ಬ್ರೇಕಿಂಗ್ ನ್ಯೂಸ್
06-09-22 12:26 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.6: ರಾಜಧಾನಿ ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ರಣ ಮಳೆಯಾಗುತ್ತಿದ್ದು, ಭಾರೀ ಅವಾಂತರ ಸೃಷ್ಟಿಸಿದೆ. ರಣ ಮಳೆಗೆ ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದಿದೆ.
ಅಖಿಲಾ (23) ಮೃತ ಯುವತಿ. ಬಿಕಾಂ ಪದವೀಧರೆಯಾಗಿದ್ದ ಅಖಿಲಾ ಖಾಸಗಿ ಖಾಲೆಯೊಂದರಲ್ಲಿ ಕಳೆದ ಎರಡು ವರ್ಷದಿಂದ ಕ್ಲರಿಕಲ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ತಂದೆ, ತಾಯಿ ಜೊತೆಗೆ ಸಿದ್ದಾಪುರದಲ್ಲಿರುವ ಮನೆಯಲ್ಲಿ ವಾಸವಾಗಿದ್ದರು. ಸೋಮವಾರ ರಾತ್ರಿ 8 ಗಂಟೆಗೆ ಕೆಲಸ ಮುಗಿಸಿ ಶಾಲೆಯಿಂದ ಹೊರಟಿದ್ದು ರಾತ್ರಿ 9.30ಕ್ಕೆ ಸಿದ್ದಾಪುರ ಬಳಿ ಇರುವ ಮಯೂರ ಬೇಕರಿ ಸಮೀಪ ಬಂದಿದ್ದಾರೆ.
ಈ ವೇಳೆ ಭಾರೀ ಮಳೆ ಸುರಿಯುತ್ತಿದ್ದ ಕಾರಣ ರಸ್ತೆಯಲ್ಲಿ ಮಂಡಿ ಮುಳುಗುವಷ್ಟು ನೀರು ನಿಂತಿತ್ತು. ಅಖಿಲಾ ನೀರಿನ ಮಧ್ಯೆಯೇ ಸ್ಕೂಟರ್ ಚಲಾಯಿಸಿಕೊಂಡು ಬಂದಿದ್ದು ನೀರು ಹೆಚ್ಚಿದ್ದರಿಂದ ಸ್ಕೂಟರ್ ಇದ್ದಕ್ಕಿದ್ದಂತೆ ಆಫ್ ಆಗಿದೆ. ಈ ವೇಳೆ ಆಯತಪ್ಪಿ ಕೆಳಗೆ ಬೀಳುತ್ತಿದ್ದಾಗ ಸಹಾಯಕ್ಕೆಂದು ಬಲ ಭಾಗದಲ್ಲಿದ್ದ ವಿದ್ಯುತ್ ಕಂಬ ಮುಟ್ಟಿದ್ದಾರೆ. ಮಳೆಯ ಕಾರಣದಿಂದ ಕಂಬದಲ್ಲಿ ವಿದ್ಯುತ್ ಹರಿದಿದ್ದು ಶಾಕ್ ಆಗಿ ಸಾವನ್ನಪ್ಪಿದ್ದಾರೆ.
ಕೆಳಗೆ ಬಿದ್ದ ಯುವತಿಯನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಅಖಿಲಾ ಕೊನೆಯುಸಿರೆಳೆದಿದ್ದಾರೆ. ನೀರು ಹೊರ ಹೋಗಲು ಸರಿಯಾದ ವ್ಯವಸ್ಥೆ ಮಾಡದೆ, ವಿದ್ಯುತ್ ಕಂಬಗಳ ನಿರ್ವಹಣೆಯನ್ನೂ ಮಾಡದಿರುವುದೇ ಅಖಿಲಾ ಸಾವಿಗೆ ನೇರ ಕಾರಣ ಎಂದು ಬಿಬಿಎಂಪಿ, ಬೆಸ್ಕಾಂ ಅಧಿಕಾರಿಗಳ ವಿರುದ್ಧ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ.
As rains continue to wreak havoc on Karnataka's Bengaluru, a 23-year-old got electrocuted in the city's Whitefield area and died. As per reports, she was returning from work last night when her scooty lost balance on a severely waterlogged road.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm