ಬ್ರೇಕಿಂಗ್ ನ್ಯೂಸ್
03-09-22 06:08 pm HK News Desk ಕರ್ನಾಟಕ
ಶಿವಮೊಗ್ಗ, ಸೆ.3 : ಇತ್ತೀಚೆಗೆ ಸಾವರ್ಕರ್ ಬ್ಯಾನರ್ ವಿವಾದ ಸಂದರ್ಭದಲ್ಲಿ ಪ್ರೇಮ್ ಸಿಂಗ್ ಎಂಬ ಯುವಕನಿಗೆ ಚೂರಿ ಇರಿತ ನಡೆದಿತ್ತು. ಪ್ರಕರಣದಲ್ಲಿ ಪ್ರಮುಖ ಆರೋಪಿ ಜಬೀವುಲ್ಲಾ ಎಂಬಾತನನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಜಬೀವುಲ್ಲಾನಿಗೆ ಉಗ್ರರ ಜತೆ ಸಂಬಂಧ ಇರುವುದು ತಿಳಿದುಬರುತ್ತಿದೆ. ಸದ್ಯದಲ್ಲೇ ಈ ಪ್ರಕರಣವನ್ನು ಎನ್ಐಎ ಗೆ ಹಸ್ತಾಂತರ ಮಾಡುತ್ತೇವೆ ಎಂದು ಹೇಳಿದ್ದಾರೆ.
ಮುರುಘಾ ಶ್ರೀಗಳ ಬಂಧನ ಕುರಿತ ಪ್ರಶ್ನೆಗೆ, ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಇದರಲ್ಲಿ ಸರಕಾರ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ. ತನಿಖೆ ದೃಷ್ಟಿಯಿಂದ ಹೆಚ್ಚಿಗೆ ಏನನ್ನೂ ಹೇಳುವುದಿಲ್ಲ. ಮುರುಘಾ ಮಠಕ್ಕೆ ಸೂಕ್ತ ಬಂದೋಬಸ್ತ್ ಕಲ್ಪಿಸಲಾಗಿದ್ದು, 7 ಕೆಎಸ್ ಆರ್ ಪಿ ತುಕಡಿ ನಿಯೋಜಿಸಲಾಗಿದೆ ಎಂದರು.

ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿ, ರಾಜ್ಯದ ಬಗ್ಗೆ ಮೋದಿಯವರಿಗೆ ವಿಶೇಷ ಆಸಕ್ತಿ ಇದೆ. ತಿಂಗಳಿಗೊಮ್ಮೆ ಭೇಟಿ ನೀಡುವುದಾಗಿ ಹೇಳಿದ್ದಾರೆ. ಚುನಾವಣೆಗೆ ನಾವು ಸಿದ್ಧರಾಗಿದ್ದೇವೆ. ಸೆ.8 ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದರು.

ಮೋದಿ ಮಳೆಹಾನಿಯಾದ ವೇಳೆ ಭೇಟಿ ನೀಡಿಲ್ಲ ಎಂಬ ಹೆಚ್ ಡಿಕೆ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿ, ಒಬ್ಬ ಪ್ರಧಾನಿಯಾಗಿ ಏನು ಕೆಲಸ ಮಾಡಬೇಕೋ ಅದನ್ನು ಮೋದಿ ಮಾಡುತ್ತಾರೆ. ಮಾಜಿ ಸಿಎಂ ಆಗಿ ಅವರ ಹೇಳಿಕೆ ಸರಿಯಲ್ಲ. ಮಳೆ ಹಾನಿಗೆ ಸರಕಾರ ಏನೇನು ಕ್ರಮ ಕೈಗೊಳ್ಳಬೇಕೋ ಅದನ್ನು ಕೈಗೊಂಡಿದೆ ಎಂದರು.
The Karnataka government has decided to hand over the investigation of the stabbing case following the row over installation of Veer Savarkar's flex in Shivamogga to the National Investigation Agency (NIA).Home Minister Araga Jnanendra on Saturday stated that, "the incident of stabbing to Prem Singh in connection with Veer Savarkar flex removal will be handed over to the NIA soon."
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm