ಬ್ರೇಕಿಂಗ್ ನ್ಯೂಸ್
29-08-22 10:57 pm Bangalore Correspondent ಕರ್ನಾಟಕ
ಬೆಂಗಳೂರು, ಆ 29: ಕರ್ನಾಟಕದಾದ್ಯಂತ ಭಾರಿ ಮುಂಗಾರು ಮಳೆ ಮುಂದುವರಿಯಲಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅಬ್ಬರದ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಕೇಂದ್ರ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿ ಸಮುದ್ರದಲ್ಲಿ, ಆಂಧ್ರಪ್ರದೇಶ ಮತ್ತು ಕೇರಳ ಭಾಗದಲ್ಲಿ ಉಂಟಾಗಿರುವ ತೀವ್ರ ಸುಳಿಗಾಳಿಯಿಂದಾಗಿಮುಂಗಾರು ಮಾರುತಗಳು ಚುರುಕುಗೊಂಡಿವೆ.ಇದರ ಪ್ರಭಾವದಿಂದ ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಮಳೆ ಸುರಿಯುತ್ತಿದ್ದು, ಸೆ.2ರವರೆಗೂ ಮುಂದುವರಿಯುವ ನಿರೀಕ್ಷೆ ಇದೆ.
ಉತ್ತರ ಒಳನಾಡಿನ ಭಾಗದ ಜಿಲ್ಲೆಗಳಲ್ಲಿ ಮಂಗಳವಾರ ಮತ್ತು ಬುಧವಾರ ಮಾತ್ರ ಕೆಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆ ಅಬ್ಬರಿಸಲಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ ಮತ್ತು ವಿಜಯಪುರಗಳ ಒಂದೆರಡು ಕಡೆ ಭಾರಿ ಮಳೆ ಹಿನ್ನೆಲೆ ಎರಡು ದಿನ 'ಯೆಲ್ಲೋ ಅಲರ್ಟ್' ಕೊಡಲಾಗಿದೆ.
ಉಳಿದಂತೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ ನಾಲ್ಕು ದಿನ ಅಬ್ಬರ ಮಳೆ ಬೀಳಲಿದೆ. ಈ ಪೈಕಿ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳ ಹಲವು ಕಡೆಗಳಲ್ಲಿ ಸೋಮವಾರ ಮತ್ತು ಮಂಗಳವಾರ ಧಾರಾಕಾರ ಮಳೆ ಬೀಳಲಿದೆ.
12ಸೆಂ.ಮೀ. ವರೆಗೆ ಮಳೆ ನಿರೀಕ್ಷೆ ;
ನಂತರ ಮೂರು ದಿನ ಈ ಪೈಕಿ ಕೆಲವು ಜಿಲ್ಲೆಗಳಲ್ಲಿ ಮಾತ್ರ ಸಾಧಾರಣದಿಂದ ಭಾರಿ ಮಳೆ ಬೀಳಲಿದ್ದು, ಈ ಎಲ್ಲ ಜಿಲ್ಲೆಗಳಿಗೆ ಹವಾಮಾನ ಇಲಾಖೆ 'ಯೆಲ್ಲೋ ಅಲರ್ಟ್' ಎಚ್ಚರಿಕೆ ನೀಡಿದೆ. ಈ ಅವಧಿಯಲ್ಲಿ ಸುಮಾರು 12ಸೆಂ. ಮೀ.ನಷ್ಟು ಮಳೆ ದಾಖಲಾಗಬಹುದು ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ.
ಸೋಮವಾರ ಬೆಳಗ್ಗೆ ಕೊನೆಗೊಂಡಂತೆ ಹಿಂದಿನ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ರಾಮನಗರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಹಾಸನ ಉತ್ತರ ಒಳನಾಡು ಜಿಲ್ಲೆಗಳ ಹಾವೇರಿ, ಬೆಳಗಾವಿ, ಬಾಗಲಕೋಟೆ, ರಾಣೆಬೆನ್ನೂರು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆ ಬಿದ್ದಿದೆ.
Heavy rains expected in karnataka for other 4 days yellow alert declared.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm