ಬ್ರೇಕಿಂಗ್ ನ್ಯೂಸ್
08-09-22 10:22 pm HK News Desk ಕರ್ನಾಟಕ
ಮಂಡ್ಯ, ಸೆ.8: ಇತ್ತೀಚೆಗೆ ತನ್ನನ್ನು ಹನಿಟ್ರಾಪ್ ಮಾಡಲಾಗಿದೆ ಎಂದು ದೂರು ನೀಡಿ ಸುದ್ದಿಯಾಗಿದ್ದ ಮಂಗಳೂರು ಮೂಲದ ಜುವೆಲ್ಲರಿ ಉದ್ಯಮಿ ಜಗನ್ನಾಥ ಶೆಟ್ಟಿ ಅವರದ್ದು ಎನ್ನಲಾದ ವಿಡಿಯೋ ಲೀಕ್ ಆಗಿದೆ. ಲಾಡ್ಜ್ ನಲ್ಲಿ ಯುವತಿಯ ಜೊತೆಗಿರುವ ವಿಡಿಯೋ ಲೀಕ್ ಆಗಿದ್ದು, ಭಾರೀ ವೈರಲ್ ಆಗಿದೆ.
ಯುವತಿ ಜೊತೆಗಿದ್ದಾಗಲೇ ಇಬ್ಬರು ಯುವಕರು ಲಾಡ್ಜ್ ಎಂಟ್ರಿಯಾಗಿದ್ದು, ಯುವತಿ ಮತ್ತು ಜಗನ್ನಾಥ ಶೆಟ್ಟಿ ಮೇಲೆ ಹಲ್ಲೆ ನಡೆಸಿದ್ದಾರೆ. ಯುವತಿಯನ್ನು ಪ್ರಶ್ನೆ ಮಾಡಿದ್ದು, ನೀನು ಮನೆಯಲ್ಲಿ ಏನು ಹೇಳಿ ಬಂದೀಯಮ್ಮಾ ಎಂದು ಕೇಳಿದ್ದಾರೆ. ಇವರು ಕಾಲೇಜಿನಲ್ಲಿ ಲೆಕ್ಚರ್, ಅವರಿಗೆ ಹೊಡೀಬೇಡಿ. ಇವರೇ ನನ್ನನ್ನು ಕರೆದಿದ್ದು ಎಂದು ಹೇಳುವುದು ವಿಡಿಯೋದಲ್ಲಿದೆ.



ಜಗನ್ನಾಥ ಶೆಟ್ಟಿ ಮತ್ತು ಯುವತಿ ಮಾತನಾಡುವ ಫೋನ್ ಸಂಭಾಷಣೆಯ ಆಡಿಯೋ ಕೂಡ ಇದೇ ವೇಳೆ ಜಾಲತಾಣದಲ್ಲಿ ವೈರಲ್ ಆಗಿದೆ. ಯುವತಿಯ ಜೊತೆಗೆ ಸಲುಗೆಯಿಂದ ಮಾತನಾಡಿ, ಲಾಡ್ಜ್ ಗೆ ಕರೆಯುವುದು ಆಡಿಯೋದಲ್ಲಿದೆ. ಈ ಬಗ್ಗೆ ಪ್ರತ್ಯೇಕ ದೂರು ದಾಖಲಾಗಿರುವ ಬಗ್ಗೆ ಮಾಹಿತಿಯಿಲ್ಲ. ಆದರೆ, ಇತ್ತೀಚೆಗೆ ತನ್ನನ್ನು ಹನಿ ಟ್ರಾಪ್ ಮಾಡಿದ್ದಾರೆಂದು ನೀಡಿದ್ದ ದೂರಿನಂತೆ ಪೊಲೀಸರು ಈಗಾಗಲೇ ತನಿಖೆ ಕೈಗೊಂಡಿದ್ದರು. ಆ ಪ್ರಕರಣದಲ್ಲಿ ಬೇರೊಬ್ಬ ಮಹಿಳೆ ಸೇರಿ ಇನ್ನಿಬ್ಬರು ಯುವಕರನ್ನು ಬಂಧಿಸಿದ್ದರು. ಆ ಮಹಿಳೆ ಸಮಾಜ ಸೇವೆ ಹೆಸರಲ್ಲಿ ಗುರುತಿಸಿಕೊಂಡವರಾಗಿದ್ದರು.


ತಾನು ಮಂಡ್ಯದಲ್ಲಿ ಬಸ್ಸಿಗೆ ನಿಂತಿದ್ದಾಗ ಕಾರಿನಲ್ಲಿ ಬಂದಿದ್ದ ನಾಲ್ವರು ಚಿನ್ನದ ಬಿಸ್ಕೆಟ್ ತಪಾಸಣೆ ಮಾಡಬೇಕೆಂದು ಲಾಡ್ಜ್ ಒಯ್ದಿದ್ದರು ಎಂದು ಜಗನ್ನಾಥ ಶೆಟ್ಟಿ ದೂರಿನಲ್ಲಿ ತಿಳಿಸಿದ್ದರು. ಇದೀಗ ಬೇರೆಯದ್ದೇ ವಿಡಿಯೋ ವೈರಲ್ ಆಗಿದ್ದು, ಹಳೆಯದಕ್ಕೂ ಇದಕ್ಕೂ ಸಂಬಂಧ ಇದೆಯೇ, ಯಾರಾದ್ರೂ ಉದ್ದೇಶಪೂರ್ವಕ ಈ ವಿಡಿಯೋ ಲೀಕ್ ಮಾಡಿದ್ದಾರೆಯೇ ಎನ್ನೋದು ಗೊತ್ತಾಗಿಲ್ಲ. ಜಗನ್ನಾಥ ಶೆಟ್ಟಿ ಮಂಡ್ಯದಲ್ಲಿ ಉದ್ಯಮಿಯಾಗಿದ್ದು, ಜೊತೆಗೆ ಬಿಜೆಪಿ ಮುಖಂಡನಾಗಿ ಗುರುತಿಸಿಕೊಂಡಿದ್ದಾರೆ.
Big twist in Mandya Honey trap case, Mangalore based Jagannath shetty new video released. The video shows that Jagannath was inside a private lodge with compromising position with a girl where he was caught red handed later he was blackmailed about the video.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm