ಬ್ರೇಕಿಂಗ್ ನ್ಯೂಸ್
29-08-22 08:38 pm HK News Desk ಕರ್ನಾಟಕ
ಧರ್ಮಸ್ಥಳ, ಆಗಸ್ಟ್ 29: ಬಿಜೆಪಿ ನಾಯಕರು ತನ್ನನ್ನು ರಾಗಿ ಕಳ್ಳ ಎಂದು ಅವಹೇಳನ ಮಾಡಿದ್ದಕ್ಕೆ ಧರ್ಮಸ್ಥಳದಲ್ಲಿ ಆಣೆ ಪ್ರಮಾಣಕ್ಕೆ ಕರೆದಿದ್ದೆ. ಅವರು ಯಾರೂ ಬಂದಿಲ್ಲ. ನಾನು ಒಂದು ಕೆಜಿಯೂ ರಾಗಿ ಕದ್ದಿಲ್ಲ ಎಂದು ದೇವರ ಮುಂದೆ ಹೇಳಿದ್ದೇನೆ ಎಂಬುದಾಗಿ ಅರಸೀಕೆರೆ ಶಾಸಕ ಶಿವಲಿಂಗೇ ಗೌಡ ಹೇಳಿದ್ದಾರೆ.
ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಆಣೆ ಪ್ರಮಾಣ ಮಾಡಿ ಮಾಧ್ಯಮಗಳ ಜೊತೆ ಮಾತನಾಡಿದ ಶಿವಲಿಂಗೇ ಗೌಡರು, ನಾನು ಒಂದು ಕೆ.ಜಿ. ಯೂ ರಾಗಿ ಕದ್ದಿಲ್ಲ. ಮಾರಾಟ ಮಾಡಿಲ್ಲ. ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿ ಕುಮಾರ್ ನನ್ನನ್ನು ಸಾರ್ವಜನಿಕ ವೇದಿಕೆಯಲ್ಲಿ ರಾಗಿ ಕಳ್ಳ ಎಂದಿದ್ದರು, ಈ ವಿಚಾರವಾಗಿ ಅವರನ್ನು ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಮುಂದೆ ಆಣೆ ಪ್ರಮಾಣಕ್ಕೆ ಕರೆದಿದ್ದೆ. ಆದರೆ ಅವರು ಬಂದಿಲ್ಲ. ಅದಕ್ಕೋಸ್ಕರ ಮಂಜುನಾಥ ಸ್ವಾಮಿಯ ಮುಂದೆ ನನ್ನ ಮಾತನ್ನು ಹೇಳಿದ್ದೇನೆ ಎಂದರು.
ರಾಜಕೀಯ ಕಾರಣಕ್ಕೆ ಈ ರೀತಿಯ ಆರೋಪ ಮಾಡಿದ್ದಾರೆ. ಈ ವಿಚಾರವಾಗಿ ನಾನು ಎಲ್ಲಾ ರೀತಿಯ ಹೋರಾಟಕ್ಕೂ, ಚರ್ಚೆಗೂ ಸಿದ್ಧನಿದ್ದೇನೆ. ಆಣೆ ಪ್ರಮಾಣಕ್ಕೆ ಮೊದಲು ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆಯವರನ್ನು ಭೇಟಿ ಮಾಡಿದ್ದೇನೆ. ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರಿಂದ ಶಾಲು ಹೊದಿಸಿ ಗೌರವಿಸಿದ್ದೇನೆ. ಹಾಸನ ಜಿಲ್ಲೆಯ ಕೃಷಿ ವಿಚಾರವಾಗಿ ಅವರು ನನ್ನ ಬಳಿ ಚರ್ಚೆ ನಡೆಸಿದ್ದಾರೆ. ಆಣೆ ಪ್ರಮಾಣದ ವಿಷಯವನ್ನು ಅವರ ಜೊತೆ ಮಾತನಾಡಿಲ್ಲ. ದಾಖಲೆ ಬಿಡುಗಡೆ ಮಾಡುತ್ತೇವೆ ಎಂದಿದ್ದರು. ಈಗ ದಾಖಲೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕುತ್ತೇನೆ. ಸಾರ್ವಜನಿಕವಾಗಿ ಹೆಸರು ಕೆಡಿಸುವ ಇಂಥವರ ವಿರುದ್ಧ ಕಾನೂನು ಹೋರಾಟವನ್ನೂ ಮಾಡುತ್ತೇನೆ ಎಂದಿದ್ದಾರೆ.
Bjp general secretary Ravi Kumar had called me a ragi thief on a public platform and I had called him for an oath in front of Dharmasthala Manjunatheshwara Swamy on this issue. But they haven't come. That is why I have said my word in front of Manjunatha Swamy.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm