ಬ್ರೇಕಿಂಗ್ ನ್ಯೂಸ್
30-08-22 09:23 pm HK News Desk ಕರ್ನಾಟಕ
ಬಳ್ಳಾರಿ, ಆಗಸ್ಟ್ 30 : ಸಚಿವ ಆನಂದ್ ಸಿಂಗ್ ತಮ್ಮನ್ನು ಬೆಂಕಿ ಹಚ್ಚಿ ಸುಡುವುದಾಗಿ ಬೆದರಿಕೆ ಒಡ್ಡಿದ್ದಾರೆಂದು ಆರೋಪಿಸಿದ ಕುಟುಂಬವೊಂದು ತಾವೇ ಪೆಟ್ರೋಲ್ ಸುರಿದು ಸಾಮೂಹಿಕ ಆತ್ಮಹತ್ಯೆಗೆ ಮುಂದಾದ ಘಟನೆ ಹೊಸಪೇಟೆಯಲ್ಲಿ ನಡೆದಿದೆ.
ಹೊಸಪೇಟೆಯ 6ನೇ ವಾರ್ಡ್ ನಿವಾಸಿ ಡಿ.ಪೋಲಪ್ಪ ಮತ್ತು ಒಂಬತ್ತು ಜನರಿದ್ದ ಕುಟುಂಬದ ಸದಸ್ಯರು ವಿಜಯನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂದೆ ತಾವೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಪ್ರತಿಭಟನೆ ನಡೆಸಿದರು. ಒಂದೇ ಕುಟುಂಬದ 9 ಜನರು ಪೆಟ್ರೋಲ್ ಸುರಿದುಕೊಂಡು ಪ್ರತಿಭಟನೆಗೆ ಮುಂದಾಗಿದ್ದು ಪೊಲೀಸರು ಒಂದು ಕ್ಷಣ ಆತಂಕಕ್ಕೆ ಈಡಾಗಿದ್ದರು.



ಸಚಿವ ಆನಂದ್ ಸಿಂಗ್ ಅವರು ಬೆಂಕಿ ಹಾಕಿ ನಿಮ್ಮ ಮನೆ ಸುಡ್ತೀನಿ ಅಂತ ಬೆದರಿಸಿದ್ದಾರೆ. ಹೀಗಾಗಿ ನಾವೇ ಪೆಟ್ರೋಲ್ ಸುರಿದುಕೊಂಡಿದ್ದೇವೆ. ಸಚಿವ ಆನಂದ್ ಸಿಂಗ್ ಬಂದು ಬೆಂಕಿ ಹಚ್ಚಲಿ ಎಂದು ಹೇಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿ.ಪೋಲಪ್ಪ ಹೊಸಪೇಟೆಯ 6ನೇ ವಾರ್ಡಿನ ಸುಣ್ಣದ ಬಟ್ಟಿ ಪ್ರದೇಶದ ನಿವಾಸಿಯಾಗಿದ್ದಾರೆ. ನೀವಿರೋದು ನಮ್ಮ ಜಾಗ. ಕೂಡಲೇ ಖಾಲಿ ಮಾಡಬೇಕು, ಇಲ್ಲವಾದಲ್ಲಿ ಬೆಂಕಿ ಹಚ್ಚಿ ಸುಡ್ತೀನಿ ಅಂತ ಆನಂದ್ ಸಿಂಗ್ ಬೆದರಿಕೆ ಒಡ್ಡಿದ್ದಾರೆಂದು ಪೋಲಪ್ಪ ಆರೋಪಿಸಿದ್ದಾರೆ. ಮಡಿವಾಳ ಸಮಾಜಕ್ಕೆ ಸೇರಿದ ಭೂಮಿ ಒತ್ತವರಿ ಮಾಡಿರುವ ಆರೋಪ ಪೋಲಪ್ಪ ಅವರ ಮೇಲಿದೆ. ಜಾಗ ತೆರವು ಮಾಡುವಂತೆ ಪೋಲಪ್ಪ ಅವರ ಮೇಲೆ ಒತ್ತಡ ಹಾಕಲಾಗಿದೆ. ಹೀಗಾಗಿ ಪೋಲಪ್ಪ ತಮ್ಮ ಕುಟುಂಬವನ್ನು ಕರ್ಕೊಂಡು ಬಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪೊಲೀಸರು ಬಳಿಕ ಆತ್ಮಹತ್ಯೆಗೆ ಯತ್ನಿಸಿದವರನ್ನು ಆಸ್ಪತ್ರೆಗೆ ದಾಖಲಿಸಿ ವಿಚಾರಣೆ ನಡೆಸಿದ್ದಾರೆ.
#Breakingnews: #Karnataka Minisger #AnandSingh threatens family of setting them on fire, family of 9 pour petrol try to commit *suicide on themselves in #Bellari pic.twitter.com/51IlD6V3PP
— Headline Karnataka (@hknewsonline) August 30, 2022
Minister AnandSingh threatens family of setting them on fire, family of 9 pour petrol try to commit suicide in Bellari.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm