ಬ್ರೇಕಿಂಗ್ ನ್ಯೂಸ್
06-09-22 12:26 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.6: ರಾಜಧಾನಿ ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ರಣ ಮಳೆಯಾಗುತ್ತಿದ್ದು, ಭಾರೀ ಅವಾಂತರ ಸೃಷ್ಟಿಸಿದೆ. ರಣ ಮಳೆಗೆ ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದಿದೆ.
ಅಖಿಲಾ (23) ಮೃತ ಯುವತಿ. ಬಿಕಾಂ ಪದವೀಧರೆಯಾಗಿದ್ದ ಅಖಿಲಾ ಖಾಸಗಿ ಖಾಲೆಯೊಂದರಲ್ಲಿ ಕಳೆದ ಎರಡು ವರ್ಷದಿಂದ ಕ್ಲರಿಕಲ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ತಂದೆ, ತಾಯಿ ಜೊತೆಗೆ ಸಿದ್ದಾಪುರದಲ್ಲಿರುವ ಮನೆಯಲ್ಲಿ ವಾಸವಾಗಿದ್ದರು. ಸೋಮವಾರ ರಾತ್ರಿ 8 ಗಂಟೆಗೆ ಕೆಲಸ ಮುಗಿಸಿ ಶಾಲೆಯಿಂದ ಹೊರಟಿದ್ದು ರಾತ್ರಿ 9.30ಕ್ಕೆ ಸಿದ್ದಾಪುರ ಬಳಿ ಇರುವ ಮಯೂರ ಬೇಕರಿ ಸಮೀಪ ಬಂದಿದ್ದಾರೆ.
ಈ ವೇಳೆ ಭಾರೀ ಮಳೆ ಸುರಿಯುತ್ತಿದ್ದ ಕಾರಣ ರಸ್ತೆಯಲ್ಲಿ ಮಂಡಿ ಮುಳುಗುವಷ್ಟು ನೀರು ನಿಂತಿತ್ತು. ಅಖಿಲಾ ನೀರಿನ ಮಧ್ಯೆಯೇ ಸ್ಕೂಟರ್ ಚಲಾಯಿಸಿಕೊಂಡು ಬಂದಿದ್ದು ನೀರು ಹೆಚ್ಚಿದ್ದರಿಂದ ಸ್ಕೂಟರ್ ಇದ್ದಕ್ಕಿದ್ದಂತೆ ಆಫ್ ಆಗಿದೆ. ಈ ವೇಳೆ ಆಯತಪ್ಪಿ ಕೆಳಗೆ ಬೀಳುತ್ತಿದ್ದಾಗ ಸಹಾಯಕ್ಕೆಂದು ಬಲ ಭಾಗದಲ್ಲಿದ್ದ ವಿದ್ಯುತ್ ಕಂಬ ಮುಟ್ಟಿದ್ದಾರೆ. ಮಳೆಯ ಕಾರಣದಿಂದ ಕಂಬದಲ್ಲಿ ವಿದ್ಯುತ್ ಹರಿದಿದ್ದು ಶಾಕ್ ಆಗಿ ಸಾವನ್ನಪ್ಪಿದ್ದಾರೆ.
ಕೆಳಗೆ ಬಿದ್ದ ಯುವತಿಯನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಅಖಿಲಾ ಕೊನೆಯುಸಿರೆಳೆದಿದ್ದಾರೆ. ನೀರು ಹೊರ ಹೋಗಲು ಸರಿಯಾದ ವ್ಯವಸ್ಥೆ ಮಾಡದೆ, ವಿದ್ಯುತ್ ಕಂಬಗಳ ನಿರ್ವಹಣೆಯನ್ನೂ ಮಾಡದಿರುವುದೇ ಅಖಿಲಾ ಸಾವಿಗೆ ನೇರ ಕಾರಣ ಎಂದು ಬಿಬಿಎಂಪಿ, ಬೆಸ್ಕಾಂ ಅಧಿಕಾರಿಗಳ ವಿರುದ್ಧ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ.
As rains continue to wreak havoc on Karnataka's Bengaluru, a 23-year-old got electrocuted in the city's Whitefield area and died. As per reports, she was returning from work last night when her scooty lost balance on a severely waterlogged road.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm