ಬ್ರೇಕಿಂಗ್ ನ್ಯೂಸ್
29-08-22 08:38 pm HK News Desk ಕರ್ನಾಟಕ
ಧರ್ಮಸ್ಥಳ, ಆಗಸ್ಟ್ 29: ಬಿಜೆಪಿ ನಾಯಕರು ತನ್ನನ್ನು ರಾಗಿ ಕಳ್ಳ ಎಂದು ಅವಹೇಳನ ಮಾಡಿದ್ದಕ್ಕೆ ಧರ್ಮಸ್ಥಳದಲ್ಲಿ ಆಣೆ ಪ್ರಮಾಣಕ್ಕೆ ಕರೆದಿದ್ದೆ. ಅವರು ಯಾರೂ ಬಂದಿಲ್ಲ. ನಾನು ಒಂದು ಕೆಜಿಯೂ ರಾಗಿ ಕದ್ದಿಲ್ಲ ಎಂದು ದೇವರ ಮುಂದೆ ಹೇಳಿದ್ದೇನೆ ಎಂಬುದಾಗಿ ಅರಸೀಕೆರೆ ಶಾಸಕ ಶಿವಲಿಂಗೇ ಗೌಡ ಹೇಳಿದ್ದಾರೆ.
ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಆಣೆ ಪ್ರಮಾಣ ಮಾಡಿ ಮಾಧ್ಯಮಗಳ ಜೊತೆ ಮಾತನಾಡಿದ ಶಿವಲಿಂಗೇ ಗೌಡರು, ನಾನು ಒಂದು ಕೆ.ಜಿ. ಯೂ ರಾಗಿ ಕದ್ದಿಲ್ಲ. ಮಾರಾಟ ಮಾಡಿಲ್ಲ. ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿ ಕುಮಾರ್ ನನ್ನನ್ನು ಸಾರ್ವಜನಿಕ ವೇದಿಕೆಯಲ್ಲಿ ರಾಗಿ ಕಳ್ಳ ಎಂದಿದ್ದರು, ಈ ವಿಚಾರವಾಗಿ ಅವರನ್ನು ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಮುಂದೆ ಆಣೆ ಪ್ರಮಾಣಕ್ಕೆ ಕರೆದಿದ್ದೆ. ಆದರೆ ಅವರು ಬಂದಿಲ್ಲ. ಅದಕ್ಕೋಸ್ಕರ ಮಂಜುನಾಥ ಸ್ವಾಮಿಯ ಮುಂದೆ ನನ್ನ ಮಾತನ್ನು ಹೇಳಿದ್ದೇನೆ ಎಂದರು.
ರಾಜಕೀಯ ಕಾರಣಕ್ಕೆ ಈ ರೀತಿಯ ಆರೋಪ ಮಾಡಿದ್ದಾರೆ. ಈ ವಿಚಾರವಾಗಿ ನಾನು ಎಲ್ಲಾ ರೀತಿಯ ಹೋರಾಟಕ್ಕೂ, ಚರ್ಚೆಗೂ ಸಿದ್ಧನಿದ್ದೇನೆ. ಆಣೆ ಪ್ರಮಾಣಕ್ಕೆ ಮೊದಲು ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆಯವರನ್ನು ಭೇಟಿ ಮಾಡಿದ್ದೇನೆ. ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರಿಂದ ಶಾಲು ಹೊದಿಸಿ ಗೌರವಿಸಿದ್ದೇನೆ. ಹಾಸನ ಜಿಲ್ಲೆಯ ಕೃಷಿ ವಿಚಾರವಾಗಿ ಅವರು ನನ್ನ ಬಳಿ ಚರ್ಚೆ ನಡೆಸಿದ್ದಾರೆ. ಆಣೆ ಪ್ರಮಾಣದ ವಿಷಯವನ್ನು ಅವರ ಜೊತೆ ಮಾತನಾಡಿಲ್ಲ. ದಾಖಲೆ ಬಿಡುಗಡೆ ಮಾಡುತ್ತೇವೆ ಎಂದಿದ್ದರು. ಈಗ ದಾಖಲೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕುತ್ತೇನೆ. ಸಾರ್ವಜನಿಕವಾಗಿ ಹೆಸರು ಕೆಡಿಸುವ ಇಂಥವರ ವಿರುದ್ಧ ಕಾನೂನು ಹೋರಾಟವನ್ನೂ ಮಾಡುತ್ತೇನೆ ಎಂದಿದ್ದಾರೆ.
Bjp general secretary Ravi Kumar had called me a ragi thief on a public platform and I had called him for an oath in front of Dharmasthala Manjunatheshwara Swamy on this issue. But they haven't come. That is why I have said my word in front of Manjunatha Swamy.
10-08-25 09:12 pm
HK News Desk
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm