ಬ್ರೇಕಿಂಗ್ ನ್ಯೂಸ್
07-10-20 09:20 am Headline Karnataka News Network ಕರ್ನಾಟಕ
ಬೆಂಗಳೂರು, ಅಕ್ಟೋಬರ್ 07: ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿರುವ ರಾಜ್ಯ ಸರ್ಕಾರ ಇದೀಗ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ.
ರಾಜ್ಯದಲ್ಲಿ ಪ್ರಾಥಮಿಕ, ದ್ವಿತೀಯ ಸಂಪರ್ಕಿತರಿಗೆ ಕೊರೋನಾ ಸೋಂಕಿನ ಪರೀಕ್ಷೆ ಕಡ್ಡಾಯಗೊಳಿಸಲು ಆದೇಶಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಈ ಕುರಿತು ಆದೇಶ ಹೊರಡಿಸಲಾಗಿದ್ದು, ಕೋವಿಡ್ ಸೋಂಕಿತರ ಸಂಪರ್ಕಕ್ಕೆ ಒಳಗಾದ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರು ಸೇರಿದಂತೆ ಲಕ್ಷಣವಿರುವ ವ್ಯಕ್ತಿಗಳು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕಿದೆ.

ಹೊಸ ಆದೇಶದಲ್ಲಿ ಯಾರೆಲ್ಲಾ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಬೇಕು ಎಂದು ಸ್ಪಷ್ಟವಾಗಿ ಹೇಳಲಾಗಿದ್ದು, ಉಸಿರಾಟ ಸಂಬಂಧಿ ತೊಂದರೆಗಳಿಂದ ಬಳಲುತ್ತಿರುವ ರೋಗಿಗಳು, ಕೊರೋನಾ ಚಿಕಿತ್ಸೆಯಲ್ಲಿ ತೊಡಗಿರುವ ಸಿಬ್ಬಂದಿ, ಆರೋಗ್ಯ ಸೇವಾ ಕ್ಷೇತ್ರದ ಕಾರ್ಯಕರ್ತರು, ಕಂಟೈನ್ ಮೆಂಟ್, ಬಫರ್ ವಲಯದಲ್ಲಿರುವ ವ್ಯಕ್ತಿಗಳು, ಆರೋಗ್ಯ ಸಿಬ್ಬಂದಿ ಗುರುತಿಸಲ್ಪಡುವ ಯಾವುದೇ ವ್ಯಕ್ತಿ ಅಥವಾ ಕೊರೋನಾ ಶಂಕಿತ ವ್ಯಕ್ತಿಗಳು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕಿದೆ .
ಈ ಆದೇಶವನ್ನು ಕರ್ನಾಟಕ ಸಾಂಕ್ರಾಮಿಕ ರೋಗಗಳ ಸುಗ್ರೀವಾಜ್ಞೆ - 2020ರ 4ನೇ ವಿಧಿಯಡಿ ಹೊರಡಿಸಲಾಗಿದ್ದು, ಆದೇಶ ಜಾರಿಯ ಹೊಣೆಯನ್ನು ಜಿಲ್ಲಾಧಿಕಾರಿಗಳು ಅಥವಾ ಮುನಿಸಿಪಲ್ ಕಮಿಷನರ್ ಅವರಿಗೆ ವಹಿಸಲಾಗಿದೆ. ಈ ಸುಗ್ರೀವಾಜ್ಞೆ ಪ್ರಕಾರ, ಸರ್ಕಾರ ಸೂಚಿಸಿದರೂ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳದವರಿಗೆ 50 ಸಾವಿರ ರು.ವರೆಗೆ ದಂಡ ಹಾಗೂ 6 ತಿಂಗಳಿಂದ 3 ವರ್ಷದವರೆಗೆ ಶಿಕ್ಷೆ ವಿಧಿಸುವ ಅವಕಾಶವಿದೆ
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm