ಬ್ರೇಕಿಂಗ್ ನ್ಯೂಸ್
01-09-22 12:54 pm HK News Desk ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 1: ಉತ್ತರ ಪ್ರದೇಶದ ಮುಖ್ಯಮಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ.
ಧರ್ಮಸ್ಥಳದ ಧರ್ಮಾಧಿಕಾರಿಯಿಂದ ನಿರ್ಮಿತವಾಗಿರುವ ರಾಷ್ಟ್ರೀಯ ಹೆದ್ದಾರಿ 75ರ ಮಹದೇವಪುರದ ಕ್ಷೇಮಾವನವನ್ನು ಯೋಗಿ ಆದಿತ್ಯನಾಥ್ ಅವರು ಉದ್ಘಾಟನೆ ಮಾಡಲಿದ್ದಾರೆ. ಯೋಗಿ ಆಗಮನ ಹಿನ್ನೆಲೆ ಪೊಲೀಸರಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಅಲ್ಲದೇ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಪಾಲ್ಗೊಳ್ಳಲಿದ್ದಾರೆ.
ಮಳೆ ಸಮಸ್ಯೆಯಾದರೆ ಬೆಂಗಳೂರಿನಿಂದ ಮಹದೇವಪುರಕ್ಕೆ ಯೋಗಿ ಕಾರಿನಲ್ಲಿ ಪ್ರಯಾಣ ಮಾಡಲಿದ್ದಾರೆ. ಈಗಾಗಲೇ ನೆಲಮಂಗಲದ ಬಾವಿಕೆರೆ ಬಳಿ ಎರಡು ಹೆಲಿಪ್ಯಾಡ್ ನಿರ್ಮಾಣ ಮಾಡಲಾಗಿದೆ. ಯೋಗಿ ಭದ್ರತೆಗಾಗಿ 1 ಎಸ್ಪಿ, 1 ಎಎಸ್ಪಿ, 6 ಡಿವೈಎಸ್ಪಿ, 20 ಸಿಪಿಐ, 50 ಪಿಎಸ್ಐ, 600 ಪೊಲೀಸ್ ಸಿಬ್ಬಂದಿ, 1 ಕೆಎಸ್ಆರ್ಪಿ ತುಕಡಿ, ಹಾಗೂ 2 ಡಿಎಆರ್ ತುಕಡಿ ನಿಯೋಜಿಸಲಾಗಿದೆ.

ಮತ್ತೊಂದೆಡೆ ನಾಳೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ. ಹೀಗಾಗಿ ಮಂಗಳೂರು ನಗರ ಹೊರವಲಯದ ಕೂಳೂರಿನ ಗೋಲ್ಡ್ ಪಿಂಚ್ ಸಿಟಿ ಮೈದಾನದಲ್ಲಿ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಯುತ್ತಿದೆ.

ಕಾರ್ಯಕ್ರದಲ್ಲಿ 2 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆಯಿದ್ದು, 25 ಎಕರೆ ಪ್ರದೇಶದಲ್ಲಿ ಬೃಹತ್ ಪೆಂಡಾಲ್ ಅಳವಡಿಸಲಾಗುತ್ತಿದೆ. ನಾಳೆ ಮಧ್ಯಾಹ್ನ 12:55ಕ್ಕೆ ವಿಶೇಷ ವಿಮಾನದ ಮೂಲಕ ಕೊಚ್ಚಿಯಿಂದ ಮಂಗಳೂರು ಏರ್ಪೋರ್ಟ್ಗೆ ಮೋದಿ ಬಂದಿಳಿಯಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಎನ್.ಎಂ.ಪಿ.ಎ ಹೆಲಿಪ್ಯಾಡ್ಗೆ ಬಂದು ಬಳಿಕ ಸಮಾವೇಶ ನಡೆಯುವ ಸ್ಥಳಕ್ಕೆ ಆಗಮಿಸಲಿದ್ದಾರೆ.
ಎನ್ ಎಂಪಿಟಿ, ಎಂಆರ್ಪಿಎಲ್, ರಾಜ್ಯ ಮೀನುಗಾರಿಕೆ ಇಲಾಖೆಯ ಯೋಜನೆಯ ಶಿಲಾನ್ಯಾಸ, ಲೋಕಾರ್ಪಣೆಯನ್ನು ಪ್ರಧಾನಿ ಮಾಡಲಿದ್ದಾರೆ. ಎಸ್.ಪಿ.ಜಿ ಅಧಿಕಾರಿಗಳು ಮೂರು ದಿನಗಳಿಂದ ಮಂಗಳೂರಿನಲ್ಲೇ ಮೊಕ್ಕಾಂ ಹೂಡಿದ್ದಾರೆ. ಸಮಾವೇಶಕ್ಕೆ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳಿಂದ ಕಾರ್ಯಕರ್ತರನ್ನು ಕರೆತರಲು 1461 ಬಸ್, 200 ಟಿಟಿ ಬುಕ್ಕಿಂಗ್ ಮಾಡಲಾಗಿದೆ.
Uttar Pradesh Chief Minister Yogi Adityanath will visit Bangalore on Thursday. He will inaugurate the ‘Sri Dharmasthala Nature Therapy and Yoga Education Institute’ built on the outskirts of the city.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm