ಬ್ರೇಕಿಂಗ್ ನ್ಯೂಸ್
07-10-20 09:20 am Headline Karnataka News Network ಕರ್ನಾಟಕ
ಬೆಂಗಳೂರು, ಅಕ್ಟೋಬರ್ 07: ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿರುವ ರಾಜ್ಯ ಸರ್ಕಾರ ಇದೀಗ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ.
ರಾಜ್ಯದಲ್ಲಿ ಪ್ರಾಥಮಿಕ, ದ್ವಿತೀಯ ಸಂಪರ್ಕಿತರಿಗೆ ಕೊರೋನಾ ಸೋಂಕಿನ ಪರೀಕ್ಷೆ ಕಡ್ಡಾಯಗೊಳಿಸಲು ಆದೇಶಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಈ ಕುರಿತು ಆದೇಶ ಹೊರಡಿಸಲಾಗಿದ್ದು, ಕೋವಿಡ್ ಸೋಂಕಿತರ ಸಂಪರ್ಕಕ್ಕೆ ಒಳಗಾದ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರು ಸೇರಿದಂತೆ ಲಕ್ಷಣವಿರುವ ವ್ಯಕ್ತಿಗಳು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕಿದೆ.

ಹೊಸ ಆದೇಶದಲ್ಲಿ ಯಾರೆಲ್ಲಾ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಬೇಕು ಎಂದು ಸ್ಪಷ್ಟವಾಗಿ ಹೇಳಲಾಗಿದ್ದು, ಉಸಿರಾಟ ಸಂಬಂಧಿ ತೊಂದರೆಗಳಿಂದ ಬಳಲುತ್ತಿರುವ ರೋಗಿಗಳು, ಕೊರೋನಾ ಚಿಕಿತ್ಸೆಯಲ್ಲಿ ತೊಡಗಿರುವ ಸಿಬ್ಬಂದಿ, ಆರೋಗ್ಯ ಸೇವಾ ಕ್ಷೇತ್ರದ ಕಾರ್ಯಕರ್ತರು, ಕಂಟೈನ್ ಮೆಂಟ್, ಬಫರ್ ವಲಯದಲ್ಲಿರುವ ವ್ಯಕ್ತಿಗಳು, ಆರೋಗ್ಯ ಸಿಬ್ಬಂದಿ ಗುರುತಿಸಲ್ಪಡುವ ಯಾವುದೇ ವ್ಯಕ್ತಿ ಅಥವಾ ಕೊರೋನಾ ಶಂಕಿತ ವ್ಯಕ್ತಿಗಳು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕಿದೆ .
ಈ ಆದೇಶವನ್ನು ಕರ್ನಾಟಕ ಸಾಂಕ್ರಾಮಿಕ ರೋಗಗಳ ಸುಗ್ರೀವಾಜ್ಞೆ - 2020ರ 4ನೇ ವಿಧಿಯಡಿ ಹೊರಡಿಸಲಾಗಿದ್ದು, ಆದೇಶ ಜಾರಿಯ ಹೊಣೆಯನ್ನು ಜಿಲ್ಲಾಧಿಕಾರಿಗಳು ಅಥವಾ ಮುನಿಸಿಪಲ್ ಕಮಿಷನರ್ ಅವರಿಗೆ ವಹಿಸಲಾಗಿದೆ. ಈ ಸುಗ್ರೀವಾಜ್ಞೆ ಪ್ರಕಾರ, ಸರ್ಕಾರ ಸೂಚಿಸಿದರೂ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳದವರಿಗೆ 50 ಸಾವಿರ ರು.ವರೆಗೆ ದಂಡ ಹಾಗೂ 6 ತಿಂಗಳಿಂದ 3 ವರ್ಷದವರೆಗೆ ಶಿಕ್ಷೆ ವಿಧಿಸುವ ಅವಕಾಶವಿದೆ
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 07:52 pm
HK News Staffer
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm