ಬ್ರೇಕಿಂಗ್ ನ್ಯೂಸ್
09-09-22 02:49 pm HK News Desk ಕರ್ನಾಟಕ
ಮೈಸೂರು, ಸೆ.9 : ಖ್ಯಾತ ನಟ ಪುನೀತ್ ರಾಜಕುಮಾರ್ ಅನುವಂಶೀಯ ಕಾರಣಗಳಿಂದ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದರು. ಪುನೀತ್ ಸಹೋದರರಿಗೂ ಹೃದಯ ಸಂಬಂಧಿ ತೊಂದರೆಗಳಿವೆ. ರಾಘವೇಂದ್ರ, ಶಿವರಾಜಕುಮಾರ್ ಅವರಿಗೂ ಹೃದಯ ತೊಂದರೆಗಳಿವೆ. ಹಾಗಾಗಿ ಪುನೀತ್ ಸಾವಿಗೆ ಅನುವಂಶೀಯ ಹಿನ್ನೆಲೆಯೇ ಕಾರಣ ಎಂದು ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ, ಖ್ಯಾತ ಹೃದಯ ತಜ್ಞ ಡಾ.ಸಿ.ಎನ್ ಮಂಜುನಾಥ್ ಹೇಳಿದ್ದಾರೆ.
ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪುನೀತ್ ರಾಜ್ಕುಮಾರ್ ಸಾವಿನ ಬಗ್ಗೆ ಕೇಳಿದ ಪ್ರಶ್ನೆಗೆ, ಕುಟುಂಬದ ಅನುವಂಶಿಕ ಹಿನ್ನೆಲೆಯೇ ಕಾರಣ ಎಂದು ಹೇಳಿದರು.

ನಮ್ಮ ದೇಶದಲ್ಲಿ 50% ಸಾವುಗಳು ಹೃದಯಾಘಾತ, ಹೃದಯ ಸಂಬಂಧಿ ಕಾಯಿಲೆ, ಸಕ್ಕರೆ ಕಾಯಿಲೆ, ಅಧಿಕ ರಕ್ತದೊತ್ತಡ, ಕ್ಯಾನ್ಸರ್ ರೋಗದಿಂದ ಸಂಭವಿಸುತ್ತಿದೆ. ಇದರ ಜೊತೆಗೆ ಇತ್ತೀಚಿನ ದಿನಗಳಲ್ಲಿ ಒಂಟಿತನದಿಂದ ಸಾವನ್ನಪ್ಪುವವರ ಸಂಖ್ಯೆಯೂ ಹೆಚ್ಚುತ್ತಿದೆ. ಮೊಬೈಲ್, ಟಿವಿ ಗೀಳಿಗೆ ಅಂಟಿಕೊಂಡು ಬಹುಬೇಗನೆ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಮೊದಲೆಲ್ಲಾ ವಯಸ್ಸಾದ ತಂದೆ ತಾಯಿಯರನ್ನು ಮಕ್ಕಳು ಆಸ್ಪತ್ರೆಗೆ ಕರೆ ತರುತ್ತಿದ್ದರು. ಆದರೀಗ ತಂದೆ ತಾಯಿಯೇ ಅವರ ಮಕ್ಕಳನ್ನು ಚಿಕಿತ್ಸೆಗೆ ಕರೆತರುವ ಪರಿಸ್ಥಿತಿ ನಿರ್ಮಾಣವಾಗಿದೆ. ಜನರ ಜೀವನ ಶೈಲಿ ಬದಲಾಗಿದ್ದು, ಇದಕ್ಕೆ ನಗರ ಪಟ್ಟಣಗಳು, ಹಳ್ಳಿಗಳು ಹೊರತಾಗಿಲ್ಲ. ಯುವ ಭಾರತೀಯರ, ಮಧ್ಯ ವಯಸ್ಕರ ಹೃದಯದ ಆರೋಗ್ಯ ಚೆನ್ನಾಗಿಲ್ಲ. ಹೃದ್ರೋಗಕ್ಕೆ ತುತ್ತಾಗುತ್ತಿರುವ ವಯಸ್ಕರಲ್ಲಿ ಶೇಕಡ 50 ರಷ್ಟು ಧೂಮಪಾನಿಗಳಾಗಿರುತ್ತಾರೆ. ಕೆಲವರಿಗೆ ಅನುವಂಶೀಯವಾಗಿಯೂ ಹೃದಯಾಘಾತ ಆಗುವ ಸಂಭವವಿದೆ. ಅಂತಹ ಕುಟುಂಬ ಸದಸ್ಯರು ಎಚ್ಚರಿಕೆ ವಹಿಸಬೇಕು. ಬದಲಾದ ಜೀವನ ಶೈಲಿಯಿಂದಾಗಿ ಅತಿಯಾದ ಒತ್ತಡದಿಂದ ಹೃದಯಾಘಾತ ಸಂಭವಿಸುತ್ತಿದೆ ಎಂದು ಮಂಜುನಾಥ್ ಹೇಳಿದರು.
ವಾಯುಮಾಲಿನ್ಯ ಕೂಡ ಹೃದಯಾಘಾತಕ್ಕೆ ಕಾರಣವಾಗುತ್ತಿದೆ. ವಾಹನಗಳು ಹೊರಸೂಸುವ ಹೊಗೆ, ಕಾರ್ಖಾನೆಗಳು ಹೊರಸೂಸುವ ಹೊಗೆಯಿಂದಾಗಿ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ. ಮಾಲಿನ್ಯವಾದ ಗಾಳಿಯನ್ನು ಉಸಿರಾಡುವುದರಿಂದ ಹೃದಯಾಘಾತಕ್ಕೆ ಕಾರಣವಾಗುತ್ತಿದೆ ಎಂದು ಹೇಳಿದರು. ಹೃದಯಾಘಾತ ಸಂಭವಿಸಿದಾಗ ತಡ ಮಾಡದೇ ಚಿಕಿತ್ಸೆ ಪಡೆಯಬೇಕು. ಮೂವತ್ತು ನಿಮಿಷ ತಡಮಾಡಿದರೆ ಸಾವಿನ ಪ್ರಮಾಣ 7% ಹೆಚ್ಚುತ್ತಾ ಹೋಗುತ್ತದೆ. ಕೂಡಲೇ ಪ್ರಾಥಮಿಕ ಚಿಕಿತ್ಸೆ ಪಡೆಯುವುದರಿಂದ ಸಾವನ್ನು ತಡೆಯಬಹುದು. 35 ವರ್ಷ ದಾಟಿದ ಪುರುಷರು, 45 ವರ್ಷ ದಾಟಿದ ಮಹಿಳೆಯರು ಸಕಾಲಕ್ಕೆ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಡಾ. ಮಂಜುನಾಥ್ ಸಲಹೆ ನೀಡಿದ್ದಾರೆ.
Actor Puneeth Rajkumar death of heart attack was due to family heredity issue says cardiologist doctor
25-12-25 12:12 pm
HK News Desk
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
MLA Byrathi Basavaraj, Bikklu Shiva Murder Ca...
24-12-25 04:07 pm
ಗಾಳಿಯಲ್ಲಿ ಗುಂಡು ಹಾರಿಸಿ ಉಡಚಣ ಸ್ವಾಮೀಜಿ ರಂಪಾಟ ;...
22-12-25 11:09 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm