ಬ್ರೇಕಿಂಗ್ ನ್ಯೂಸ್
30-08-22 09:23 pm HK News Desk ಕರ್ನಾಟಕ
ಬಳ್ಳಾರಿ, ಆಗಸ್ಟ್ 30 : ಸಚಿವ ಆನಂದ್ ಸಿಂಗ್ ತಮ್ಮನ್ನು ಬೆಂಕಿ ಹಚ್ಚಿ ಸುಡುವುದಾಗಿ ಬೆದರಿಕೆ ಒಡ್ಡಿದ್ದಾರೆಂದು ಆರೋಪಿಸಿದ ಕುಟುಂಬವೊಂದು ತಾವೇ ಪೆಟ್ರೋಲ್ ಸುರಿದು ಸಾಮೂಹಿಕ ಆತ್ಮಹತ್ಯೆಗೆ ಮುಂದಾದ ಘಟನೆ ಹೊಸಪೇಟೆಯಲ್ಲಿ ನಡೆದಿದೆ.
ಹೊಸಪೇಟೆಯ 6ನೇ ವಾರ್ಡ್ ನಿವಾಸಿ ಡಿ.ಪೋಲಪ್ಪ ಮತ್ತು ಒಂಬತ್ತು ಜನರಿದ್ದ ಕುಟುಂಬದ ಸದಸ್ಯರು ವಿಜಯನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂದೆ ತಾವೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಪ್ರತಿಭಟನೆ ನಡೆಸಿದರು. ಒಂದೇ ಕುಟುಂಬದ 9 ಜನರು ಪೆಟ್ರೋಲ್ ಸುರಿದುಕೊಂಡು ಪ್ರತಿಭಟನೆಗೆ ಮುಂದಾಗಿದ್ದು ಪೊಲೀಸರು ಒಂದು ಕ್ಷಣ ಆತಂಕಕ್ಕೆ ಈಡಾಗಿದ್ದರು.
ಸಚಿವ ಆನಂದ್ ಸಿಂಗ್ ಅವರು ಬೆಂಕಿ ಹಾಕಿ ನಿಮ್ಮ ಮನೆ ಸುಡ್ತೀನಿ ಅಂತ ಬೆದರಿಸಿದ್ದಾರೆ. ಹೀಗಾಗಿ ನಾವೇ ಪೆಟ್ರೋಲ್ ಸುರಿದುಕೊಂಡಿದ್ದೇವೆ. ಸಚಿವ ಆನಂದ್ ಸಿಂಗ್ ಬಂದು ಬೆಂಕಿ ಹಚ್ಚಲಿ ಎಂದು ಹೇಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿ.ಪೋಲಪ್ಪ ಹೊಸಪೇಟೆಯ 6ನೇ ವಾರ್ಡಿನ ಸುಣ್ಣದ ಬಟ್ಟಿ ಪ್ರದೇಶದ ನಿವಾಸಿಯಾಗಿದ್ದಾರೆ. ನೀವಿರೋದು ನಮ್ಮ ಜಾಗ. ಕೂಡಲೇ ಖಾಲಿ ಮಾಡಬೇಕು, ಇಲ್ಲವಾದಲ್ಲಿ ಬೆಂಕಿ ಹಚ್ಚಿ ಸುಡ್ತೀನಿ ಅಂತ ಆನಂದ್ ಸಿಂಗ್ ಬೆದರಿಕೆ ಒಡ್ಡಿದ್ದಾರೆಂದು ಪೋಲಪ್ಪ ಆರೋಪಿಸಿದ್ದಾರೆ. ಮಡಿವಾಳ ಸಮಾಜಕ್ಕೆ ಸೇರಿದ ಭೂಮಿ ಒತ್ತವರಿ ಮಾಡಿರುವ ಆರೋಪ ಪೋಲಪ್ಪ ಅವರ ಮೇಲಿದೆ. ಜಾಗ ತೆರವು ಮಾಡುವಂತೆ ಪೋಲಪ್ಪ ಅವರ ಮೇಲೆ ಒತ್ತಡ ಹಾಕಲಾಗಿದೆ. ಹೀಗಾಗಿ ಪೋಲಪ್ಪ ತಮ್ಮ ಕುಟುಂಬವನ್ನು ಕರ್ಕೊಂಡು ಬಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪೊಲೀಸರು ಬಳಿಕ ಆತ್ಮಹತ್ಯೆಗೆ ಯತ್ನಿಸಿದವರನ್ನು ಆಸ್ಪತ್ರೆಗೆ ದಾಖಲಿಸಿ ವಿಚಾರಣೆ ನಡೆಸಿದ್ದಾರೆ.
#Breakingnews: #Karnataka Minisger #AnandSingh threatens family of setting them on fire, family of 9 pour petrol try to commit *suicide on themselves in #Bellari pic.twitter.com/51IlD6V3PP
— Headline Karnataka (@hknewsonline) August 30, 2022
Minister AnandSingh threatens family of setting them on fire, family of 9 pour petrol try to commit suicide in Bellari.
10-08-25 09:12 pm
HK News Desk
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm