ಬ್ರೇಕಿಂಗ್ ನ್ಯೂಸ್
30-08-22 09:43 pm Bangalore Correspondent ಕರ್ನಾಟಕ
ಬೆಂಗಳೂರು, ಆ.30: ಮೈಸೂರು ಹೆದ್ದಾರಿ ಪ್ಲಾನ್ ಮಾಡಿರುವ ಇಂಜಿನಿಯರ್ಗಳಿಗೆ ಮುಖ್ಯಮಂತ್ರಿಗಳು ಪದ್ಮಭೂಷಣ ಅಥವಾ ಬೇರೆ ಪ್ರಶಸ್ತಿ ಕೊಡಿಸಬೇಕು. ರಾಷ್ಟ್ರೀಯ ಹೆದ್ದಾರಿ ಮಾಡುವಾಗ ಎತ್ತರ ಪ್ರದೇಶದಲ್ಲಿ ನೀರು ಯಾವ ರೀತಿ ಹೋಗಬೇಕು ಎಂಬುದರ ಬಗ್ಗೆ ಸಾಮಾನ್ಯ ಪ್ರಜ್ಞೆ ಇಟ್ಟುಕೊಂಡು ಯೋಜನೆ ರೂಪಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರಸ್ತೆಯ ಟೋಲ್ ಜಾಗ ಈಗ ಕೆರೆಯಾಗಿದೆ. ಮುಖ್ಯಮಂತ್ರಿಗಳು ಕೂಡಲೇ ಈ ವಿಚಾರದಲ್ಲಿ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ರಸ್ತೆ ನಿರ್ಮಾಣ ಎಂದರೆ ಜಲ್ಲಿ, ಟಾರು ಅಥವಾ ಕಾಂಕ್ರೀಟ್ ಹಾಕಿ ಹಣ ಪಡೆಯುವುದಲ್ಲ. ಮಳೆ ಬಂದಾಗ ನೀರು ಹೇಗೆ ಹೋಗಬೇಕು, ಎಲ್ಲಿ ಕಾಲುವೆ ತೆಗೆಯಬೇಕು ಎಂದು ಯೋಜನೆ ರೂಪಿಸುವುದು ಸರ್ಕಾರ ಹಾಗೂ ಇಂಜಿನಿಯರ್ ಗಳ ಕರ್ತವ್ಯ ಎಂದರು.
ರಾಷ್ಟ್ರೀಯ ಹೆದ್ದಾರಿ ಸ್ಥಿತಿ ಹೀಗಾದರೆ ಹಳ್ಳಿ ರಸ್ತೆಗಳ ಪರಿಸ್ಥಿತಿ ಏನಾಗಬೇಕು. ಒಬ್ಬಿಬ್ಬರ ಪ್ರಾಣ ಹಾನಿಯಾಗಿರುವ ಮಾಹಿತಿ ಬಂದಿದ್ದು, ರಾಮನಗರ, ಚನ್ನಪಟ್ಟಣ, ಕನಕಪುರದ ಕೆಲವು ಭಾಗಗಳಿಗೆ ಹೋಗಿ ಪರಿಸ್ಥಿತಿ ಪರಿಶೀಲಿಸುತ್ತೇನೆ. ಅವರಿಗೆ ಧೈರ್ಯ ತುಂಬುತ್ತೇನೆ. ಸರ್ಕಾರದ ಮೇಲೆ ಒತ್ತಡ ಹಾಕುತ್ತೇನೆ ಎಂದರು.
ಈ ಸಮಯದಲ್ಲಿ ಆಡಳಿತ ವ್ಯವಸ್ಥೆ ಚುರುಕಾಗಿ ಕೆಲಸ ಮಾಡಬೇಕು. ಒಂದು ವಾರ ಅಥವಾ 10 ದಿನಗಳಲ್ಲಿ ಪರಿಹಾರ ನೀಡುತ್ತೇನೆ ಎಂದು ಹೇಳುವುದಲ್ಲ. ತಕ್ಷಣ ಸ್ಥಳದಲ್ಲೇ ಚೆಕ್ ಮೂಲಕ ಪರಿಹಾರ ನೀಡಲು ಸಮಸ್ಯೆ ಏನು? ಹಾನಿಗೆ ಒಳಗಾದವರನ್ನು ಬೇರೆ ಕಡೆಗೆ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿದರು.
Bangalore mysore highway flooded with rainwater Dk shivkumar slams BJP government Says the engineers who constructed the highway should be given a padma bhushan award.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm