ಬ್ರೇಕಿಂಗ್ ನ್ಯೂಸ್
06-09-22 12:26 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.6: ರಾಜಧಾನಿ ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ರಣ ಮಳೆಯಾಗುತ್ತಿದ್ದು, ಭಾರೀ ಅವಾಂತರ ಸೃಷ್ಟಿಸಿದೆ. ರಣ ಮಳೆಗೆ ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದಿದೆ.
ಅಖಿಲಾ (23) ಮೃತ ಯುವತಿ. ಬಿಕಾಂ ಪದವೀಧರೆಯಾಗಿದ್ದ ಅಖಿಲಾ ಖಾಸಗಿ ಖಾಲೆಯೊಂದರಲ್ಲಿ ಕಳೆದ ಎರಡು ವರ್ಷದಿಂದ ಕ್ಲರಿಕಲ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ತಂದೆ, ತಾಯಿ ಜೊತೆಗೆ ಸಿದ್ದಾಪುರದಲ್ಲಿರುವ ಮನೆಯಲ್ಲಿ ವಾಸವಾಗಿದ್ದರು. ಸೋಮವಾರ ರಾತ್ರಿ 8 ಗಂಟೆಗೆ ಕೆಲಸ ಮುಗಿಸಿ ಶಾಲೆಯಿಂದ ಹೊರಟಿದ್ದು ರಾತ್ರಿ 9.30ಕ್ಕೆ ಸಿದ್ದಾಪುರ ಬಳಿ ಇರುವ ಮಯೂರ ಬೇಕರಿ ಸಮೀಪ ಬಂದಿದ್ದಾರೆ.
ಈ ವೇಳೆ ಭಾರೀ ಮಳೆ ಸುರಿಯುತ್ತಿದ್ದ ಕಾರಣ ರಸ್ತೆಯಲ್ಲಿ ಮಂಡಿ ಮುಳುಗುವಷ್ಟು ನೀರು ನಿಂತಿತ್ತು. ಅಖಿಲಾ ನೀರಿನ ಮಧ್ಯೆಯೇ ಸ್ಕೂಟರ್ ಚಲಾಯಿಸಿಕೊಂಡು ಬಂದಿದ್ದು ನೀರು ಹೆಚ್ಚಿದ್ದರಿಂದ ಸ್ಕೂಟರ್ ಇದ್ದಕ್ಕಿದ್ದಂತೆ ಆಫ್ ಆಗಿದೆ. ಈ ವೇಳೆ ಆಯತಪ್ಪಿ ಕೆಳಗೆ ಬೀಳುತ್ತಿದ್ದಾಗ ಸಹಾಯಕ್ಕೆಂದು ಬಲ ಭಾಗದಲ್ಲಿದ್ದ ವಿದ್ಯುತ್ ಕಂಬ ಮುಟ್ಟಿದ್ದಾರೆ. ಮಳೆಯ ಕಾರಣದಿಂದ ಕಂಬದಲ್ಲಿ ವಿದ್ಯುತ್ ಹರಿದಿದ್ದು ಶಾಕ್ ಆಗಿ ಸಾವನ್ನಪ್ಪಿದ್ದಾರೆ.
ಕೆಳಗೆ ಬಿದ್ದ ಯುವತಿಯನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಅಖಿಲಾ ಕೊನೆಯುಸಿರೆಳೆದಿದ್ದಾರೆ. ನೀರು ಹೊರ ಹೋಗಲು ಸರಿಯಾದ ವ್ಯವಸ್ಥೆ ಮಾಡದೆ, ವಿದ್ಯುತ್ ಕಂಬಗಳ ನಿರ್ವಹಣೆಯನ್ನೂ ಮಾಡದಿರುವುದೇ ಅಖಿಲಾ ಸಾವಿಗೆ ನೇರ ಕಾರಣ ಎಂದು ಬಿಬಿಎಂಪಿ, ಬೆಸ್ಕಾಂ ಅಧಿಕಾರಿಗಳ ವಿರುದ್ಧ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ.
As rains continue to wreak havoc on Karnataka's Bengaluru, a 23-year-old got electrocuted in the city's Whitefield area and died. As per reports, she was returning from work last night when her scooty lost balance on a severely waterlogged road.
10-08-25 09:12 pm
HK News Desk
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm