ಬ್ರೇಕಿಂಗ್ ನ್ಯೂಸ್
30-08-22 09:23 pm HK News Desk ಕರ್ನಾಟಕ
ಬಳ್ಳಾರಿ, ಆಗಸ್ಟ್ 30 : ಸಚಿವ ಆನಂದ್ ಸಿಂಗ್ ತಮ್ಮನ್ನು ಬೆಂಕಿ ಹಚ್ಚಿ ಸುಡುವುದಾಗಿ ಬೆದರಿಕೆ ಒಡ್ಡಿದ್ದಾರೆಂದು ಆರೋಪಿಸಿದ ಕುಟುಂಬವೊಂದು ತಾವೇ ಪೆಟ್ರೋಲ್ ಸುರಿದು ಸಾಮೂಹಿಕ ಆತ್ಮಹತ್ಯೆಗೆ ಮುಂದಾದ ಘಟನೆ ಹೊಸಪೇಟೆಯಲ್ಲಿ ನಡೆದಿದೆ.
ಹೊಸಪೇಟೆಯ 6ನೇ ವಾರ್ಡ್ ನಿವಾಸಿ ಡಿ.ಪೋಲಪ್ಪ ಮತ್ತು ಒಂಬತ್ತು ಜನರಿದ್ದ ಕುಟುಂಬದ ಸದಸ್ಯರು ವಿಜಯನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂದೆ ತಾವೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಪ್ರತಿಭಟನೆ ನಡೆಸಿದರು. ಒಂದೇ ಕುಟುಂಬದ 9 ಜನರು ಪೆಟ್ರೋಲ್ ಸುರಿದುಕೊಂಡು ಪ್ರತಿಭಟನೆಗೆ ಮುಂದಾಗಿದ್ದು ಪೊಲೀಸರು ಒಂದು ಕ್ಷಣ ಆತಂಕಕ್ಕೆ ಈಡಾಗಿದ್ದರು.



ಸಚಿವ ಆನಂದ್ ಸಿಂಗ್ ಅವರು ಬೆಂಕಿ ಹಾಕಿ ನಿಮ್ಮ ಮನೆ ಸುಡ್ತೀನಿ ಅಂತ ಬೆದರಿಸಿದ್ದಾರೆ. ಹೀಗಾಗಿ ನಾವೇ ಪೆಟ್ರೋಲ್ ಸುರಿದುಕೊಂಡಿದ್ದೇವೆ. ಸಚಿವ ಆನಂದ್ ಸಿಂಗ್ ಬಂದು ಬೆಂಕಿ ಹಚ್ಚಲಿ ಎಂದು ಹೇಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿ.ಪೋಲಪ್ಪ ಹೊಸಪೇಟೆಯ 6ನೇ ವಾರ್ಡಿನ ಸುಣ್ಣದ ಬಟ್ಟಿ ಪ್ರದೇಶದ ನಿವಾಸಿಯಾಗಿದ್ದಾರೆ. ನೀವಿರೋದು ನಮ್ಮ ಜಾಗ. ಕೂಡಲೇ ಖಾಲಿ ಮಾಡಬೇಕು, ಇಲ್ಲವಾದಲ್ಲಿ ಬೆಂಕಿ ಹಚ್ಚಿ ಸುಡ್ತೀನಿ ಅಂತ ಆನಂದ್ ಸಿಂಗ್ ಬೆದರಿಕೆ ಒಡ್ಡಿದ್ದಾರೆಂದು ಪೋಲಪ್ಪ ಆರೋಪಿಸಿದ್ದಾರೆ. ಮಡಿವಾಳ ಸಮಾಜಕ್ಕೆ ಸೇರಿದ ಭೂಮಿ ಒತ್ತವರಿ ಮಾಡಿರುವ ಆರೋಪ ಪೋಲಪ್ಪ ಅವರ ಮೇಲಿದೆ. ಜಾಗ ತೆರವು ಮಾಡುವಂತೆ ಪೋಲಪ್ಪ ಅವರ ಮೇಲೆ ಒತ್ತಡ ಹಾಕಲಾಗಿದೆ. ಹೀಗಾಗಿ ಪೋಲಪ್ಪ ತಮ್ಮ ಕುಟುಂಬವನ್ನು ಕರ್ಕೊಂಡು ಬಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪೊಲೀಸರು ಬಳಿಕ ಆತ್ಮಹತ್ಯೆಗೆ ಯತ್ನಿಸಿದವರನ್ನು ಆಸ್ಪತ್ರೆಗೆ ದಾಖಲಿಸಿ ವಿಚಾರಣೆ ನಡೆಸಿದ್ದಾರೆ.
#Breakingnews: #Karnataka Minisger #AnandSingh threatens family of setting them on fire, family of 9 pour petrol try to commit *suicide on themselves in #Bellari pic.twitter.com/51IlD6V3PP
— Headline Karnataka (@hknewsonline) August 30, 2022
Minister AnandSingh threatens family of setting them on fire, family of 9 pour petrol try to commit suicide in Bellari.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm