ಬ್ರೇಕಿಂಗ್ ನ್ಯೂಸ್
09-09-22 02:49 pm HK News Desk ಕರ್ನಾಟಕ
ಮೈಸೂರು, ಸೆ.9 : ಖ್ಯಾತ ನಟ ಪುನೀತ್ ರಾಜಕುಮಾರ್ ಅನುವಂಶೀಯ ಕಾರಣಗಳಿಂದ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದರು. ಪುನೀತ್ ಸಹೋದರರಿಗೂ ಹೃದಯ ಸಂಬಂಧಿ ತೊಂದರೆಗಳಿವೆ. ರಾಘವೇಂದ್ರ, ಶಿವರಾಜಕುಮಾರ್ ಅವರಿಗೂ ಹೃದಯ ತೊಂದರೆಗಳಿವೆ. ಹಾಗಾಗಿ ಪುನೀತ್ ಸಾವಿಗೆ ಅನುವಂಶೀಯ ಹಿನ್ನೆಲೆಯೇ ಕಾರಣ ಎಂದು ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ, ಖ್ಯಾತ ಹೃದಯ ತಜ್ಞ ಡಾ.ಸಿ.ಎನ್ ಮಂಜುನಾಥ್ ಹೇಳಿದ್ದಾರೆ.
ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪುನೀತ್ ರಾಜ್ಕುಮಾರ್ ಸಾವಿನ ಬಗ್ಗೆ ಕೇಳಿದ ಪ್ರಶ್ನೆಗೆ, ಕುಟುಂಬದ ಅನುವಂಶಿಕ ಹಿನ್ನೆಲೆಯೇ ಕಾರಣ ಎಂದು ಹೇಳಿದರು.

ನಮ್ಮ ದೇಶದಲ್ಲಿ 50% ಸಾವುಗಳು ಹೃದಯಾಘಾತ, ಹೃದಯ ಸಂಬಂಧಿ ಕಾಯಿಲೆ, ಸಕ್ಕರೆ ಕಾಯಿಲೆ, ಅಧಿಕ ರಕ್ತದೊತ್ತಡ, ಕ್ಯಾನ್ಸರ್ ರೋಗದಿಂದ ಸಂಭವಿಸುತ್ತಿದೆ. ಇದರ ಜೊತೆಗೆ ಇತ್ತೀಚಿನ ದಿನಗಳಲ್ಲಿ ಒಂಟಿತನದಿಂದ ಸಾವನ್ನಪ್ಪುವವರ ಸಂಖ್ಯೆಯೂ ಹೆಚ್ಚುತ್ತಿದೆ. ಮೊಬೈಲ್, ಟಿವಿ ಗೀಳಿಗೆ ಅಂಟಿಕೊಂಡು ಬಹುಬೇಗನೆ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಮೊದಲೆಲ್ಲಾ ವಯಸ್ಸಾದ ತಂದೆ ತಾಯಿಯರನ್ನು ಮಕ್ಕಳು ಆಸ್ಪತ್ರೆಗೆ ಕರೆ ತರುತ್ತಿದ್ದರು. ಆದರೀಗ ತಂದೆ ತಾಯಿಯೇ ಅವರ ಮಕ್ಕಳನ್ನು ಚಿಕಿತ್ಸೆಗೆ ಕರೆತರುವ ಪರಿಸ್ಥಿತಿ ನಿರ್ಮಾಣವಾಗಿದೆ. ಜನರ ಜೀವನ ಶೈಲಿ ಬದಲಾಗಿದ್ದು, ಇದಕ್ಕೆ ನಗರ ಪಟ್ಟಣಗಳು, ಹಳ್ಳಿಗಳು ಹೊರತಾಗಿಲ್ಲ. ಯುವ ಭಾರತೀಯರ, ಮಧ್ಯ ವಯಸ್ಕರ ಹೃದಯದ ಆರೋಗ್ಯ ಚೆನ್ನಾಗಿಲ್ಲ. ಹೃದ್ರೋಗಕ್ಕೆ ತುತ್ತಾಗುತ್ತಿರುವ ವಯಸ್ಕರಲ್ಲಿ ಶೇಕಡ 50 ರಷ್ಟು ಧೂಮಪಾನಿಗಳಾಗಿರುತ್ತಾರೆ. ಕೆಲವರಿಗೆ ಅನುವಂಶೀಯವಾಗಿಯೂ ಹೃದಯಾಘಾತ ಆಗುವ ಸಂಭವವಿದೆ. ಅಂತಹ ಕುಟುಂಬ ಸದಸ್ಯರು ಎಚ್ಚರಿಕೆ ವಹಿಸಬೇಕು. ಬದಲಾದ ಜೀವನ ಶೈಲಿಯಿಂದಾಗಿ ಅತಿಯಾದ ಒತ್ತಡದಿಂದ ಹೃದಯಾಘಾತ ಸಂಭವಿಸುತ್ತಿದೆ ಎಂದು ಮಂಜುನಾಥ್ ಹೇಳಿದರು.
ವಾಯುಮಾಲಿನ್ಯ ಕೂಡ ಹೃದಯಾಘಾತಕ್ಕೆ ಕಾರಣವಾಗುತ್ತಿದೆ. ವಾಹನಗಳು ಹೊರಸೂಸುವ ಹೊಗೆ, ಕಾರ್ಖಾನೆಗಳು ಹೊರಸೂಸುವ ಹೊಗೆಯಿಂದಾಗಿ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ. ಮಾಲಿನ್ಯವಾದ ಗಾಳಿಯನ್ನು ಉಸಿರಾಡುವುದರಿಂದ ಹೃದಯಾಘಾತಕ್ಕೆ ಕಾರಣವಾಗುತ್ತಿದೆ ಎಂದು ಹೇಳಿದರು. ಹೃದಯಾಘಾತ ಸಂಭವಿಸಿದಾಗ ತಡ ಮಾಡದೇ ಚಿಕಿತ್ಸೆ ಪಡೆಯಬೇಕು. ಮೂವತ್ತು ನಿಮಿಷ ತಡಮಾಡಿದರೆ ಸಾವಿನ ಪ್ರಮಾಣ 7% ಹೆಚ್ಚುತ್ತಾ ಹೋಗುತ್ತದೆ. ಕೂಡಲೇ ಪ್ರಾಥಮಿಕ ಚಿಕಿತ್ಸೆ ಪಡೆಯುವುದರಿಂದ ಸಾವನ್ನು ತಡೆಯಬಹುದು. 35 ವರ್ಷ ದಾಟಿದ ಪುರುಷರು, 45 ವರ್ಷ ದಾಟಿದ ಮಹಿಳೆಯರು ಸಕಾಲಕ್ಕೆ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಡಾ. ಮಂಜುನಾಥ್ ಸಲಹೆ ನೀಡಿದ್ದಾರೆ.
Actor Puneeth Rajkumar death of heart attack was due to family heredity issue says cardiologist doctor
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm