ಬ್ರೇಕಿಂಗ್ ನ್ಯೂಸ್
07-09-22 08:33 pm HK News Desk ಕರ್ನಾಟಕ
ಧಾರವಾಡ, ಸೆ.7: ಕನ್ನಡ ಭಾಷೆಯಲ್ಲಿ ಚೆಕ್ ಹಾಳೆಯನ್ನು ತುಂಬಿದ್ದಕ್ಕಾಗಿ ಸ್ವೀಕರಿಸಲು ಒಪ್ಪದೆ ನಿರಾಕರಿಸಿದ್ದ ಹಳಿಯಾಳದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗೆ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 85 ಸಾವಿರ ರೂಪಾಯಿ ದಂಡ ವಿಧಿಸಿದೆ.
ಧಾರವಾಡದ ಇಂಗ್ಲಿಷ್ ಪ್ರಾಧ್ಯಾಪಕ ವಾದಿರಾಜಾಚಾರ್ಯ ಇನಾಮದಾರ ಅವರು ತಮ್ಮ ಖಾತೆಯಲ್ಲಿದ್ದ ಹಣವನ್ನು ಪಡೆಯಲು ಚೆಕ್ ಪುಸ್ತಕವನ್ನು ತುಂಬಿ ಬ್ಯಾಂಕ್ ಶಾಖೆಯಲ್ಲಿ ನೀಡಿದ್ದರು. ಆದರೆ, ವಾದಿರಾಜ ಅವರು ಕನ್ನಡ ಭಾಷೆಯಲ್ಲಿ ಚೆಕ್ ಹಾಳೆಯಲ್ಲಿ ಬರೆದಿದ್ದಕ್ಕಾಗಿ ಶಾಖಾ ವ್ಯವಸ್ಥಾಪಕರು ನಿರಾಕರಣೆ ಮಾಡಿದ್ದರು. ಇದರ ವಿರುದ್ಧ ಧಾರವಾಡದ ಜಿಲ್ಲಾ ಗ್ರಾಹಕರ ವ್ಯಾಜ್ಯ ಪರಿಹಾರ ಆಯೋಗದಲ್ಲಿ ದೂರು ದಾಖಲಿಸಿದ್ದರು.
ಪ್ರಕರಣವನ್ನು ವಿಚಾರಣೆ ನಡೆಸಿದ ಆಯೋಗ ಸದಸ್ಯರು, ಗ್ರಾಹಕರ ಉಳಿತಾಯ ಖಾತೆಯಲ್ಲಿ 9 ಲಕ್ಷ ರೂ. ಹಣ ಇದ್ದರೂ ಕೇವಲ ಆರು ಸಾವಿರ ರೂ. ಪಡೆಯಲು ಚೆಕ್ ನೀಡಿದ್ದರು. ಆದರೆ, ಚೆಕ್ ಹಾಳೆಯನ್ನು ಕನ್ನಡದಲ್ಲಿ ತುಂಬಿದ್ದಕ್ಕಾಗಿ ಅಮಾನ್ಯ ಮಾಡಿದ್ದು ಸೇವಾ ನ್ಯೂನತೆಯೆಂದು ಪರಿಗಣಿಸಿ ಬ್ಯಾಂಕ್ ಶಾಖೆಗೆ ದಂಡ ವಿಧಿಸಿದ್ದಾರೆ. ಬ್ಯಾಂಕ್ ಶಾಖೆಯ ವ್ಯವಸ್ಥಾಪಕರು ದೂರುದಾರರಿಗೆ 85,177 ರೂಪಾಯಿ ದಂಡದ ರೂಪದಲ್ಲಿ ನೀಡುವಂತೆ ಆದೇಶ ಮಾಡಿದ್ದಾರೆ. ಆಯೋಗದ ಅಧ್ಯಕ್ಷ ಈಶಪ್ಪ ಭೂತೆ, ಸದಸ್ಯರಾದ ವಿ.ಅ. ಬೋಳಶೆಟ್ಟಿ ಹಾಗೂ ಪಿ.ಸಿ. ಹಿರೇಮಠ ಈ ತೀರ್ಪು ನೀಡಿದ್ದಾರೆ.
ಬ್ಯಾಂಕಿನಲ್ಲಿ ತ್ರಿಭಾಷಾ ಸೂತ್ರದ ಪ್ರಕಾರ, ಇಂಗ್ಲಿಷ್, ಹಿಂದಿ ಮತ್ತು ಆಯಾ ರಾಜ್ಯಗಳ ಭಾಷೆಯಲ್ಲಿ ಚೆಕ್ ಪುಸ್ತಕ ಇನ್ನಿತರ ವಿಚಾರಗಳಲ್ಲಿ ವ್ಯವಹರಿಸಲು ಅವಕಾಶ ಇರುತ್ತದೆ. ಆದರೆ ಹೆಚ್ಚಿನ ಕಡೆಗಳಲ್ಲಿ ಇಂಗ್ಲಿಷ್ ಭಾಷೆ ಬಳಕೆ ಮಾತ್ರ ಇರುವುದರಿಂದ ಶಾಖಾ ಸಿಬಂದಿ ಕೂಡ ಇಂಗ್ಲಿಷ್ ಭಾಷೆಗೇ ಪ್ರೋತ್ಸಾಹ ನೀಡುತ್ತಾರೆ. ಈ ನಿಟ್ಟಿನಲ್ಲಿ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಆಯೋಗದ ತೀರ್ಪು ಮಹತ್ವದ್ದಾಗಿದೆ.
In a significant judgment that will go a long way in the implementation of the three-language policy in banks, the Dharwad District Consumer Redressal Forum has imposed a penalty of ₹85,177 on the Haliyal branch of the State Bank of India for dishonouring a cheque issued in Kannada for a sum of ₹6,000 despite the customer having adequate balance in his savings account.
28-03-24 04:14 pm
HK News Desk
Ips Hemant Nimbalkar, wife Anjali Nimbalkar,...
28-03-24 01:44 pm
Pralhad Joshi , Dharwad, Veerashaiva Lingayat...
27-03-24 11:07 pm
ಮಾಫಿ ಸಾಕ್ಷಿ ಮುಗಿಸಲು ಚೈತ್ರಾ ಗ್ಯಾಂಗ್ ಸಂಚು ; ಆರೆ...
27-03-24 10:36 pm
Govind Karjol ticket, bjp; ಕೇಂದ್ರ ಸಚಿವ ನಾರಾಯಣ...
27-03-24 08:56 pm
28-03-24 04:36 pm
HK News Desk
80 ವರ್ಷದ ಅಜ್ಜಿಗೆ ಮೊಮ್ಮಗ, ಪತ್ನಿಯಿಂದ ಮನಬಂದಂತೆ ಹ...
28-03-24 01:15 pm
Tamil Nadu MP Ganeshamurthi dies: ಟಿಕೆಟ್ ಕೈತಪ...
28-03-24 11:48 am
AAPs Lone Lok Sabha, MP Sushil Rinku: ಆಮ್ ಆದ್...
27-03-24 10:24 pm
IAS Ananya Singh, UPSC Exam: ಮೊದಲ ಪ್ರಯತ್ನದಲ್ಲ...
27-03-24 09:43 pm
28-03-24 07:12 pm
Mangalore Correspondent
Manjunath Bhandary, KPCC working president: ಕ...
28-03-24 05:20 pm
Fire at seafood factory in Baikampady, Mangal...
28-03-24 04:52 pm
Naxalites in Koojimale, Woman Naxalite, Puttu...
28-03-24 03:25 pm
Harish Acharya, Mangalore: ಮಂಗಳೂರು ವಿವಿಯ ನಿವೃ...
27-03-24 10:53 pm
28-03-24 02:18 pm
Udupi Correspondent
Mangalore Police, CCB, Drugs; ಆಂಧ್ರಪ್ರದೇಶದಿಂದ...
27-03-24 11:12 pm
Bank vehicle robbery, ATM in Kasaragod: ಕಾಸರಗ...
27-03-24 06:20 pm
CA arrested by Bengalore police, Rs 168 crore...
27-03-24 12:48 pm
Thane Kidnap, Murder; ಮನೆ ನಿರ್ಮಾಣಕ್ಕೆ 23 ಲಕ್ಷ...
26-03-24 11:12 am