಂದೆ ನೀವೇ ತುರ್ತಾಗಿ ವಿಚಾರಣೆ ನಡೆಸಬೇಕು ಎಂದು ಹೇಳಿದ್ರಿ. ಈಗ ಮುಂದಕ್ಕೆ ಹಾಕಬೇಕೆಂದರೆ ಹೇಗೆ ? ಅದಕ್ಕೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.
The Supreme Court fixed the hearing of arguments on Monday in a batch of petitions challenging a Karnataka High Court decision upholding a State Government Order banning the wearing of hijab to classrooms while criticising the petitioner-students of "forum-shopping" for seeking an adjournment.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm