ಬ್ರೇಕಿಂಗ್ ನ್ಯೂಸ್
04-09-22 02:45 pm HK News Desk ಕರ್ನಾಟಕ
ತುಮಕೂರು, ಸೆ.4: ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿರುವ ಮಾಜಿ ಸಂಸತ್ ಸದಸ್ಯ ಎಸ್.ಪಿ.ಮುದ್ದಹನುಮೇಗೌಡ ಅವರು ಬಿಜೆಪಿ ಮುಖಂಡರನ್ನು ಶನಿವಾರ ಬೆಂಗಳೂರಿನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದು, ಬಿಜೆಪಿ ಸೇರಲು ನಿರ್ಧರಿಸಿದ್ದಾರೆ. ಇದೇ ವಾರದಲ್ಲಿ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರ್ಪಡೆಯಾಗಲಿದ್ದಾರೆ.
ಬಿಜೆಪಿ ಮುಖಂಡ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕುಣಿಗಲ್ ಕ್ಷೇತ್ರದಿಂದ ಟಿಕೆಟ್ ನೀಡುವಂತೆ ಗೌಡರು ಪಟ್ಟು ಹಿಡಿದಿದ್ದರು. ಇದು ಕೈಗೂಡುವ ಲಕ್ಷಣಗಳು ಕಾಣದಿದ್ದಾಗ ಕಾಂಗ್ರೆಸ್ ತೊರೆದಿದ್ದು, ಈಗ ಬಿಜೆಪಿ ಕದ ತಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
ಚುನಾವಣೆ ವಿಚಾರದಲ್ಲಿ ಪ್ರಮುಖವಾಗಿ ಚರ್ಚೆ ನಡೆಸಿದ್ದು ಇತ್ತೀಚಿನ ರಾಜಕೀಯ ಬೆಳವಣಿಗೆ, ತನಗಾದ ಅಪಮಾನ ಮತ್ತಿತರ ವಿಚಾರಗಳು ಚರ್ಚೆಯಾಗಿದೆ. ಇದೇ ವೇಳೆ, ಕುಣಿಗಲ್ ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧೆಗೆ ಬಿಜೆಪಿ ಟಿಕೆಟ್ ಖಚಿತಪಡಿಸಿಯೇ, ಪಕ್ಷ ಸೇರ್ಪಡೆ ಆಗುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕುಣಿಗಲ್ ಕ್ಷೇತ್ರದಿಂದ ಮೂರು ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಪರಾಭವಗೊಂಡಿರುವ ಡಿ.ಕೃಷ್ಣಕುಮಾರ್ ಮತ್ತೆ ತಾನೇ ಸ್ಪರ್ಧಿಸುವುದಾಗಿ ಹೇಳಿಕೊಂಡಿದ್ದಾರೆ. ಈಗ ಅವರ ಮನವೊಲಿಸಿ, ಗೌಡರನ್ನು ಕಣಕ್ಕಿಳಿಸಲು ಬಿಜೆಪಿ ನಾಯಕರು ಮುಂದಾಗಿದ್ದಾರೆ. ಒಂದು ವೇಳೆ ಕೃಷ್ಣಕುಮಾರ್ ಬಂಡಾಯವೆದ್ದರೆ ಅವರನ್ನು ಪಕ್ಷದಲ್ಲೇ ಉಳಿಸಿಕೊಂಡು ಚುನಾವಣೆ ಎದುರಿಸಲು ಬಿಜೆಪಿ ನಾಯಕರು ಮುಂದಾಗಿದ್ದಾರೆ ಎನ್ನಲಾಗಿದೆ.
All signs of Muddahanumegowda joining BJP. Former Tumkur Lok Sabha member S P Muddahanumegowda announced Thursday his decision to quit the Congress, a setback to the DK Shivakumar-led party ahead of the 2023 Assembly election.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm