ಬ್ರೇಕಿಂಗ್ ನ್ಯೂಸ್
09-09-22 02:49 pm HK News Desk ಕರ್ನಾಟಕ
ಮೈಸೂರು, ಸೆ.9 : ಖ್ಯಾತ ನಟ ಪುನೀತ್ ರಾಜಕುಮಾರ್ ಅನುವಂಶೀಯ ಕಾರಣಗಳಿಂದ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದರು. ಪುನೀತ್ ಸಹೋದರರಿಗೂ ಹೃದಯ ಸಂಬಂಧಿ ತೊಂದರೆಗಳಿವೆ. ರಾಘವೇಂದ್ರ, ಶಿವರಾಜಕುಮಾರ್ ಅವರಿಗೂ ಹೃದಯ ತೊಂದರೆಗಳಿವೆ. ಹಾಗಾಗಿ ಪುನೀತ್ ಸಾವಿಗೆ ಅನುವಂಶೀಯ ಹಿನ್ನೆಲೆಯೇ ಕಾರಣ ಎಂದು ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ, ಖ್ಯಾತ ಹೃದಯ ತಜ್ಞ ಡಾ.ಸಿ.ಎನ್ ಮಂಜುನಾಥ್ ಹೇಳಿದ್ದಾರೆ.
ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪುನೀತ್ ರಾಜ್ಕುಮಾರ್ ಸಾವಿನ ಬಗ್ಗೆ ಕೇಳಿದ ಪ್ರಶ್ನೆಗೆ, ಕುಟುಂಬದ ಅನುವಂಶಿಕ ಹಿನ್ನೆಲೆಯೇ ಕಾರಣ ಎಂದು ಹೇಳಿದರು.

ನಮ್ಮ ದೇಶದಲ್ಲಿ 50% ಸಾವುಗಳು ಹೃದಯಾಘಾತ, ಹೃದಯ ಸಂಬಂಧಿ ಕಾಯಿಲೆ, ಸಕ್ಕರೆ ಕಾಯಿಲೆ, ಅಧಿಕ ರಕ್ತದೊತ್ತಡ, ಕ್ಯಾನ್ಸರ್ ರೋಗದಿಂದ ಸಂಭವಿಸುತ್ತಿದೆ. ಇದರ ಜೊತೆಗೆ ಇತ್ತೀಚಿನ ದಿನಗಳಲ್ಲಿ ಒಂಟಿತನದಿಂದ ಸಾವನ್ನಪ್ಪುವವರ ಸಂಖ್ಯೆಯೂ ಹೆಚ್ಚುತ್ತಿದೆ. ಮೊಬೈಲ್, ಟಿವಿ ಗೀಳಿಗೆ ಅಂಟಿಕೊಂಡು ಬಹುಬೇಗನೆ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಮೊದಲೆಲ್ಲಾ ವಯಸ್ಸಾದ ತಂದೆ ತಾಯಿಯರನ್ನು ಮಕ್ಕಳು ಆಸ್ಪತ್ರೆಗೆ ಕರೆ ತರುತ್ತಿದ್ದರು. ಆದರೀಗ ತಂದೆ ತಾಯಿಯೇ ಅವರ ಮಕ್ಕಳನ್ನು ಚಿಕಿತ್ಸೆಗೆ ಕರೆತರುವ ಪರಿಸ್ಥಿತಿ ನಿರ್ಮಾಣವಾಗಿದೆ. ಜನರ ಜೀವನ ಶೈಲಿ ಬದಲಾಗಿದ್ದು, ಇದಕ್ಕೆ ನಗರ ಪಟ್ಟಣಗಳು, ಹಳ್ಳಿಗಳು ಹೊರತಾಗಿಲ್ಲ. ಯುವ ಭಾರತೀಯರ, ಮಧ್ಯ ವಯಸ್ಕರ ಹೃದಯದ ಆರೋಗ್ಯ ಚೆನ್ನಾಗಿಲ್ಲ. ಹೃದ್ರೋಗಕ್ಕೆ ತುತ್ತಾಗುತ್ತಿರುವ ವಯಸ್ಕರಲ್ಲಿ ಶೇಕಡ 50 ರಷ್ಟು ಧೂಮಪಾನಿಗಳಾಗಿರುತ್ತಾರೆ. ಕೆಲವರಿಗೆ ಅನುವಂಶೀಯವಾಗಿಯೂ ಹೃದಯಾಘಾತ ಆಗುವ ಸಂಭವವಿದೆ. ಅಂತಹ ಕುಟುಂಬ ಸದಸ್ಯರು ಎಚ್ಚರಿಕೆ ವಹಿಸಬೇಕು. ಬದಲಾದ ಜೀವನ ಶೈಲಿಯಿಂದಾಗಿ ಅತಿಯಾದ ಒತ್ತಡದಿಂದ ಹೃದಯಾಘಾತ ಸಂಭವಿಸುತ್ತಿದೆ ಎಂದು ಮಂಜುನಾಥ್ ಹೇಳಿದರು.
ವಾಯುಮಾಲಿನ್ಯ ಕೂಡ ಹೃದಯಾಘಾತಕ್ಕೆ ಕಾರಣವಾಗುತ್ತಿದೆ. ವಾಹನಗಳು ಹೊರಸೂಸುವ ಹೊಗೆ, ಕಾರ್ಖಾನೆಗಳು ಹೊರಸೂಸುವ ಹೊಗೆಯಿಂದಾಗಿ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ. ಮಾಲಿನ್ಯವಾದ ಗಾಳಿಯನ್ನು ಉಸಿರಾಡುವುದರಿಂದ ಹೃದಯಾಘಾತಕ್ಕೆ ಕಾರಣವಾಗುತ್ತಿದೆ ಎಂದು ಹೇಳಿದರು. ಹೃದಯಾಘಾತ ಸಂಭವಿಸಿದಾಗ ತಡ ಮಾಡದೇ ಚಿಕಿತ್ಸೆ ಪಡೆಯಬೇಕು. ಮೂವತ್ತು ನಿಮಿಷ ತಡಮಾಡಿದರೆ ಸಾವಿನ ಪ್ರಮಾಣ 7% ಹೆಚ್ಚುತ್ತಾ ಹೋಗುತ್ತದೆ. ಕೂಡಲೇ ಪ್ರಾಥಮಿಕ ಚಿಕಿತ್ಸೆ ಪಡೆಯುವುದರಿಂದ ಸಾವನ್ನು ತಡೆಯಬಹುದು. 35 ವರ್ಷ ದಾಟಿದ ಪುರುಷರು, 45 ವರ್ಷ ದಾಟಿದ ಮಹಿಳೆಯರು ಸಕಾಲಕ್ಕೆ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಡಾ. ಮಂಜುನಾಥ್ ಸಲಹೆ ನೀಡಿದ್ದಾರೆ.
Actor Puneeth Rajkumar death of heart attack was due to family heredity issue says cardiologist doctor
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm