ಬ್ರೇಕಿಂಗ್ ನ್ಯೂಸ್
01-09-22 12:54 pm HK News Desk ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 1: ಉತ್ತರ ಪ್ರದೇಶದ ಮುಖ್ಯಮಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ.
ಧರ್ಮಸ್ಥಳದ ಧರ್ಮಾಧಿಕಾರಿಯಿಂದ ನಿರ್ಮಿತವಾಗಿರುವ ರಾಷ್ಟ್ರೀಯ ಹೆದ್ದಾರಿ 75ರ ಮಹದೇವಪುರದ ಕ್ಷೇಮಾವನವನ್ನು ಯೋಗಿ ಆದಿತ್ಯನಾಥ್ ಅವರು ಉದ್ಘಾಟನೆ ಮಾಡಲಿದ್ದಾರೆ. ಯೋಗಿ ಆಗಮನ ಹಿನ್ನೆಲೆ ಪೊಲೀಸರಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಅಲ್ಲದೇ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಪಾಲ್ಗೊಳ್ಳಲಿದ್ದಾರೆ.
ಮಳೆ ಸಮಸ್ಯೆಯಾದರೆ ಬೆಂಗಳೂರಿನಿಂದ ಮಹದೇವಪುರಕ್ಕೆ ಯೋಗಿ ಕಾರಿನಲ್ಲಿ ಪ್ರಯಾಣ ಮಾಡಲಿದ್ದಾರೆ. ಈಗಾಗಲೇ ನೆಲಮಂಗಲದ ಬಾವಿಕೆರೆ ಬಳಿ ಎರಡು ಹೆಲಿಪ್ಯಾಡ್ ನಿರ್ಮಾಣ ಮಾಡಲಾಗಿದೆ. ಯೋಗಿ ಭದ್ರತೆಗಾಗಿ 1 ಎಸ್ಪಿ, 1 ಎಎಸ್ಪಿ, 6 ಡಿವೈಎಸ್ಪಿ, 20 ಸಿಪಿಐ, 50 ಪಿಎಸ್ಐ, 600 ಪೊಲೀಸ್ ಸಿಬ್ಬಂದಿ, 1 ಕೆಎಸ್ಆರ್ಪಿ ತುಕಡಿ, ಹಾಗೂ 2 ಡಿಎಆರ್ ತುಕಡಿ ನಿಯೋಜಿಸಲಾಗಿದೆ.

ಮತ್ತೊಂದೆಡೆ ನಾಳೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ. ಹೀಗಾಗಿ ಮಂಗಳೂರು ನಗರ ಹೊರವಲಯದ ಕೂಳೂರಿನ ಗೋಲ್ಡ್ ಪಿಂಚ್ ಸಿಟಿ ಮೈದಾನದಲ್ಲಿ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಯುತ್ತಿದೆ.

ಕಾರ್ಯಕ್ರದಲ್ಲಿ 2 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆಯಿದ್ದು, 25 ಎಕರೆ ಪ್ರದೇಶದಲ್ಲಿ ಬೃಹತ್ ಪೆಂಡಾಲ್ ಅಳವಡಿಸಲಾಗುತ್ತಿದೆ. ನಾಳೆ ಮಧ್ಯಾಹ್ನ 12:55ಕ್ಕೆ ವಿಶೇಷ ವಿಮಾನದ ಮೂಲಕ ಕೊಚ್ಚಿಯಿಂದ ಮಂಗಳೂರು ಏರ್ಪೋರ್ಟ್ಗೆ ಮೋದಿ ಬಂದಿಳಿಯಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಎನ್.ಎಂ.ಪಿ.ಎ ಹೆಲಿಪ್ಯಾಡ್ಗೆ ಬಂದು ಬಳಿಕ ಸಮಾವೇಶ ನಡೆಯುವ ಸ್ಥಳಕ್ಕೆ ಆಗಮಿಸಲಿದ್ದಾರೆ.
ಎನ್ ಎಂಪಿಟಿ, ಎಂಆರ್ಪಿಎಲ್, ರಾಜ್ಯ ಮೀನುಗಾರಿಕೆ ಇಲಾಖೆಯ ಯೋಜನೆಯ ಶಿಲಾನ್ಯಾಸ, ಲೋಕಾರ್ಪಣೆಯನ್ನು ಪ್ರಧಾನಿ ಮಾಡಲಿದ್ದಾರೆ. ಎಸ್.ಪಿ.ಜಿ ಅಧಿಕಾರಿಗಳು ಮೂರು ದಿನಗಳಿಂದ ಮಂಗಳೂರಿನಲ್ಲೇ ಮೊಕ್ಕಾಂ ಹೂಡಿದ್ದಾರೆ. ಸಮಾವೇಶಕ್ಕೆ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳಿಂದ ಕಾರ್ಯಕರ್ತರನ್ನು ಕರೆತರಲು 1461 ಬಸ್, 200 ಟಿಟಿ ಬುಕ್ಕಿಂಗ್ ಮಾಡಲಾಗಿದೆ.
Uttar Pradesh Chief Minister Yogi Adityanath will visit Bangalore on Thursday. He will inaugurate the ‘Sri Dharmasthala Nature Therapy and Yoga Education Institute’ built on the outskirts of the city.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm