ಬ್ರೇಕಿಂಗ್ ನ್ಯೂಸ್
08-09-22 10:41 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.8: ಬಿಹಾರದ ಪಾಟ್ನಾದಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಗುರುವಾರ ಒಂದೇ ದಿನ ಬಿಹಾರ, ಕರ್ನಾಟಕ, ತಮಿಳುನಾಡಿನ 20 ಕಡೆಗಳಲ್ಲಿ ದಾಳಿ ಕಾರ್ಯಾಚರಣೆ ನಡೆಸಿರುವ ಬಗ್ಗೆ ಮಾಹಿತಿ ನೀಡಿದೆ.
ಬಿಹಾರದಲ್ಲಿ ನಲಂದಾ, ಕತಿಹಾರ್, ಅರಾರಿಯಾ, ಮಧುಬನಿ, ಪಾಟ್ನಾ, ವೈಶಾಲಿ, ದರ್ಭಾಂಗ, ಮುಝಾಫರ್ ಪುರ ಮತ್ತು ಸರಣ್ ಜಿಲ್ಲೆಯಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ತಮಿಳುನಾಡಿನ ಶಿವಗಂಗಾ ಮತ್ತು ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ದಾಳಿ ನಡೆಸಲಾಗಿತ್ತು.
ಬಿಹಾರದ ಪಾಟ್ನಾ ಜಿಲ್ಲೆಯ ಪುಲ್ವಾರಿ ಶರೀಫ್ ಠಾಣೆ ವ್ಯಾಪ್ತಿಯಲ್ಲಿ ಜುಲೈ 12ರಂದು ದೇಶ ವಿರೋಧಿ ಚಟುವಟಿಕೆ ಬಗ್ಗೆ ಪ್ರಕರಣ ದಾಖಲಾಗಿತ್ತು. ಪ್ರಧಾನಿ ಮೋದಿ ಪಾಟ್ನಾಕ್ಕೆ ಭೇಟಿ ನೀಡುವ ಸಂದರ್ಭದಲ್ಲಿಯೇ ದೇಶ ವಿರೋಧಿ ಕೃತ್ಯಕ್ಕೆ ಸಂಚು ನಡೆಸಿದ್ದರು ಅನ್ನುವ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿದ್ದರು. ಘಟನೆ ಸಂಬಂಧಿಸಿ ಎನ್ಐಎ ತನಿಖೆ ಆರಂಭಿಸಿದ್ದು, ಉತ್ತರ ಪ್ರದೇಶ, ಬಿಹಾರ ಸೇರಿ ವಿವಿಧೆಡೆ ದಾಳಿ ನಡೆಸಿತ್ತು. ಬಂದಿತರು ಎಸ್ಡಿಪಿಐ ಮತ್ತು ಪಿಎಫ್ಐ ಕಾರ್ಯಕರ್ತರು ಅನ್ನುವ ನೆಲೆಯಲ್ಲಿ ತನಿಖೆ ನಡೆದಿತ್ತು.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ ರಿಯಾಜ್ ಪರಂಗಿಪೇಟೆ ಎಂಬವರು ಎಸ್ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದು, ಅಲ್ಲದೆ, ಬಿಹಾರದಲ್ಲಿ ಎಸ್ಡಿಪಿಐ ಪಕ್ಷದ ಉಸ್ತುವಾರಿ ಆಗಿದ್ದಾರೆ. ಬಿಹಾರಕ್ಕೆ ತೆರಳಿ ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಬಂಧಿತ ಆರೋಪಿಗಳಿಗೆ ರಿಯಾಜ್ ಪರಂಗಿಪೇಟೆ ಜೊತೆಗೆ ನಂಟು ಇದೆಯೆಂಬ ಆರೋಪದಲ್ಲಿ ಎನ್ಐಎ ಅಧಿಕಾರಿಗಳು ಗುರುವಾರ ಬೆಳಗ್ಗೆ ಬಂಟ್ವಾಳಕ್ಕೆ ಆಗಮಿಸಿ ತನಿಖೆ ಕೈಗೊಂಡಿದ್ದಾರೆ. ದಾಳಿ ವೇಳೆ, ಡಿಜಿಟಲ್ ಸಾಕ್ಷ್ಯವುಳ್ಳ ಮೊಬೈಲ್, ಲ್ಯಾಪ್ ಟಾಪ್, ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಪಾಟ್ನಾ ಘಟನೆ ಸಂಬಂಧ ಎನ್ಐಎ ದೆಹಲಿ ಕಚೇರಿಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರತ್ಯೇಕ ತನಿಖೆ ನಡೆಸುತ್ತಿದ್ದಾರೆ.
The National Investigation Agency is conducting searches across 30 locations in Bihar in connection with its probe into a suspected terror module allegedly linked to the Popular Front of India. Officials told News18 on condition of anonymity that the outfit is alleged to be running “arms training camps under the guise of martial arts training".
10-08-25 09:12 pm
HK News Desk
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm