ಬ್ರೇಕಿಂಗ್ ನ್ಯೂಸ್
30-08-22 09:43 pm Bangalore Correspondent ಕರ್ನಾಟಕ
ಬೆಂಗಳೂರು, ಆ.30: ಮೈಸೂರು ಹೆದ್ದಾರಿ ಪ್ಲಾನ್ ಮಾಡಿರುವ ಇಂಜಿನಿಯರ್ಗಳಿಗೆ ಮುಖ್ಯಮಂತ್ರಿಗಳು ಪದ್ಮಭೂಷಣ ಅಥವಾ ಬೇರೆ ಪ್ರಶಸ್ತಿ ಕೊಡಿಸಬೇಕು. ರಾಷ್ಟ್ರೀಯ ಹೆದ್ದಾರಿ ಮಾಡುವಾಗ ಎತ್ತರ ಪ್ರದೇಶದಲ್ಲಿ ನೀರು ಯಾವ ರೀತಿ ಹೋಗಬೇಕು ಎಂಬುದರ ಬಗ್ಗೆ ಸಾಮಾನ್ಯ ಪ್ರಜ್ಞೆ ಇಟ್ಟುಕೊಂಡು ಯೋಜನೆ ರೂಪಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರಸ್ತೆಯ ಟೋಲ್ ಜಾಗ ಈಗ ಕೆರೆಯಾಗಿದೆ. ಮುಖ್ಯಮಂತ್ರಿಗಳು ಕೂಡಲೇ ಈ ವಿಚಾರದಲ್ಲಿ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ರಸ್ತೆ ನಿರ್ಮಾಣ ಎಂದರೆ ಜಲ್ಲಿ, ಟಾರು ಅಥವಾ ಕಾಂಕ್ರೀಟ್ ಹಾಕಿ ಹಣ ಪಡೆಯುವುದಲ್ಲ. ಮಳೆ ಬಂದಾಗ ನೀರು ಹೇಗೆ ಹೋಗಬೇಕು, ಎಲ್ಲಿ ಕಾಲುವೆ ತೆಗೆಯಬೇಕು ಎಂದು ಯೋಜನೆ ರೂಪಿಸುವುದು ಸರ್ಕಾರ ಹಾಗೂ ಇಂಜಿನಿಯರ್ ಗಳ ಕರ್ತವ್ಯ ಎಂದರು.
ರಾಷ್ಟ್ರೀಯ ಹೆದ್ದಾರಿ ಸ್ಥಿತಿ ಹೀಗಾದರೆ ಹಳ್ಳಿ ರಸ್ತೆಗಳ ಪರಿಸ್ಥಿತಿ ಏನಾಗಬೇಕು. ಒಬ್ಬಿಬ್ಬರ ಪ್ರಾಣ ಹಾನಿಯಾಗಿರುವ ಮಾಹಿತಿ ಬಂದಿದ್ದು, ರಾಮನಗರ, ಚನ್ನಪಟ್ಟಣ, ಕನಕಪುರದ ಕೆಲವು ಭಾಗಗಳಿಗೆ ಹೋಗಿ ಪರಿಸ್ಥಿತಿ ಪರಿಶೀಲಿಸುತ್ತೇನೆ. ಅವರಿಗೆ ಧೈರ್ಯ ತುಂಬುತ್ತೇನೆ. ಸರ್ಕಾರದ ಮೇಲೆ ಒತ್ತಡ ಹಾಕುತ್ತೇನೆ ಎಂದರು.
ಈ ಸಮಯದಲ್ಲಿ ಆಡಳಿತ ವ್ಯವಸ್ಥೆ ಚುರುಕಾಗಿ ಕೆಲಸ ಮಾಡಬೇಕು. ಒಂದು ವಾರ ಅಥವಾ 10 ದಿನಗಳಲ್ಲಿ ಪರಿಹಾರ ನೀಡುತ್ತೇನೆ ಎಂದು ಹೇಳುವುದಲ್ಲ. ತಕ್ಷಣ ಸ್ಥಳದಲ್ಲೇ ಚೆಕ್ ಮೂಲಕ ಪರಿಹಾರ ನೀಡಲು ಸಮಸ್ಯೆ ಏನು? ಹಾನಿಗೆ ಒಳಗಾದವರನ್ನು ಬೇರೆ ಕಡೆಗೆ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿದರು.
Bangalore mysore highway flooded with rainwater Dk shivkumar slams BJP government Says the engineers who constructed the highway should be given a padma bhushan award.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm