ಭಾರಿ ಮಳೆಯಿಂದ  ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತ ; ಇಂಜಿನಿಯರ್ಗಳಿಗೆ ಪದ್ಮಭೂಷಣ ಪ್ರಶಸ್ತಿ ಕೊಡಿಸಿ

30-08-22 09:43 pm       Bangalore Correspondent   ಕರ್ನಾಟಕ

ಮೈಸೂರು ಹೆದ್ದಾರಿ ಪ್ಲಾನ್ ಮಾಡಿರುವ ಇಂಜಿನಿಯರ್ಗಳಿಗೆ ಮುಖ್ಯಮಂತ್ರಿಗಳು ಪದ್ಮಭೂಷಣ ಅಥವಾ ಬೇರೆ ಪ್ರಶಸ್ತಿ ಕೊಡಿಸಬೇಕು. ರಾಷ್ಟ್ರೀಯ ಹೆದ್ದಾರಿ ಮಾಡುವಾಗ ಎತ್ತರ ಪ್ರದೇಶದಲ್ಲಿ ನೀರು ಯಾವ ರೀತಿ ಹೋಗಬೇಕು ಎಂಬುದರ ಬಗ್ಗೆ ಸಾಮಾನ್ಯ ಪ್ರಜ್ಞೆ ಇಟ್ಟುಕೊಂಡು ಯೋಜನೆ ರೂಪಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ.

ಬೆಂಗಳೂರು, ಆ.30: ಮೈಸೂರು ಹೆದ್ದಾರಿ ಪ್ಲಾನ್ ಮಾಡಿರುವ ಇಂಜಿನಿಯರ್ಗಳಿಗೆ ಮುಖ್ಯಮಂತ್ರಿಗಳು ಪದ್ಮಭೂಷಣ ಅಥವಾ ಬೇರೆ ಪ್ರಶಸ್ತಿ ಕೊಡಿಸಬೇಕು. ರಾಷ್ಟ್ರೀಯ ಹೆದ್ದಾರಿ ಮಾಡುವಾಗ ಎತ್ತರ ಪ್ರದೇಶದಲ್ಲಿ ನೀರು ಯಾವ ರೀತಿ ಹೋಗಬೇಕು ಎಂಬುದರ ಬಗ್ಗೆ ಸಾಮಾನ್ಯ ಪ್ರಜ್ಞೆ ಇಟ್ಟುಕೊಂಡು ಯೋಜನೆ ರೂಪಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರಸ್ತೆಯ ಟೋಲ್ ಜಾಗ ಈಗ ಕೆರೆಯಾಗಿದೆ. ಮುಖ್ಯಮಂತ್ರಿಗಳು ಕೂಡಲೇ ಈ ವಿಚಾರದಲ್ಲಿ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ರಸ್ತೆ ನಿರ್ಮಾಣ ಎಂದರೆ ಜಲ್ಲಿ, ಟಾರು ಅಥವಾ ಕಾಂಕ್ರೀಟ್ ಹಾಕಿ ಹಣ ಪಡೆಯುವುದಲ್ಲ. ಮಳೆ ಬಂದಾಗ ನೀರು ಹೇಗೆ ಹೋಗಬೇಕು, ಎಲ್ಲಿ ಕಾಲುವೆ ತೆಗೆಯಬೇಕು ಎಂದು ಯೋಜನೆ ರೂಪಿಸುವುದು ಸರ್ಕಾರ ಹಾಗೂ ಇಂಜಿನಿಯರ್ ಗಳ ಕರ್ತವ್ಯ ಎಂದರು.

ರಾಷ್ಟ್ರೀಯ ಹೆದ್ದಾರಿ ಸ್ಥಿತಿ ಹೀಗಾದರೆ ಹಳ್ಳಿ ರಸ್ತೆಗಳ ಪರಿಸ್ಥಿತಿ ಏನಾಗಬೇಕು. ಒಬ್ಬಿಬ್ಬರ ಪ್ರಾಣ ಹಾನಿಯಾಗಿರುವ ಮಾಹಿತಿ ಬಂದಿದ್ದು, ರಾಮನಗರ, ಚನ್ನಪಟ್ಟಣ, ಕನಕಪುರದ ಕೆಲವು ಭಾಗಗಳಿಗೆ ಹೋಗಿ ಪರಿಸ್ಥಿತಿ ಪರಿಶೀಲಿಸುತ್ತೇನೆ. ಅವರಿಗೆ ಧೈರ್ಯ ತುಂಬುತ್ತೇನೆ. ಸರ್ಕಾರದ ಮೇಲೆ ಒತ್ತಡ ಹಾಕುತ್ತೇನೆ ಎಂದರು.

ಈ ಸಮಯದಲ್ಲಿ ಆಡಳಿತ ವ್ಯವಸ್ಥೆ ಚುರುಕಾಗಿ ಕೆಲಸ ಮಾಡಬೇಕು. ಒಂದು ವಾರ ಅಥವಾ 10 ದಿನಗಳಲ್ಲಿ ಪರಿಹಾರ ನೀಡುತ್ತೇನೆ ಎಂದು ಹೇಳುವುದಲ್ಲ. ತಕ್ಷಣ ಸ್ಥಳದಲ್ಲೇ ಚೆಕ್ ಮೂಲಕ ಪರಿಹಾರ ನೀಡಲು ಸಮಸ್ಯೆ ಏನು? ಹಾನಿಗೆ  ಒಳಗಾದವರನ್ನು ಬೇರೆ ಕಡೆಗೆ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿದರು.

Bangalore mysore highway flooded with rainwater Dk shivkumar slams BJP government Says the engineers who constructed the highway should be given a padma bhushan award.