ಬ್ರೇಕಿಂಗ್ ನ್ಯೂಸ್
29-08-22 08:38 pm HK News Desk ಕರ್ನಾಟಕ
ಧರ್ಮಸ್ಥಳ, ಆಗಸ್ಟ್ 29: ಬಿಜೆಪಿ ನಾಯಕರು ತನ್ನನ್ನು ರಾಗಿ ಕಳ್ಳ ಎಂದು ಅವಹೇಳನ ಮಾಡಿದ್ದಕ್ಕೆ ಧರ್ಮಸ್ಥಳದಲ್ಲಿ ಆಣೆ ಪ್ರಮಾಣಕ್ಕೆ ಕರೆದಿದ್ದೆ. ಅವರು ಯಾರೂ ಬಂದಿಲ್ಲ. ನಾನು ಒಂದು ಕೆಜಿಯೂ ರಾಗಿ ಕದ್ದಿಲ್ಲ ಎಂದು ದೇವರ ಮುಂದೆ ಹೇಳಿದ್ದೇನೆ ಎಂಬುದಾಗಿ ಅರಸೀಕೆರೆ ಶಾಸಕ ಶಿವಲಿಂಗೇ ಗೌಡ ಹೇಳಿದ್ದಾರೆ.
ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಆಣೆ ಪ್ರಮಾಣ ಮಾಡಿ ಮಾಧ್ಯಮಗಳ ಜೊತೆ ಮಾತನಾಡಿದ ಶಿವಲಿಂಗೇ ಗೌಡರು, ನಾನು ಒಂದು ಕೆ.ಜಿ. ಯೂ ರಾಗಿ ಕದ್ದಿಲ್ಲ. ಮಾರಾಟ ಮಾಡಿಲ್ಲ. ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿ ಕುಮಾರ್ ನನ್ನನ್ನು ಸಾರ್ವಜನಿಕ ವೇದಿಕೆಯಲ್ಲಿ ರಾಗಿ ಕಳ್ಳ ಎಂದಿದ್ದರು, ಈ ವಿಚಾರವಾಗಿ ಅವರನ್ನು ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಮುಂದೆ ಆಣೆ ಪ್ರಮಾಣಕ್ಕೆ ಕರೆದಿದ್ದೆ. ಆದರೆ ಅವರು ಬಂದಿಲ್ಲ. ಅದಕ್ಕೋಸ್ಕರ ಮಂಜುನಾಥ ಸ್ವಾಮಿಯ ಮುಂದೆ ನನ್ನ ಮಾತನ್ನು ಹೇಳಿದ್ದೇನೆ ಎಂದರು.
ರಾಜಕೀಯ ಕಾರಣಕ್ಕೆ ಈ ರೀತಿಯ ಆರೋಪ ಮಾಡಿದ್ದಾರೆ. ಈ ವಿಚಾರವಾಗಿ ನಾನು ಎಲ್ಲಾ ರೀತಿಯ ಹೋರಾಟಕ್ಕೂ, ಚರ್ಚೆಗೂ ಸಿದ್ಧನಿದ್ದೇನೆ. ಆಣೆ ಪ್ರಮಾಣಕ್ಕೆ ಮೊದಲು ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆಯವರನ್ನು ಭೇಟಿ ಮಾಡಿದ್ದೇನೆ. ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರಿಂದ ಶಾಲು ಹೊದಿಸಿ ಗೌರವಿಸಿದ್ದೇನೆ. ಹಾಸನ ಜಿಲ್ಲೆಯ ಕೃಷಿ ವಿಚಾರವಾಗಿ ಅವರು ನನ್ನ ಬಳಿ ಚರ್ಚೆ ನಡೆಸಿದ್ದಾರೆ. ಆಣೆ ಪ್ರಮಾಣದ ವಿಷಯವನ್ನು ಅವರ ಜೊತೆ ಮಾತನಾಡಿಲ್ಲ. ದಾಖಲೆ ಬಿಡುಗಡೆ ಮಾಡುತ್ತೇವೆ ಎಂದಿದ್ದರು. ಈಗ ದಾಖಲೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕುತ್ತೇನೆ. ಸಾರ್ವಜನಿಕವಾಗಿ ಹೆಸರು ಕೆಡಿಸುವ ಇಂಥವರ ವಿರುದ್ಧ ಕಾನೂನು ಹೋರಾಟವನ್ನೂ ಮಾಡುತ್ತೇನೆ ಎಂದಿದ್ದಾರೆ.
Bjp general secretary Ravi Kumar had called me a ragi thief on a public platform and I had called him for an oath in front of Dharmasthala Manjunatheshwara Swamy on this issue. But they haven't come. That is why I have said my word in front of Manjunatha Swamy.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm